AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆ ನಾಡಹಬ್ಬದಂತಿತ್ತು! ವಿದ್ಯಾರ್ಥಿಗಳಿಗೆಲ್ಲ ಒಳಿತಾಗಲಿ -ಸುರೇಶ್ ಕುಮಾರ್ ಹಾರೈಕೆ

ಬೆಂಗಳೂರು: ಅಂತೂ ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ 2019-2020ನೇ ಸಾಲಿನ SSLC ಪರೀಕ್ಷೆ ಪೂರ್ಣಗೊಂಡಿದೆ. ಹಾಗಾಗಿ SSLC ಪರೀಕ್ಷೆ ಕುರಿತ ಸಾಕ್ಷ್ಯ ಚಿತ್ರವನ್ನು ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್​ ಬಿಡುಗಡೆ ಮಾಡಿದ್ದಾರೆ. ಇಂದು 7,76,251 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. 7,61,506 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶೇಕಡಾ 98.10ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳದೆ ವರ್ಷ ಇದೇ ವಿಷಯಕ್ಕೆ ಶೇ.98.06 ರಷ್ಟು ವಿದ್ಯಾರ್ಥಿಗಳು ಭಾಗಿಯಾಗಿದ್ರು. ವಿಶೇಷ ಅಂದ್ರೆ ಒಂದೇ ಒಂದು ಕೇಂದ್ರದಿಂದ ಕೊರೊನಾ ಸೋಂಕು ಹರಡಿಲ್ಲ. ಯಾವ ಯಾವ ವಿದ್ಯಾರ್ಥಿಗಳು […]

SSLC ಪರೀಕ್ಷೆ ನಾಡಹಬ್ಬದಂತಿತ್ತು! ವಿದ್ಯಾರ್ಥಿಗಳಿಗೆಲ್ಲ ಒಳಿತಾಗಲಿ -ಸುರೇಶ್ ಕುಮಾರ್ ಹಾರೈಕೆ
ಸಾಧು ಶ್ರೀನಾಥ್​
| Edited By: |

Updated on:Jul 03, 2020 | 5:31 PM

Share

ಬೆಂಗಳೂರು: ಅಂತೂ ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ 2019-2020ನೇ ಸಾಲಿನ SSLC ಪರೀಕ್ಷೆ ಪೂರ್ಣಗೊಂಡಿದೆ. ಹಾಗಾಗಿ SSLC ಪರೀಕ್ಷೆ ಕುರಿತ ಸಾಕ್ಷ್ಯ ಚಿತ್ರವನ್ನು ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್​ ಬಿಡುಗಡೆ ಮಾಡಿದ್ದಾರೆ.

ಇಂದು 7,76,251 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. 7,61,506 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶೇಕಡಾ 98.10ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳದೆ ವರ್ಷ ಇದೇ ವಿಷಯಕ್ಕೆ ಶೇ.98.06 ರಷ್ಟು ವಿದ್ಯಾರ್ಥಿಗಳು ಭಾಗಿಯಾಗಿದ್ರು. ವಿಶೇಷ ಅಂದ್ರೆ ಒಂದೇ ಒಂದು ಕೇಂದ್ರದಿಂದ ಕೊರೊನಾ ಸೋಂಕು ಹರಡಿಲ್ಲ. ಯಾವ ಯಾವ ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗವಹಿಸಿದ್ರೋ ಆ ವಿದ್ಯಾರ್ಥಿಗಳಿಗೆ ಒಳಿತಾಗಲಿ ಎಂದು ಸಚಿವ ಸುರೇಶ್ ಕುಮಾರ್ ಶುಭಹಾರೈಸಿದರು.

SSLC ಪರೀಕ್ಷೆ ಈ ಬಾರಿಯ ನಾಡಹಬ್ಬ ಕೊರೊನಾ ಆತಂಕದಿಂದ ಅನೇಕ ರಾಜ್ಯಗಳು ಪರೀಕ್ಷೆ ರದ್ದು ಮಾಡಿದ್ರು. ಕೇರಳ ರಾಜ್ಯದಲ್ಲಿ ಉತ್ತಮವಾಗಿ ಪರೀಕ್ಷೆ ನಡೆಸಿದ್ದಾರೆ. ಆರಂಭದಲ್ಲಿ ಅಳುಕಿತ್ತು,‌‌ ಆದ್ರೆ ಪರೀಕ್ಷೆ ಮುಗಿಸಿದ ಬಳಿಕ ವಿಶ್ವಾಸ ಹೆಚ್ಚಿಸಿದೆ. ರಾಜ್ಯದ ವಿದ್ಯಾರ್ಥಿಗಳು ಇಂದು ಮಾದರಿ ತೋರಿಸಿದ್ದಾರೆ. ಪರೀಕ್ಷೆ ಮುಗಿದ ಮೇಲೂ ಕೊರೊನಾ ವಿರುದ್ಧ ಸೂತ್ರ ಪಾಲಿಸಬೇಕು. ಮುಖ್ಯಮಂತ್ರಿಗಳು ಬೆನ್ನೆಲುಬಾಗಿ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರು ಕೂಡ ಬೆಂಬಲ ನೀಡಿದ್ದಾರೆ. ಎಲ್ಲರು ಕೂಡ ಸಮನ್ವಯ ಸಾಧಿಸಿದ್ರೆ ಅಸಾಧ್ಯವನ್ನೂ ಸಾಧಿಸಬಹುದು ಅನ್ನೋದು ತಿಳಿಯುತ್ತೆ. SSLC ಪರೀಕ್ಷೆ ಈ ಬಾರಿಯ ನಾಡಹಬ್ಬ ಆಗಿದೆ ಎಂದರು.

ಜುಲೈ 13ರಿಂದ SSLC ಮೌಲ್ಯಮಾಪನ ಜುಲೈ 13ರಿಂದ SSLC ಮೌಲ್ಯಮಾಪನ ನಡೆಯಲಿದೆ. ಜುಲೈ 30ಕ್ಕೆ ಮೌಲ್ಯಮಾಪನ ಅಂತ್ಯವಾಗಲಿದೆ. ಮೌಲ್ಯಮಾಪನ ಕೇಂದ್ರಕ್ಕೂ ಎಸ್​ಒಪಿ ಇರಲಿದೆ. ಮೌಲ್ಯಮಾಪಕರು ನಿರ್ಭೀತಿಯಿಂದ ಮೌಲ್ಯಮಾಪನ ಮಾಡಬಹುದು. 55 ವರ್ಷ ಮೀರಿದ ಶಿಕ್ಷಕರಿಗೆ ಮೌಲ್ಯ ಮಾಪನದಿಂದ ವಿನಾಯಿತಿ ಕೊಡಲಾಗುವುದು.

Published On - 5:17 pm, Fri, 3 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ