AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ

ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ ಶಾಸಕ ಪ್ರಶಸ್ತಿ ಲಭಿಸಿದೆ.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ
ಮಾಜಿ ಸಚಿವ ಎಸ್​ ಆರ್​ ಪಾಟೀಲ್​
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jul 16, 2023 | 10:32 AM

Share

ಬಾಗಲಕೋಟ: ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್ (SR Patil)​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ (Vidhan Parishad) ಶಾಸಕ (MLA) ಪ್ರಶಸ್ತಿ ಘೋಷಣೆಯಾಗಿದೆ. ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಆಹ್ವಾನ ‌ನೀಡಿ ಎಸ್​.ಆರ್​. ಪಾಟೀಲ್​ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್​ ಅವರು ಪತ್ರ ಬರೆದಿದ್ದಾರೆ.

ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿದ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾಮನಿರ್ದೇಶಿತ ಎಂಎಲ್‌ಸಿಗಳ ಆಯ್ಕೆ ಕಗ್ಗಂಟು: ಬಹಿರಂಗ ಪತ್ರ ವೈರಲ್

ಇವರು ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್​ ಸಿಗಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಎಸ್​ ಆರ್​ ಪಾಟೀಲ್​ ಈಚಿನ ದಿನಗಳಲ್ಲಿ ನನಗೆ ಆರಿ ಬಾರಿ ವಿವಿಧ ಹಂತದ ಅವಕಾಶ ಕೈತಪ್ಪಿದವು. ಆದರೂ, ನಾನು ಮೌನವಾಗಿದ್ದೆ. ನನಗೆ ಸಿಗಬೇಕಾದ ಅವಕಾಶ ವಂಚಿತನಾಗುವಲ್ಲಿ ಧರ್ಮ ವಿಭಜಕರ ಕೈ ಮೇಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.

ಇದಾದ ನಂತರ ಎಂಎಲ್​ಸಿ ಟಿಕೆಟ್ ಸಹ ಕೈ ತಪ್ಪಿದೆ. ಈ ಮೂಲಕ ಕಾಂಗ್ರೆಸ್​ ಎಸ್​ ಆರ್​ ಪಾಟೀಲ್​ ಅವರನ್ನು ಕಡೆಗಣನೆ ಮಾಡಿದೆ ಎಂಬ ಅನುಮಾನ ಜನರಲ್ಲಿ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?