ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.

ಕೋಲಾರ: ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಮೃತ ವ್ಯಕ್ತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 29, 2024 | 9:55 PM

ಕೋಲಾರ, ಮಾ.29: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲ್ಲೂಕಿನ ರಾಜಗುಂಡ್ಲಹಳ್ಳಿ ಗ್ರಾಮದಲ್ಲಿ ಏಕಾಏಕಿ ಟ್ರಾನ್ಸ್‌ಪಾರಂ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಹಿಂದಿ ಬಾಷೆ ಮಾತನಾಡುತ್ತಿದ್ದ ವ್ಯಕ್ತಿಯಾಗಿದ್ದು, ಮಾನಸಿಕನಂತೆ ಕಾಣುತ್ತಿದ್ದನಂತೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಚಿತ್ರದುರ್ಗ:  ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿರಾಫನಹಳ್ಳಿಯಲ್ಲಿ ನಡೆದಿದೆ. ಆದಿತ್ಯ(15) ಹಾಗೂ ಅಪ್ಪರಸನಹಳ್ಳಿಯ ಯರಗುಂಟೇಶ್ವರ(14) ಮೃತ ರ್ದುದೈವಿಗಳು. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಮತ್ತೊಂದು ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಸಾಕು ಮಕ್ಕಳಿಂದಲೇ ಮಹಿಳೆ ಕೊಲೆಗೆ ಯತ್ನ

ಬೆಂಗಳೂರು: ಆರ್​​ಎಂಸಿ ಯಾರ್ಡ್ ಮಾರ್ಕೆಟ್​ನಲ್ಲಿ ಸಾಕು ಮಕ್ಕಳೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಅಣ್ಣಮ್ಮ (56) ಚಾಕು ಇರಿತಕ್ಕೊಳಗಾದ ಮಹಿಳೆ. ಸಾಕು ಮಕ್ಕಳಾದ ಸುಮಿತ್ರಾ ಹಾಗೂ ಮುನಿರಾಜು ಎಂಬುವವರಿಂದ ಕೃತ್ಯ. ಆರ್​ಎಂಸಿ ಯಾರ್ಡ್​ನಲ್ಲಿ ಕೆಲಸ ಮಾಡುತ್ತಿದ್ದ ಮುನಿರಾಜು, ತನಗೆ ಸಂಬಳ ಕೊಡುತ್ತಿಲ್ಲ, ಕೊಡಿಸಿ ಎಂದು ಅಣ್ಣಮ್ಮ ಅವರನ್ನು ಕರೆದೊಯ್ದಿದ್ದಾರೆ. ಈ ವೇಳೆ ಮುನಿರಾಜು ಅಣ್ಣಮ್ಮಗೆ ಚಾಕುವಿನಿಂದ ಇರಿದು, ಬಳಿಕ ಮನೆಯಲ್ಲಿದ್ದ 6 ಲಕ್ಷ ಹಣ, ಚಿನ್ನದ ಆಭರಣ ದೋಚಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 pm, Fri, 29 March 24