AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2020 ಇಂದು ಯಾವುದೇ ವಿದ್ಯಾರ್ಥಿ ಕಾಪಿ ಮಾಡಿಲ್ಲ-ಸುರೇಶ್​ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿಯ ಸೂಕ್ಷ್ಮ ಸಂದರ್ಭದಲ್ಲೂ ಮೊದಲ ದಿನದ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದು ನಡೆದಿದೆ. ಇಷ್ಟು ದಿನದಿಂದ ಎದುರು ನೋಡುತ್ತಿದ್ದ SSLC ಪರೀಕ್ಷೆ ಮೊದಲ ದಿನ ಮುಗಿದಿದೆ. ಇಂದು ದ್ವಿತೀಯ ಭಾಷೆ ಇಂಗ್ಲಿಷ್​ ಮತ್ತು ಕನ್ನಡ ಭಾಷೆಯ ಪರೀಕ್ಷೆ ನಡೆದಿದೆ. ಇಂದು ಹಾಜರಾಗಬೇಕಿದ್ದ 7,85,140 ವಿದ್ಯಾರ್ಥಿಗಳ ಪೈಕಿ 7,71,878 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಜರಾತಿಯ ಪ್ರಮಾಣ ಶೇ.98.3ರಷ್ಟಿದೆ. 13,212 ಮಕ್ಕಳು ಪರೀಕ್ಷೆಗೆ ಗೈರಾಗಿದ್ದಾರೆ. 7,43,688 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾಗಿದ್ದಾರೆ. ಕಂಟೈನ್​ಮೆಂಟ್ ಪ್ರದೇಶದಿಂದ ಬಂದ […]

SSLC Exam 2020 ಇಂದು ಯಾವುದೇ ವಿದ್ಯಾರ್ಥಿ ಕಾಪಿ ಮಾಡಿಲ್ಲ-ಸುರೇಶ್​ಕುಮಾರ್
Guru
| Edited By: |

Updated on:Jun 25, 2020 | 5:37 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿಯ ಸೂಕ್ಷ್ಮ ಸಂದರ್ಭದಲ್ಲೂ ಮೊದಲ ದಿನದ ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದು ನಡೆದಿದೆ. ಇಷ್ಟು ದಿನದಿಂದ ಎದುರು ನೋಡುತ್ತಿದ್ದ SSLC ಪರೀಕ್ಷೆ ಮೊದಲ ದಿನ ಮುಗಿದಿದೆ.

ಇಂದು ದ್ವಿತೀಯ ಭಾಷೆ ಇಂಗ್ಲಿಷ್​ ಮತ್ತು ಕನ್ನಡ ಭಾಷೆಯ ಪರೀಕ್ಷೆ ನಡೆದಿದೆ. ಇಂದು ಹಾಜರಾಗಬೇಕಿದ್ದ 7,85,140 ವಿದ್ಯಾರ್ಥಿಗಳ ಪೈಕಿ 7,71,878 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಹಾಜರಾತಿಯ ಪ್ರಮಾಣ ಶೇ.98.3ರಷ್ಟಿದೆ. 13,212 ಮಕ್ಕಳು ಪರೀಕ್ಷೆಗೆ ಗೈರಾಗಿದ್ದಾರೆ.

7,43,688 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾಗಿದ್ದಾರೆ. ಕಂಟೈನ್​ಮೆಂಟ್ ಪ್ರದೇಶದಿಂದ ಬಂದ 998 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಇನ್ನು, ಆರೋಗ್ಯದಲ್ಲಿ ವ್ಯತ್ಯಾಸವಿರುವ 201 ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆದಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಯಾವುದೇ ವಿದ್ಯಾರ್ಥಿ ನಕಲು ಮಾಡಿಲ್ಲ: ಇಡೀ ರಾಜ್ಯದಲ್ಲಿ ಯಾವುದೇ ವಿದ್ಯಾರ್ಥಿ ನಕಲು ಮಾಡಿಲ್ಲ. ನೆರೆ ರಾಜ್ಯದ 614 ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಅದರಲ್ಲಿ 555 ಮಕ್ಕಳು ಪರೀಕ್ಷೆ ಬರೆದಿದ್ದಾರೆ. 12,644 ವಲಸೆ ಕಾರ್ಮಿಕರ ಮಕ್ಕಳು ತಾವಿದ್ದಲ್ಲಿಯೇ ಪರೀಕ್ಷೆ ಬರೆಯಲು ನೋಂದಾಯಿಸಿದ್ದರು. ಅದರಲ್ಲಿ 12,548 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇದನ್ನು ತಪ್ಪದೇ ಓದಿ: ಪೊಲೀಸ್ ಕಾಲೋನಿ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನ, ಕಿಟಕಿಯಲ್ಲಿ ನೋಟ್​ಬುಕ್ ಪತ್ತೆ

96 ವಿದ್ಯಾರ್ಥಿಗಳು ಮಾತ್ರ ಗೈರಾಗಿದ್ದಾರೆ. ಇವರು ಯಾವ ಕಾರಣಕ್ಕಾಗಿ ಗೈರಾಗಿದ್ದಾರೆ ಎಂದು ತಿಳಿದುಕೊಂಡು ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುತ್ತೇವೆ. 3,212 ಬಸ್ ಮತ್ತು ಇತರ ವಾಹನಗಳನ್ನ ವಿದ್ಯಾರ್ಥಿಗಳ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು. 2,879 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಯಶಸ್ವಿಯಾಗಿದೆ. ಇವತ್ತು ನಾನು 12 ಶಾಲೆಗಳಲ್ಲಿ ಸ್ಥಳ ಪರೀಕ್ಷೆ ನಡೆಸಿದ್ದೇನೆ ಎಂದರು.

ಇದನ್ನು ತಪ್ಪದೇ ಓದಿ: ನಕಲು ಮಾಡಲು ಸಹಕರಿಸಿ ಸಿಕ್ಕಿಬಿದ್ದಾಗ, ಎಸ್ಕೇಪ್​ ಆಗಲು ಯತ್ನಿಸಿದ 4 ಶಿಕ್ಷಕರು ಅಂದರ್

Published On - 4:58 pm, Thu, 25 June 20

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ