AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳ ವೀರನ ‘ಮಿಂಚಿನ ಓಟ’.. SAI ಸಂಪರ್ಕಕ್ಕೆ ಸೂಚಿಸಿದ ಕೇಂದ್ರ ಕ್ರೀಡಾ ಸಚಿವ

ದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಜನಪ್ರಿಯವಾಗಿರುವ ಕಂಬಳ ಕ್ರೀಡೆಯಲ್ಲಿ ಮಿಂಚಿನ ವೇಗದಲ್ಲಿ ಕೋಣ ಓಡಿಸುವ ಮೂಲಕ ದಕ್ಷಿಣ ಕನ್ನಡದ ಶ್ರೀನಿವಾಸಗೌಡ‌‌ ರಾಷ್ಟ್ರ ಮಟ್ಟದ ಗಮನ ಸೆಳೆದಿದ್ದಾರೆ. ಈ ಮೂಲಕ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್​ ದಾಖಲೆಗಳನ್ನು ಮುರಿದಿದ್ದಾರೆ. ಇದನ್ನೂ ಓದಿ: ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ! ಇದೀಗ ಕಂಬಳ ಓಟಗಾರ ಶ್ರೀನಿವಾಸಗೌಡ‌ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಗಮನ ಸೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿರಣ್ […]

ಕಂಬಳ ವೀರನ ‘ಮಿಂಚಿನ ಓಟ’.. SAI ಸಂಪರ್ಕಕ್ಕೆ ಸೂಚಿಸಿದ ಕೇಂದ್ರ ಕ್ರೀಡಾ ಸಚಿವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 18, 2020 | 11:12 AM

Share

ದೆಹಲಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಜನಪ್ರಿಯವಾಗಿರುವ ಕಂಬಳ ಕ್ರೀಡೆಯಲ್ಲಿ ಮಿಂಚಿನ ವೇಗದಲ್ಲಿ ಕೋಣ ಓಡಿಸುವ ಮೂಲಕ ದಕ್ಷಿಣ ಕನ್ನಡದ ಶ್ರೀನಿವಾಸಗೌಡ‌‌ ರಾಷ್ಟ್ರ ಮಟ್ಟದ ಗಮನ ಸೆಳೆದಿದ್ದಾರೆ. ಈ ಮೂಲಕ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್​ ದಾಖಲೆಗಳನ್ನು ಮುರಿದಿದ್ದಾರೆ.

ಇದನ್ನೂ ಓದಿ: ಜಗತ್ತಿನ ವೇಗದ ಓಟಗಾರ ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ವೀರ!

ಇದೀಗ ಕಂಬಳ ಓಟಗಾರ ಶ್ರೀನಿವಾಸಗೌಡ‌ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಗಮನ ಸೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಿರಣ್ ರಿಜಿಜು, ಶ್ರೀನಿವಾಸಗೌಡಗೆ ಕ್ರೀಡಾ ಪ್ರಾಧಿಕಾರದ ಕೋಚ್​ಗಳಿಂದ ಕೋಚಿಂಗ್ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಒಲಿಂಪಿಕ್ ಕ್ರೀಡೆಗಳ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ಇರುವುದಿಲ್ಲ. ದೇಶದಲ್ಲಿ ಪ್ರತಿಭಾವಂತರು ಅವಕಾಶ ಸಿಗದೇ ವಂಚಿತರಾಗಬಾರದು. ಹೀಗಾಗಿ ಶ್ರೀನಿವಾಸಗೌಡ ಸಾಮರ್ಥ್ಯ ಪರೀಕ್ಷೆಗೆ ಕೇಂದ್ರ ಕ್ರೀಡಾ ಇಲಾಖೆ ಮುಂದಾಗಿದೆ.

ಶ್ರೀನಿವಾಸ ಗೌಡರನ್ನು ಸಂಪರ್ಕಿಸಿದ SAI ಅಧಿಕಾರಿಗಳು: ಉನ್ನತ ರಾಷ್ಟ್ರೀಯ ತರಬೇತುದಾರರು ಶ್ರೀನಿವಾಸ ಗೌಡರ ಸಾಮರ್ಥ್ಯ ಪರೀಕ್ಷೆ ನಡೆಸಲಿದ್ದಾರೆ. ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ, ಭರವಸೆ ನೀಡುತ್ತಿದ್ದಂತೆ ಶ್ರೀನಿವಾಸ ಗೌಡ ಅವರಿಗೆ ರೈಲ್ವೇ ಟಿಕೆಟ್ ಕೂಡಾ ಬುಕ್ ಮಾಡಲಾಗಿದೆ, ಸೋಮವಾರ ಅವರು ಸಾಯಿ ಕೇಂದ್ರವನ್ನು ತಲುಪಲಿದ್ದಾರೆ ಎಂದು ಮೂಲಗಳು ಹೇಳಿವೆ.

ಟ್ವೀಟ್ ಮೂಲಕ ಶ್ರೀನಿವಾಸ ಗೌಡ ಸಾಧನೆಯನ್ನು ಕೇಂದ್ರ ಕ್ರೀಡಾ ಸಚಿವರ ಗಮನಕ್ಕೆ ಮಹೀಂದ್ರಾ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ತಂದಿದ್ದರು.

Published On - 1:25 pm, Sat, 15 February 20

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ