ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ

ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ ಶಾಸಕ ಪ್ರಶಸ್ತಿ ಲಭಿಸಿದೆ.

ಮಾಜಿ‌ ಸಚಿವ ಎಸ್​ಆರ್​​ ಪಾಟೀಲ್​ಗೆ ಪರಿಷತ್ ಅತ್ಯುತ್ತಮ ಶಾಸಕ ಪ್ರಶಸ್ತಿ
ಮಾಜಿ ಸಚಿವ ಎಸ್​ ಆರ್​ ಪಾಟೀಲ್​
Edited By: ವಿವೇಕ ಬಿರಾದಾರ

Updated on: Jul 16, 2023 | 10:32 AM

ಬಾಗಲಕೋಟ: ಸಜ್ಜನ ಹಿರಿಯ ರಾಜಕಾರಣಿ ಮಾಜಿ‌ ಸಚಿವ ಎಸ್​.ಆರ್​​.ಪಾಟೀಲ್ (SR Patil)​ ಅವರಿಗೆ 2021ನೇ ಸಾಲಿನ ಅತ್ಯುತ್ತಮ ‌ಪರಿಷತ್ (Vidhan Parishad) ಶಾಸಕ (MLA) ಪ್ರಶಸ್ತಿ ಘೋಷಣೆಯಾಗಿದೆ. ಜು. 18ರಂದು ಸಂಜೆ 6 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ. ಪ್ರಶಸ್ತಿ ಸ್ವೀಕರಿಸಲು ಆಹ್ವಾನ ‌ನೀಡಿ ಎಸ್​.ಆರ್​. ಪಾಟೀಲ್​ ಅವರಿಗೆ ವಿಧಾನಪರಿಷತ್ ಕಾರ್ಯದರ್ಶಿ ಮೀನಾ ನಾಯಕ್​ ಅವರು ಪತ್ರ ಬರೆದಿದ್ದಾರೆ.

ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ಮೇಲ್ಮನೆ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿದ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ನಾಮನಿರ್ದೇಶಿತ ಎಂಎಲ್‌ಸಿಗಳ ಆಯ್ಕೆ ಕಗ್ಗಂಟು: ಬಹಿರಂಗ ಪತ್ರ ವೈರಲ್

ಇವರು ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್​ ಸಿಗಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಎಸ್​ ಆರ್​ ಪಾಟೀಲ್​ ಈಚಿನ ದಿನಗಳಲ್ಲಿ ನನಗೆ ಆರಿ ಬಾರಿ ವಿವಿಧ ಹಂತದ ಅವಕಾಶ ಕೈತಪ್ಪಿದವು. ಆದರೂ, ನಾನು ಮೌನವಾಗಿದ್ದೆ. ನನಗೆ ಸಿಗಬೇಕಾದ ಅವಕಾಶ ವಂಚಿತನಾಗುವಲ್ಲಿ ಧರ್ಮ ವಿಭಜಕರ ಕೈ ಮೇಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.

ಇದಾದ ನಂತರ ಎಂಎಲ್​ಸಿ ಟಿಕೆಟ್ ಸಹ ಕೈ ತಪ್ಪಿದೆ. ಈ ಮೂಲಕ ಕಾಂಗ್ರೆಸ್​ ಎಸ್​ ಆರ್​ ಪಾಟೀಲ್​ ಅವರನ್ನು ಕಡೆಗಣನೆ ಮಾಡಿದೆ ಎಂಬ ಅನುಮಾನ ಜನರಲ್ಲಿ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us