AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ

ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ ಶಾಸಕ ಪ್ರಶಸ್ತಿ ಲಭಿಸಿದೆ.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ
ಮಾಜಿ ಸಚಿವ ಎಸ್​ ಆರ್​ ಪಾಟೀಲ್​
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on: Jul 16, 2023 | 10:32 AM

Share

ಬಾಗಲಕೋಟ: ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್ (SR Patil)​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ (Vidhan Parishad) ಶಾಸಕ (MLA) ಪ್ರಶಸ್ತಿ ಘೋಷಣೆಯಾಗಿದೆ. ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಆಹ್ವಾನ ‌ನೀಡಿ ಎಸ್​.ಆರ್​. ಪಾಟೀಲ್​ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್​ ಅವರು ಪತ್ರ ಬರೆದಿದ್ದಾರೆ.

ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿದ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾಮನಿರ್ದೇಶಿತ ಎಂಎಲ್‌ಸಿಗಳ ಆಯ್ಕೆ ಕಗ್ಗಂಟು: ಬಹಿರಂಗ ಪತ್ರ ವೈರಲ್

ಇವರು ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್​ ಸಿಗಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಎಸ್​ ಆರ್​ ಪಾಟೀಲ್​ ಈಚಿನ ದಿನಗಳಲ್ಲಿ ನನಗೆ ಆರಿ ಬಾರಿ ವಿವಿಧ ಹಂತದ ಅವಕಾಶ ಕೈತಪ್ಪಿದವು. ಆದರೂ, ನಾನು ಮೌನವಾಗಿದ್ದೆ. ನನಗೆ ಸಿಗಬೇಕಾದ ಅವಕಾಶ ವಂಚಿತನಾಗುವಲ್ಲಿ ಧರ್ಮ ವಿಭಜಕರ ಕೈ ಮೇಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.

ಇದಾದ ನಂತರ ಎಂಎಲ್​ಸಿ ಟಿಕೆಟ್ ಸಹ ಕೈ ತಪ್ಪಿದೆ. ಈ ಮೂಲಕ ಕಾಂಗ್ರೆಸ್​ ಎಸ್​ ಆರ್​ ಪಾಟೀಲ್​ ಅವರನ್ನು ಕಡೆಗಣನೆ ಮಾಡಿದೆ ಎಂಬ ಅನುಮಾನ ಜನರಲ್ಲಿ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು