AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಿದ್ದಾಗ ಸಾವಿರ ಕೇಸ್​ ಇತ್ತಷ್ಟೇ, ಸುಧಾಕರ್​ ಬಂದ್ಮೇಲೆ 5000 ಆಯ್ತು -ರಾಮುಲು ನೇರ ಟಾಂಗ್​

ಬೆಂಗಳೂರು: ಸಿಎಂ ಬಿಎಸ್‌ವೈ ನಿವಾಸದಲ್ಲಿ ಸಚಿವರಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ನಡೆದ ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿದರು. ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್‌ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ಸಿಎಂ ಬಿಎಸ್‌ವೈ ಬಳಿ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ. ಸಿಎಂ ನನಗೆ ಈಗ ಸಮಾಜ ಕಲ್ಯಾಣ ಖಾತೆ ಕೊಟ್ಟಿದ್ದಾರೆ. ನಾನು ಸಂತೋಷದಿಂದ ಈ […]

ನಾನಿದ್ದಾಗ ಸಾವಿರ ಕೇಸ್​ ಇತ್ತಷ್ಟೇ, ಸುಧಾಕರ್​ ಬಂದ್ಮೇಲೆ 5000 ಆಯ್ತು -ರಾಮುಲು ನೇರ ಟಾಂಗ್​
KUSHAL V
|

Updated on:Oct 13, 2020 | 11:12 AM

Share

ಬೆಂಗಳೂರು: ಸಿಎಂ ಬಿಎಸ್‌ವೈ ನಿವಾಸದಲ್ಲಿ ಸಚಿವರಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ನಡೆದ ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿದರು.

ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್‌ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ಸಿಎಂ ಬಿಎಸ್‌ವೈ ಬಳಿ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ.

ಸಿಎಂ ನನಗೆ ಈಗ ಸಮಾಜ ಕಲ್ಯಾಣ ಖಾತೆ ಕೊಟ್ಟಿದ್ದಾರೆ. ನಾನು ಸಂತೋಷದಿಂದ ಈ ಖಾತೆ ವಹಿಸಿಕೊಂಡಿದ್ದೇನೆ. ನನ್ನ ಸ್ನೇಹಿತರಾದ ಸುಧಾಕರ್​ ವೈದ್ಯರಾಗಿರುವ ಹಿನ್ನೆಲೆ ಸಿಎಂ ಅವರಿಗೆ ಆರೋಗ್ಯ ಇಲಾಖೆಯನ್ನು ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಜೊತೆ ಆರೋಗ್ಯ ಇಲಾಖೆ ನೀಡಿದ್ದಾರೆ ಎಂದು ಶ್ರೀರಾಮುಲು ಹೇಳದರು.

‘ಕೊರೊನಾ ನಿಭಾಯಿಸಲು ನಾನು ವಿಫಲನಾಗಿದ್ದೇನೆ ಎಂದಲ್ಲ’ ಈ ಹಿಂದೆ ಕೆ.ಸುಧಾಕರ್​ಗೆ ಬೆಂಗಳೂರು ಉಸ್ತುವಾರಿ ನೀಡಿದ್ದರು. ಸುಧಾಕರ್​ ಕೊರೊನಾ ವಿಚಾರದಲ್ಲಿ ಬೆಂಗಳೂರು ಉಸ್ತುವಾರಿಯಾಗಿದ್ರು. ನಾನಿದ್ದಾಗ ಬೆಂಗಳೂರಲ್ಲಿ ಕೊರೊನಾ ಕೇಸ್​ ಸಾವಿರ ಇತ್ತು. ಸುಧಾಕರ್ ಪಡೆದ ಬಳಿಕ ಕೊರೊನಾ ಕೇಸ್ 5,000ಕ್ಕೇರಿತ್ತು. ಹೀಗೆಂದು ನಾನು ನಿಭಾಯಿಸಲು ವಿಫಲನಾಗಿದ್ದೇನೆ ಎಂದಲ್ಲ ಎಂದು ಶ್ರೀರಾಮುಲು ಪರೋಕ್ಷವಾಗಿ ಸುಧಾಕರ್​ಗೆ ಟಾಂಗ್​ ಕೊಟ್ಟರು.

‘ಜಿಲ್ಲಾ ಹಂತದಲ್ಲಿ ಸಮನ್ವಯತೆಯ ಕೊರತೆ ಇತ್ತು’ ಈ ನಡುವೆ ಅಲ್ಲೇ ನಿಂತಿದ್ದ ಸಚಿವ ಡಾ.ಕೆ.ಸುಧಾಕರ್​ ಶ್ರೀರಾಮುಲು ಅಣ್ಣ ಹಿರಿಯರು, ಒಳ್ಳೆಯ ನಾಯಕರು. ಒಂದು ತಿಂಗಳ ಹಿಂದೆ ಸಂಪುಟ ವಿಸ್ತರಣೆ ಆಗಬೇಕಿತ್ತು. ಬಿಹಾರ ಚುನಾವಣೆ ಕಾರಣದಿಂದ ಮುಂದೂಡುವ ಸ್ಥಿತಿ ಎದುರಾಯ್ತು. ಸಂಪುಟ ಪುನಾರಚನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್​ವೈ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಹೇಳಿದರು.

ಕೆಳ ಹಂತದಲ್ಲಿ ಮತ್ತು ಜಿಲ್ಲಾ ಹಂತದಲ್ಲಿ ಸಮನ್ವಯತೆಯ ಕೊರತೆ ಇತ್ತು. ಹಾಗಾಗಿ, ತಾಂತ್ರಿಕತೆ ಮತ್ತು ಸಮನ್ವಯತೆ ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಯಿತು. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಯಾರು ಹೆಚ್ಚು, ಯಾರು ಕಡಿಮೆ ಎಂಬ ಪ್ರಶ್ನೆಯೇ ಇಲ್ಲ. ಶ್ರೀರಾಮುಲು ಪ್ರಭಾವಿ ಮತ್ತು ಬಲಿಷ್ಠ ಸಮಾಜ ಕಲ್ಯಾಣ ಇಲಾಖೆ ವಹಿಸಿದ್ದಾರೆ. ಇದು ಬಿ.ಶ್ರೀರಾಮುಲುರಿಗೆ ದೊಡ್ಡ ಇಲಾಖೆ. ರಾಮುಲುಗೆ ಡಿ-ಪ್ರಮೋಟ್​ ಆಗಿಲ್ಲ, ಪ್ರಮೋಟ್ ಆಗಿದ್ದಾರೆ ಎಂದು ಸುಧಾಕರ್​ ಮಾತಿನಲ್ಲೇ ಶ್ರೀರಾಮುಲುಗೆ ನಯವಾಗಿ ತಿರುಗೇಟು ನೀಡಿದರು.

ಹೀಗೆ, ಒಬ್ಬರಿಗೊಬ್ಬರು ಪರಸ್ಪರ ಟಾಂಗ್ ಕೊಟ್ಟ ಬಳಿಕ ಸಚಿವ ಶ್ರೀರಾಮುಲು ತಮ್ಮ ಸರ್ಕಾರಿ ಕಾರ್​ನಲ್ಲಿ ತಮ್ಮ ಸರ್ಕಾರಿ ನಿವಾಸಕ್ಕೆ ತೆರಳಿದರು. ನಿನ್ನೆ ಸಿಎಂ ನಿವಾಸಕ್ಕೆ ಬಂದಿದ್ದರೂ ಸಚಿವ ಶ್ರೀರಾಮುಲು ತಮ್ಮ ಸರ್ಕಾರಿ ನಿವಾಸಕ್ಕೆ ತೆರಳದೆ ಖಾಸಗಿ ನಿವಾಸಕ್ಕೆ ತೆರಳಿದ್ದರು. ಆದರೆ, ಇಂದು ಯಡಿಯೂರಪ್ಪ ಭೇಟಿ ಬಳಿಕ ಸಿಎಂ ಅಧಿಕೃತ ನಿವಾಸ ಕಾವೇರಿ ಸಮೀಪವಿರುವ ಸಪ್ತ ಸಚಿವರ ನಿವಾಸದಲ್ಲಿ ಇರುವ ತಮ್ಮ‌ ಸರ್ಕಾರಿ ನಿವಾಸಕ್ಕೆ ಶ್ರೀರಾಮುಲು ತೆರಳಿದರು.

Published On - 10:50 am, Tue, 13 October 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ