AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ಪರೀಕ್ಷೆ ನಾಡಹಬ್ಬದಂತಿತ್ತು! ವಿದ್ಯಾರ್ಥಿಗಳಿಗೆಲ್ಲ ಒಳಿತಾಗಲಿ -ಸುರೇಶ್ ಕುಮಾರ್ ಹಾರೈಕೆ

ಬೆಂಗಳೂರು: ಅಂತೂ ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ 2019-2020ನೇ ಸಾಲಿನ SSLC ಪರೀಕ್ಷೆ ಪೂರ್ಣಗೊಂಡಿದೆ. ಹಾಗಾಗಿ SSLC ಪರೀಕ್ಷೆ ಕುರಿತ ಸಾಕ್ಷ್ಯ ಚಿತ್ರವನ್ನು ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್​ ಬಿಡುಗಡೆ ಮಾಡಿದ್ದಾರೆ. ಇಂದು 7,76,251 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. 7,61,506 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶೇಕಡಾ 98.10ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳದೆ ವರ್ಷ ಇದೇ ವಿಷಯಕ್ಕೆ ಶೇ.98.06 ರಷ್ಟು ವಿದ್ಯಾರ್ಥಿಗಳು ಭಾಗಿಯಾಗಿದ್ರು. ವಿಶೇಷ ಅಂದ್ರೆ ಒಂದೇ ಒಂದು ಕೇಂದ್ರದಿಂದ ಕೊರೊನಾ ಸೋಂಕು ಹರಡಿಲ್ಲ. ಯಾವ ಯಾವ ವಿದ್ಯಾರ್ಥಿಗಳು […]

SSLC ಪರೀಕ್ಷೆ ನಾಡಹಬ್ಬದಂತಿತ್ತು! ವಿದ್ಯಾರ್ಥಿಗಳಿಗೆಲ್ಲ ಒಳಿತಾಗಲಿ -ಸುರೇಶ್ ಕುಮಾರ್ ಹಾರೈಕೆ
ಸಾಧು ಶ್ರೀನಾಥ್​
| Updated By: |

Updated on:Jul 03, 2020 | 5:31 PM

Share

ಬೆಂಗಳೂರು: ಅಂತೂ ಮಹಾಮಾರಿ ಕೊರೊನಾ ಸಂಕಷ್ಟದ ಸಂದರ್ಭದಲ್ಲೂ 2019-2020ನೇ ಸಾಲಿನ SSLC ಪರೀಕ್ಷೆ ಪೂರ್ಣಗೊಂಡಿದೆ. ಹಾಗಾಗಿ SSLC ಪರೀಕ್ಷೆ ಕುರಿತ ಸಾಕ್ಷ್ಯ ಚಿತ್ರವನ್ನು ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್​ ಬಿಡುಗಡೆ ಮಾಡಿದ್ದಾರೆ.

ಇಂದು 7,76,251 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಬೇಕಿತ್ತು. 7,61,506 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶೇಕಡಾ 98.10ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳದೆ ವರ್ಷ ಇದೇ ವಿಷಯಕ್ಕೆ ಶೇ.98.06 ರಷ್ಟು ವಿದ್ಯಾರ್ಥಿಗಳು ಭಾಗಿಯಾಗಿದ್ರು. ವಿಶೇಷ ಅಂದ್ರೆ ಒಂದೇ ಒಂದು ಕೇಂದ್ರದಿಂದ ಕೊರೊನಾ ಸೋಂಕು ಹರಡಿಲ್ಲ. ಯಾವ ಯಾವ ವಿದ್ಯಾರ್ಥಿಗಳು ಪರೀಕ್ಷೆಗೆ ಭಾಗವಹಿಸಿದ್ರೋ ಆ ವಿದ್ಯಾರ್ಥಿಗಳಿಗೆ ಒಳಿತಾಗಲಿ ಎಂದು ಸಚಿವ ಸುರೇಶ್ ಕುಮಾರ್ ಶುಭಹಾರೈಸಿದರು.

SSLC ಪರೀಕ್ಷೆ ಈ ಬಾರಿಯ ನಾಡಹಬ್ಬ ಕೊರೊನಾ ಆತಂಕದಿಂದ ಅನೇಕ ರಾಜ್ಯಗಳು ಪರೀಕ್ಷೆ ರದ್ದು ಮಾಡಿದ್ರು. ಕೇರಳ ರಾಜ್ಯದಲ್ಲಿ ಉತ್ತಮವಾಗಿ ಪರೀಕ್ಷೆ ನಡೆಸಿದ್ದಾರೆ. ಆರಂಭದಲ್ಲಿ ಅಳುಕಿತ್ತು,‌‌ ಆದ್ರೆ ಪರೀಕ್ಷೆ ಮುಗಿಸಿದ ಬಳಿಕ ವಿಶ್ವಾಸ ಹೆಚ್ಚಿಸಿದೆ. ರಾಜ್ಯದ ವಿದ್ಯಾರ್ಥಿಗಳು ಇಂದು ಮಾದರಿ ತೋರಿಸಿದ್ದಾರೆ. ಪರೀಕ್ಷೆ ಮುಗಿದ ಮೇಲೂ ಕೊರೊನಾ ವಿರುದ್ಧ ಸೂತ್ರ ಪಾಲಿಸಬೇಕು. ಮುಖ್ಯಮಂತ್ರಿಗಳು ಬೆನ್ನೆಲುಬಾಗಿ ನಿಂತಿದ್ದಾರೆ. ವಿರೋಧ ಪಕ್ಷದ ನಾಯಕರು ಕೂಡ ಬೆಂಬಲ ನೀಡಿದ್ದಾರೆ. ಎಲ್ಲರು ಕೂಡ ಸಮನ್ವಯ ಸಾಧಿಸಿದ್ರೆ ಅಸಾಧ್ಯವನ್ನೂ ಸಾಧಿಸಬಹುದು ಅನ್ನೋದು ತಿಳಿಯುತ್ತೆ. SSLC ಪರೀಕ್ಷೆ ಈ ಬಾರಿಯ ನಾಡಹಬ್ಬ ಆಗಿದೆ ಎಂದರು.

ಜುಲೈ 13ರಿಂದ SSLC ಮೌಲ್ಯಮಾಪನ ಜುಲೈ 13ರಿಂದ SSLC ಮೌಲ್ಯಮಾಪನ ನಡೆಯಲಿದೆ. ಜುಲೈ 30ಕ್ಕೆ ಮೌಲ್ಯಮಾಪನ ಅಂತ್ಯವಾಗಲಿದೆ. ಮೌಲ್ಯಮಾಪನ ಕೇಂದ್ರಕ್ಕೂ ಎಸ್​ಒಪಿ ಇರಲಿದೆ. ಮೌಲ್ಯಮಾಪಕರು ನಿರ್ಭೀತಿಯಿಂದ ಮೌಲ್ಯಮಾಪನ ಮಾಡಬಹುದು. 55 ವರ್ಷ ಮೀರಿದ ಶಿಕ್ಷಕರಿಗೆ ಮೌಲ್ಯ ಮಾಪನದಿಂದ ವಿನಾಯಿತಿ ಕೊಡಲಾಗುವುದು.

Published On - 5:17 pm, Fri, 3 July 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ