AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಿದ್ದಾಗ ಸಾವಿರ ಕೇಸ್​ ಇತ್ತಷ್ಟೇ, ಸುಧಾಕರ್​ ಬಂದ್ಮೇಲೆ 5000 ಆಯ್ತು -ರಾಮುಲು ನೇರ ಟಾಂಗ್​

ಬೆಂಗಳೂರು: ಸಿಎಂ ಬಿಎಸ್‌ವೈ ನಿವಾಸದಲ್ಲಿ ಸಚಿವರಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ನಡೆದ ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿದರು. ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್‌ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ಸಿಎಂ ಬಿಎಸ್‌ವೈ ಬಳಿ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ. ಸಿಎಂ ನನಗೆ ಈಗ ಸಮಾಜ ಕಲ್ಯಾಣ ಖಾತೆ ಕೊಟ್ಟಿದ್ದಾರೆ. ನಾನು ಸಂತೋಷದಿಂದ ಈ […]

ನಾನಿದ್ದಾಗ ಸಾವಿರ ಕೇಸ್​ ಇತ್ತಷ್ಟೇ, ಸುಧಾಕರ್​ ಬಂದ್ಮೇಲೆ 5000 ಆಯ್ತು -ರಾಮುಲು ನೇರ ಟಾಂಗ್​
KUSHAL V
|

Updated on:Oct 13, 2020 | 11:12 AM

Share

ಬೆಂಗಳೂರು: ಸಿಎಂ ಬಿಎಸ್‌ವೈ ನಿವಾಸದಲ್ಲಿ ಸಚಿವರಾದ ಕೆ.ಸುಧಾಕರ್ ಮತ್ತು ಶ್ರೀರಾಮುಲು ಮಧ್ಯೆ ನಡೆದ ಸಂಧಾನ ಸಭೆ ಬಳಿಕ ಇಬ್ಬರು ಸಚಿವರು ಸುದ್ದಿಗೋಷ್ಠಿ ನಡೆಸಿದರು.

ಸಚಿವ ಶ್ರೀರಾಮುಲು ಖಾತೆ ಬದಲಾವಣೆ ಮಾಡಿದ ವಿಚಾರವಾಗಿ ಒಳ್ಳೆಯ ಕೆಲಸ ಮಾಡಲು ಸಿಎಂ ಸಲಹೆ ಕೊಟ್ಟಿದ್ದಾರೆ. ನಮ್ಮಿಬ್ಬರನ್ನೂ ಕರೆಸಿ ಸಿಎಂ ಬಿಎಸ್‌ವೈ ಸೂಚನೆ ಕೊಟ್ಟಿದ್ದಾರೆ ಎಂದು ಶ್ರೀರಾಮುಲು ಹೇಳಿದರು. ಸಿಎಂ ಬಿಎಸ್‌ವೈ ಬಳಿ ಸಮಾಜ ಕಲ್ಯಾಣ ಖಾತೆ ಕೇಳಿದ್ದೆ.

ಸಿಎಂ ನನಗೆ ಈಗ ಸಮಾಜ ಕಲ್ಯಾಣ ಖಾತೆ ಕೊಟ್ಟಿದ್ದಾರೆ. ನಾನು ಸಂತೋಷದಿಂದ ಈ ಖಾತೆ ವಹಿಸಿಕೊಂಡಿದ್ದೇನೆ. ನನ್ನ ಸ್ನೇಹಿತರಾದ ಸುಧಾಕರ್​ ವೈದ್ಯರಾಗಿರುವ ಹಿನ್ನೆಲೆ ಸಿಎಂ ಅವರಿಗೆ ಆರೋಗ್ಯ ಇಲಾಖೆಯನ್ನು ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಜೊತೆ ಆರೋಗ್ಯ ಇಲಾಖೆ ನೀಡಿದ್ದಾರೆ ಎಂದು ಶ್ರೀರಾಮುಲು ಹೇಳದರು.

‘ಕೊರೊನಾ ನಿಭಾಯಿಸಲು ನಾನು ವಿಫಲನಾಗಿದ್ದೇನೆ ಎಂದಲ್ಲ’ ಈ ಹಿಂದೆ ಕೆ.ಸುಧಾಕರ್​ಗೆ ಬೆಂಗಳೂರು ಉಸ್ತುವಾರಿ ನೀಡಿದ್ದರು. ಸುಧಾಕರ್​ ಕೊರೊನಾ ವಿಚಾರದಲ್ಲಿ ಬೆಂಗಳೂರು ಉಸ್ತುವಾರಿಯಾಗಿದ್ರು. ನಾನಿದ್ದಾಗ ಬೆಂಗಳೂರಲ್ಲಿ ಕೊರೊನಾ ಕೇಸ್​ ಸಾವಿರ ಇತ್ತು. ಸುಧಾಕರ್ ಪಡೆದ ಬಳಿಕ ಕೊರೊನಾ ಕೇಸ್ 5,000ಕ್ಕೇರಿತ್ತು. ಹೀಗೆಂದು ನಾನು ನಿಭಾಯಿಸಲು ವಿಫಲನಾಗಿದ್ದೇನೆ ಎಂದಲ್ಲ ಎಂದು ಶ್ರೀರಾಮುಲು ಪರೋಕ್ಷವಾಗಿ ಸುಧಾಕರ್​ಗೆ ಟಾಂಗ್​ ಕೊಟ್ಟರು.

‘ಜಿಲ್ಲಾ ಹಂತದಲ್ಲಿ ಸಮನ್ವಯತೆಯ ಕೊರತೆ ಇತ್ತು’ ಈ ನಡುವೆ ಅಲ್ಲೇ ನಿಂತಿದ್ದ ಸಚಿವ ಡಾ.ಕೆ.ಸುಧಾಕರ್​ ಶ್ರೀರಾಮುಲು ಅಣ್ಣ ಹಿರಿಯರು, ಒಳ್ಳೆಯ ನಾಯಕರು. ಒಂದು ತಿಂಗಳ ಹಿಂದೆ ಸಂಪುಟ ವಿಸ್ತರಣೆ ಆಗಬೇಕಿತ್ತು. ಬಿಹಾರ ಚುನಾವಣೆ ಕಾರಣದಿಂದ ಮುಂದೂಡುವ ಸ್ಥಿತಿ ಎದುರಾಯ್ತು. ಸಂಪುಟ ಪುನಾರಚನೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್​ವೈ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ ಎಂದು ಹೇಳಿದರು.

ಕೆಳ ಹಂತದಲ್ಲಿ ಮತ್ತು ಜಿಲ್ಲಾ ಹಂತದಲ್ಲಿ ಸಮನ್ವಯತೆಯ ಕೊರತೆ ಇತ್ತು. ಹಾಗಾಗಿ, ತಾಂತ್ರಿಕತೆ ಮತ್ತು ಸಮನ್ವಯತೆ ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಯಿತು. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದ್ದೇವೆ. ಯಾರು ಹೆಚ್ಚು, ಯಾರು ಕಡಿಮೆ ಎಂಬ ಪ್ರಶ್ನೆಯೇ ಇಲ್ಲ. ಶ್ರೀರಾಮುಲು ಪ್ರಭಾವಿ ಮತ್ತು ಬಲಿಷ್ಠ ಸಮಾಜ ಕಲ್ಯಾಣ ಇಲಾಖೆ ವಹಿಸಿದ್ದಾರೆ. ಇದು ಬಿ.ಶ್ರೀರಾಮುಲುರಿಗೆ ದೊಡ್ಡ ಇಲಾಖೆ. ರಾಮುಲುಗೆ ಡಿ-ಪ್ರಮೋಟ್​ ಆಗಿಲ್ಲ, ಪ್ರಮೋಟ್ ಆಗಿದ್ದಾರೆ ಎಂದು ಸುಧಾಕರ್​ ಮಾತಿನಲ್ಲೇ ಶ್ರೀರಾಮುಲುಗೆ ನಯವಾಗಿ ತಿರುಗೇಟು ನೀಡಿದರು.

ಹೀಗೆ, ಒಬ್ಬರಿಗೊಬ್ಬರು ಪರಸ್ಪರ ಟಾಂಗ್ ಕೊಟ್ಟ ಬಳಿಕ ಸಚಿವ ಶ್ರೀರಾಮುಲು ತಮ್ಮ ಸರ್ಕಾರಿ ಕಾರ್​ನಲ್ಲಿ ತಮ್ಮ ಸರ್ಕಾರಿ ನಿವಾಸಕ್ಕೆ ತೆರಳಿದರು. ನಿನ್ನೆ ಸಿಎಂ ನಿವಾಸಕ್ಕೆ ಬಂದಿದ್ದರೂ ಸಚಿವ ಶ್ರೀರಾಮುಲು ತಮ್ಮ ಸರ್ಕಾರಿ ನಿವಾಸಕ್ಕೆ ತೆರಳದೆ ಖಾಸಗಿ ನಿವಾಸಕ್ಕೆ ತೆರಳಿದ್ದರು. ಆದರೆ, ಇಂದು ಯಡಿಯೂರಪ್ಪ ಭೇಟಿ ಬಳಿಕ ಸಿಎಂ ಅಧಿಕೃತ ನಿವಾಸ ಕಾವೇರಿ ಸಮೀಪವಿರುವ ಸಪ್ತ ಸಚಿವರ ನಿವಾಸದಲ್ಲಿ ಇರುವ ತಮ್ಮ‌ ಸರ್ಕಾರಿ ನಿವಾಸಕ್ಕೆ ಶ್ರೀರಾಮುಲು ತೆರಳಿದರು.

Published On - 10:50 am, Tue, 13 October 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ