AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮಸೇನೆ ಖಂಡನೆ; ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತದಿಂದ ಓಡಿಸಲು ಪ್ಲಾನ್

ಬಾಂಗ್ಲಾದಲ್ಲಿ ಹೊತ್ತಿಕೊಂಡಿರುವ ಆಂತರಿಕ ಮೀಸಲಾತಿ ಕಿಚ್ಚು ಧಗ ಧಗಿಸ್ತಿದೆ. ಹಿಂಸಾಚಾರ ತಾಂಡವವಾಡ್ತಿದೆ. ಆದರೆ ಕೆಲ ಹಿಂದೂಗಳನ್ನೆ ಟಾರ್ಗಟ್ ಮಾಡಿಕೊಂಡಿರುವ ಕಿಡಿಗೇಡಿಗಳು ಚಿತ್ರಹಿಂಸೆ ನೀಡ್ತಿದ್ದಾರೆ. ಇದು ಭಾರತೀಯ ಹಿಂದೂ ಮುಖಂಡರ ರಕ್ತ ಕುದಿಯುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿರುವ ಅಕ್ರಮ ಬಾಂಗ್ಲಾ ಮುಸ್ಲಿಮರ ವಿರುದ್ಧ ಸಮರ ಸಾರಿದ್ದಾರೆ.

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಶ್ರೀರಾಮಸೇನೆ ಖಂಡನೆ; ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತದಿಂದ ಓಡಿಸಲು ಪ್ಲಾನ್
ಪ್ರಮೋದ್ ಮುತಾಲಿಕ್
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 13, 2024 | 9:08 AM

Share

ಬೆಂಗಳೂರು, ಆಗಸ್ಟ್​.13: ಬಾಂಗ್ಲಾದಲ್ಲಿ(Bangladesh Violence) ಸಂಭವಿಸಿದ ಆಂತರಿಕ ಮೀಸಲಾತಿ ಕಿಚ್ಚು ಇಡೀ ದೇಶವನ್ನೇ ಸುಡ್ತಿದೆ. ಪ್ರಧಾನಿ ಮನೆಯನ್ನೇ ಧ್ವಂಸ ಮಾಡಿದ ಕಿಡಿಗೇಡಿಗಳು ಕಂಡ ಕಂಡಲ್ಲಿ ಕೇಕೆ ಹಾಕ್ತಿದ್ದಾರೆ. ಇದರ ನಡುವೆ ಹಿಂದೂ ಕುಟುಂಬಗಳನ್ನೇ ಟಾರ್ಗೆಟ್ ಮಾಡಿಕೊಂಡಿರೋ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಇದು ಹಿಂದೂ ಸಮಾಜದವರ ರಕ್ತ ಕುದಿಯುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿರುವ ಅಕ್ರಮ‌ ಬಾಂಗ್ಲಾ ನುಸುಳುಕೋರರನ್ನು ಹೆಮ್ಮೆಟ್ಟಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ (B Dayanand) ಮನವಿ ಮಾಡಲಾಗಿದೆ.

ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ ನುಸುಳುಕೋರರು ನೆಲಸಿರುವ ಬಗ್ಗೆ ಈಗಾಗಲೇ ಪೊಲೀಸರಿಗೂ ಮಾಹಿತಿ ಇದೆ. ಹಾಗಾಗಿ ಅಕ್ರಮ ವಲಸಿಗರ ಮೇಲೆ ದಾಳಿ ಕೂಡ ನಡೆದು ಕೆಲವರನ್ನು ವಾಪಸ್ಸು ಕಳುಹಿಸಲಾಗಿದೆ. ಆದರೆ ಈಗ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆ ಹಾಗು ಹಿಂದೂಗಳ ಹತ್ಯೆಯಿಂದಾಗಿ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಚಾಮರಾಜಪೇಟೆಯಲ್ಲಿದ್ದಾರೆ ಒಂದು ಲಕ್ಷ ರೋಹಿಂಗ್ಯಾ ಮುಸ್ಲಿಮರು?

ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನ ಭೇಟಿ ಮಾಡಿ ನಗರದಲ್ಲಿ ಅಕ್ರಮವಾಗಿ ನೆಲಸಿರುವ ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ಬರ್ಮಾ‌ ರೋಹಿಂಗ್ಯಾ ಮುಸ್ಲಿಮರನ್ನು ಕರ್ನಾಟಕದಿಂದ ಕಳುಹಿಸಬೇಕು ಎಂದು ಆಗ್ರಹಿಸಿ ದೂರು ನೀಡಿದ್ದಾರೆ. ಅಷ್ಟೇ ಅಲ್ಲ ಬೆಂಗಳೂರಲ್ಲಿ 4 ರಿಂದ 5 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ರೋಹಿಂಗ್ಯಾ ಮುಸ್ಲಿಮರು ಇದ್ದಾರೆ. ಅದರ ಮಾಹಿತಿಯನ್ನು ನಾವೇ ಪೊಲೀಸರಿಗೆ ನೀಡ್ತಿವಿ ಎಂದು ಶ್ರೀರಾಮಸೇನೆ ಹೇಳಿದೆ.

ಇದನ್ನೂ ಓದಿ: ಇಂದು ಬಾಂಗ್ಲಾದೇಶದಲ್ಲಿ ಆಗುತ್ತಿರುವುದು 10 ವರ್ಷಗಳ ಹಿಂದೆ ಉಕ್ರೇನ್‌ನಲ್ಲಿ ಸಂಭವಿಸಿತ್ತು!

ಇನ್ನೂ ಇದೇ ಬಾಂಗ್ಲಾದಲ್ಲಿ ಮೀಸಲಾತಿ ವಿಚಾರಕ್ಕೆ ದಂಗೆ ನಡೀತಿದೆ. ಈ ವೇಳೆ ಹಿಂದೂಗಳ ಹತ್ಯೆ ಕೂಡ ಆಗ್ತಿದೆ. ದೇವಸ್ಥಾನಗಳ ಮೇಲೆ ಕೂಡ ದಾಳಿ ನಡೀತಿದೆ. ಅಂತಹ ರೋಹಿಂಗ್ಯಾಗಳನ್ನ ಇಲ್ಲಿ ಸ್ಥಾನ ನೀಡಲಾಗ್ತಿದೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ಎಂಪಿ. ಎಂಎಲ್​ಎ ಕ್ಷೇತ್ರದಲ್ಲಿ ರೋಹಿಂಗ್ಯಾ ಮುಸಲ್ಮಾನರಿಗೆ ಸ್ಥಳೀಯ ದಾಖಲಾತಿ ನೀಡಲಾಗ್ತಿದೆ. ಅಷ್ಟೆ ಅಲ್ಲದೆ ಚಾಮರಾಜಪೇಟೆಯಲ್ಲಿ ಒಟ್ಟು ಒಂದು ಲಕ್ಷ ರೋಹಿಂಗ್ಯಾ ಮುಸಲ್ಮಾನರಿದ್ದಾರೆಂದು ಆರೋಪ ಮಾಡಲಾಗಿದೆ. ಪೊಲೀಸರ ಮೇಲೆ ಆರೋಪ ಮಾಡಿರುವ ಪ್ರಮೋದ್ ಮುತಾಲಿಕ್ ಅವರು ಪೊಲೀಸರು ಪೋಸ್ಟಿಂಗ್ ಗೆಲ್ಲ ರಾಜಕಾರಣಿಗಳ ಜೊತೆ ಕೆಲಸ ಮಾಡಬಾರದು ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಪೊಲೀಸರು ಕ್ರಮ ಕೈಗೊಳ್ಳದೆ ಇದ್ದರೆ ನಾವೇ ಒದ್ದು ಓಡಿಸ್ತಿವಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸದ್ಯ ಈ ಹಿಂದೆ ಪೊಲೀಸ್ ಆಪರೇಷನ್​ನಲ್ಲಿ ಕೂಡ ಸಾಕಷ್ಟು ರೋಹಿಂಗ್ಯಾ ಮುಸಲ್ಮಾನರು ಅಕ್ರಮವಾಗಿ ನೆಲಸಿರುವುದು ಬೆಳಕಿಗೆ ಬಂದಿತ್ತು. ಇದೀಗ ಮತ್ತೆ ಅದೇ ವಿಚಾರ ಮುನ್ಮಲೆಗೆ ಬಂದಿದ್ದು ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆಂದ ಕಾದು ನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:07 am, Tue, 13 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್