AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಮೋದ್ ಮುತಾಲಿಕ್

ಬಿಜೆಪಿ ಹಿರಿಯರ ಜತೆ ಮೂರು ಸುತ್ತಿನ ಮಾತುಕತೆಯಾಗಿದೆ. ನನಗೆ ಟಿಕೆಟ್ ನೀಡುತ್ತಾರೆ ಎಂಬ ವಿಶ್ವಾಸವಿದೆ. ನಾನು ಪಕ್ಷೇತರನಾಗಿ ನಿಲ್ಲುವುದಿಲ್ಲ. ಟಿಕೆಟ್ ಸಿಗದಿದ್ದರೆ ಟಿಕೆಟ್ ಸಿಕ್ಕವರ ಪರ ಕೆಲಸ ಮಾಡುತ್ತೇನೆ.

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಮೋದ್ ಮುತಾಲಿಕ್
ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್
shruti hegde
| Edited By: |

Updated on: Mar 16, 2021 | 3:32 PM

Share

ಧಾರವಾಡ: ಬಿಜೆಪಿಯ ಹಿರಿಯರ ಜೊತೆ ಮೂರು ಸುತ್ತಿನ ಮಾತುಕತೆಯಾಗಿದೆ. ನನಗೆ ಟಿಕೆಟ್ ನೀಡುವ ಕುರಿತಂತೆ ಸಕಾರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ. ಇನ್ನೂ ಚುನಾವಣೆ ದಿನಾಂಕ ನಿಗದಿಯಾಗಿಲ್ಲ. ದಿನಾಂಕ ಘೋಷಣೆಯಾದ ಮೇಲೆ ಅಭ್ಯರ್ಥಿಗಳನ್ನು ಅಂತಿಮವಾಗಿ ಆಯ್ಕೆ ಮಾಡುತ್ತಾರೆ ಎಂದು ಶ್ರೀರಾಮಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ಬೆಳಗಾವಿ ಲೋಕಸಭೆ ಉಪಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿ ಧಾರವಾಡದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಪ್ರಮೋದ ಮುತಾಲಿಕ್, ಬಿಜೆಪಿ ಹಿರಿಯರ ಜತೆ ಮೂರು ಸುತ್ತಿನ ಮಾತುಕತೆಯಾಗಿದೆ. ನನಗೆ ಟಿಕೆಟ್ ನೀಡುತ್ತಾರೆ ಎಂಬ ವಿಶ್ವಾಸವಿದೆ. ನಾನು ಪಕ್ಷೇತರನಾಗಿ ನಿಲ್ಲುವುದಿಲ್ಲ. ಟಿಕೆಟ್ ಸಿಗದಿದ್ದರೆ ಟಿಕೆಟ್ ಸಿಕ್ಕವರ ಪರ ಕೆಲಸ ಮಾಡುತ್ತೇನೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಗೊತ್ತಿಲ್ಲ. ಯಾರಿಗೆ‌ ಟಿಕೆಟ್​ ಕೊಟ್ಟರೂ ಒಳ್ಳೆಯದೇ ಎಂದು ಮಾತನಾಡಿದ್ದಾರೆ.

ಕಳೆದ 40 ವರ್ಷಗಳಿಂದ ಮನೆ ಬಿಟ್ಟು ಹಿಂದುತ್ವ, ಸಮಾಜ ಎಂದು ಕೆಲಸ ಮಾಡುತ್ತಿದ್ದೇನೆ. ಈಗ ನನಗೆ 66 ವರ್ಷ ಆಗಿದೆ. ಇದು ಕೊನೆಯ ಪ್ರಯತ್ನ ಎಂದು ಟಿಕೆಟ್ ಕೇಳಿದ್ದೇನೆ. ಮೂರು ವರ್ಷ ಸೇವೆ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಧಾರವಾಡ ಜಿಲ್ಲಾಡಳಿತದಿಂದ ಟಗರು ಕಾಳಗ ನಿಷೇಧ ಹಿನ್ನೆಲೆಯಲ್ಲಿ ಪ್ರತಿಭಟನೆ ಜಿಲ್ಲಾಡಳಿತದಿಂದ ಟಗರು ಕಾಳಗ ನಿಷೇಧ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಪ್ರತಿಭಟನೆ ಕೈಗೊಂಡಿದೆ. ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಾಳಗ ನಿಷೇಧಿಸಿದ್ದಾರೆ. ಈ ಕುರಿತಾಗಿ ಡಿಸಿ ಆದೇಶದ ವಿರುದ್ಧ ಶ್ರೀರಾಮಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಸಂಘಟನೆಯ ರಾಷ್ಟ್ರಾಧ್ಯಕ್ಷ ಪ್ರಮೋದ್ ಮುತಾಲಿಕ್ ನೇತ್ರತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಗೆ ಟಗರು ಕಾಳಗ ಸಮಿತಿ ಸಾಥ್ ನೀಡಿದ್ದು, ಟಾಕೀಸ್‌ಗಳ ವಿಚಾರವಾಗಿ ಕೊರೊನಾ ಇಲ್ಲವೇ? ಅವುಗಳನ್ನೇ ಆರಂಭಿಸಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದತ್ತಪೀಠವನ್ನು ಹಿಂದೂಗಳಿಗೆ ವಹಿಸುವ ಬುದ್ಧಿ ಬಿಜೆಪಿಗೆ ಬರಲಿ: ಪ್ರಮೋದ್​ ಮುತಾಲಿಕ್

ಇದನ್ನೂ ಓದಿ: ಪಟಾಕಿಯಿಂದ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು -ಪ್ರಮೋದ್ ಮುತಾಲಿಕ್ ‘ಬಾಂಬ್​’!

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ