AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ

ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ ಶಾಸಕ ಪ್ರಶಸ್ತಿ ಲಭಿಸಿದೆ.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ
ಮಾಜಿ ಸಚಿವ ಎಸ್​ ಆರ್​ ಪಾಟೀಲ್​
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on: Jul 16, 2023 | 10:32 AM

Share

ಬಾಗಲಕೋಟ: ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್ (SR Patil)​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ (Vidhan Parishad) ಶಾಸಕ (MLA) ಪ್ರಶಸ್ತಿ ಘೋಷಣೆಯಾಗಿದೆ. ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಆಹ್ವಾನ ‌ನೀಡಿ ಎಸ್​.ಆರ್​. ಪಾಟೀಲ್​ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್​ ಅವರು ಪತ್ರ ಬರೆದಿದ್ದಾರೆ.

ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿದ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾಮನಿರ್ದೇಶಿತ ಎಂಎಲ್‌ಸಿಗಳ ಆಯ್ಕೆ ಕಗ್ಗಂಟು: ಬಹಿರಂಗ ಪತ್ರ ವೈರಲ್

ಇವರು ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್​ ಸಿಗಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಎಸ್​ ಆರ್​ ಪಾಟೀಲ್​ ಈಚಿನ ದಿನಗಳಲ್ಲಿ ನನಗೆ ಆರಿ ಬಾರಿ ವಿವಿಧ ಹಂತದ ಅವಕಾಶ ಕೈತಪ್ಪಿದವು. ಆದರೂ, ನಾನು ಮೌನವಾಗಿದ್ದೆ. ನನಗೆ ಸಿಗಬೇಕಾದ ಅವಕಾಶ ವಂಚಿತನಾಗುವಲ್ಲಿ ಧರ್ಮ ವಿಭಜಕರ ಕೈ ಮೇಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.

ಇದಾದ ನಂತರ ಎಂಎಲ್​ಸಿ ಟಿಕೆಟ್ ಸಹ ಕೈ ತಪ್ಪಿದೆ. ಈ ಮೂಲಕ ಕಾಂಗ್ರೆಸ್​ ಎಸ್​ ಆರ್​ ಪಾಟೀಲ್​ ಅವರನ್ನು ಕಡೆಗಣನೆ ಮಾಡಿದೆ ಎಂಬ ಅನುಮಾನ ಜನರಲ್ಲಿ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ