AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ

ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ ಶಾಸಕ ಪ್ರಶಸ್ತಿ ಲಭಿಸಿದೆ.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ
ಮಾಜಿ ಸಚಿವ ಎಸ್​ ಆರ್​ ಪಾಟೀಲ್​
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on: Jul 16, 2023 | 10:32 AM

ಬಾಗಲಕೋಟ: ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್ (SR Patil)​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ (Vidhan Parishad) ಶಾಸಕ (MLA) ಪ್ರಶಸ್ತಿ ಘೋಷಣೆಯಾಗಿದೆ. ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಆಹ್ವಾನ ‌ನೀಡಿ ಎಸ್​.ಆರ್​. ಪಾಟೀಲ್​ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್​ ಅವರು ಪತ್ರ ಬರೆದಿದ್ದಾರೆ.

ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿದ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾಮನಿರ್ದೇಶಿತ ಎಂಎಲ್‌ಸಿಗಳ ಆಯ್ಕೆ ಕಗ್ಗಂಟು: ಬಹಿರಂಗ ಪತ್ರ ವೈರಲ್

ಇವರು ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್​ ಸಿಗಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಎಸ್​ ಆರ್​ ಪಾಟೀಲ್​ ಈಚಿನ ದಿನಗಳಲ್ಲಿ ನನಗೆ ಆರಿ ಬಾರಿ ವಿವಿಧ ಹಂತದ ಅವಕಾಶ ಕೈತಪ್ಪಿದವು. ಆದರೂ, ನಾನು ಮೌನವಾಗಿದ್ದೆ. ನನಗೆ ಸಿಗಬೇಕಾದ ಅವಕಾಶ ವಂಚಿತನಾಗುವಲ್ಲಿ ಧರ್ಮ ವಿಭಜಕರ ಕೈ ಮೇಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.

ಇದಾದ ನಂತರ ಎಂಎಲ್​ಸಿ ಟಿಕೆಟ್ ಸಹ ಕೈ ತಪ್ಪಿದೆ. ಈ ಮೂಲಕ ಕಾಂಗ್ರೆಸ್​ ಎಸ್​ ಆರ್​ ಪಾಟೀಲ್​ ಅವರನ್ನು ಕಡೆಗಣನೆ ಮಾಡಿದೆ ಎಂಬ ಅನುಮಾನ ಜನರಲ್ಲಿ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ