AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವ ರಾಮುಲು ಅವರೆ.. ಯಾವ ಯುದ್ಧದಲ್ಲಿ ಗೆದ್ದಿರಿ! ಯಾವ ಪುರುಷಾರ್ಥಕ್ಕೆ ಇದು?

ಚಿತ್ರದುರ್ಗ: ಕೊರೊನಾ ಸಮಯದಲ್ಲಿ ಆರೋಗ್ಯ ಸಚಿವರೇ ಸಾಮಾಜಿಕ ಅಂತರ ಮರೆತು ಅದ್ಧೂರಿ ಮೆರವಣಿಗೆಯಲ್ಲಿ ಭಾಗಿಯಾಗಿರುವ ಘಟನೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಇಂದು ವೇದಾವತಿ ನದಿಗೆ ಬಾಗಿನ ಅರ್ಪಣೆಗೆ ಎಂದು ಪರಶುರಾಂಪುರಕ್ಕೆ ಆಗಮಿಸಿದ್ದರು. ಈ ವೇಳೆ ಜೆಸಿಬಿ ಮೂಲಕ ಸೇಬಿನ ಹಾರ, ಹೂವು ಹಾಕಿ ಅದ್ಧೂರಿ ಸ್ವಾಗತ ಮಾಡಲಾಗಿದೆ. ಈ ಸ್ವಾಗತ ಸಮಾರಂಭದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಸಂಸದ ನಾರಾಯಣಸ್ವಾಮಿ ಭಾಗಿಯಾಗಿದ್ರು. ನೂರಾರು ಮಂದಿ ಜಮಾಹಿಸಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತು […]

ಆರೋಗ್ಯ ಸಚಿವ ರಾಮುಲು ಅವರೆ.. ಯಾವ ಯುದ್ಧದಲ್ಲಿ ಗೆದ್ದಿರಿ! ಯಾವ ಪುರುಷಾರ್ಥಕ್ಕೆ ಇದು?
ಆಯೇಷಾ ಬಾನು
|

Updated on:Jun 02, 2020 | 4:22 PM

Share

ಚಿತ್ರದುರ್ಗ: ಕೊರೊನಾ ಸಮಯದಲ್ಲಿ ಆರೋಗ್ಯ ಸಚಿವರೇ ಸಾಮಾಜಿಕ ಅಂತರ ಮರೆತು ಅದ್ಧೂರಿ ಮೆರವಣಿಗೆಯಲ್ಲಿ ಭಾಗಿಯಾಗಿರುವ ಘಟನೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಇಂದು ವೇದಾವತಿ ನದಿಗೆ ಬಾಗಿನ ಅರ್ಪಣೆಗೆ ಎಂದು ಪರಶುರಾಂಪುರಕ್ಕೆ ಆಗಮಿಸಿದ್ದರು.

ಈ ವೇಳೆ ಜೆಸಿಬಿ ಮೂಲಕ ಸೇಬಿನ ಹಾರ, ಹೂವು ಹಾಕಿ ಅದ್ಧೂರಿ ಸ್ವಾಗತ ಮಾಡಲಾಗಿದೆ. ಈ ಸ್ವಾಗತ ಸಮಾರಂಭದಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಸಂಸದ ನಾರಾಯಣಸ್ವಾಮಿ ಭಾಗಿಯಾಗಿದ್ರು. ನೂರಾರು ಮಂದಿ ಜಮಾಹಿಸಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಮರೆತು ಎತ್ತಿನ ಗಾಡಿ ಏರಿ ಶ್ರೀರಾಮುಲು ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ.

ಅಲ್ಲದೆ ಮೆರವಣಿಗೆಯಲ್ಲಿ ಭಾಗಿಯಾದ ಜನ ಸಹ ಮಾಸ್ಕ್‌ ಧರಿಸಿಲ್ಲ. ಆರೋಗ್ಯ ಸಚಿವರ ಸಮ್ಮುಖದಲ್ಲೇ ಕೊರೊನಾ ಜಾಗೃತಿ ನಿಯಮಗಳು ಮಣ್ಣುಪಾಲಾಗಿವೆ. ದೇಶ ಕೊರೊನಾ ಎಂಬ ಮಹಾಮಾರಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಆಚರಿಸಲಾಗುತ್ತಿರುವ ಈ ರೀತಿಯ ಅದ್ದೂರಿ ಮೆರವಣಿಗೆ ಬೇಕಿತ್ತ ಎಂಬ ಪ್ರಶ್ನೆ ಉಂಟಾಗಿದೆ.

Published On - 1:38 pm, Tue, 2 June 20

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?