AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2021: ಕೊವಿಡ್​ ಸೋಂಕಿತ 58 ವಿದ್ಯಾರ್ಥಿಗಳು ಇಂದು ಕೊವಿಡ್​ ಕೇರ್​ ಸೆಂಟರ್​ನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ: ಸಚಿವ ಸುರೇಶ್ ಕುಮಾರ್ ಮಾಹಿತಿ

ಸಮಾಜ ವಿಜ್ಞಾನ ಪರೀಕ್ಷೆಗೆ 8,24,689 ಮಕ್ಕಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 2867 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಅವರು ಇದೇ ವೇಳೆ ತಿಳಿಸಿದರು.

SSLC Exam 2021: ಕೊವಿಡ್​ ಸೋಂಕಿತ 58 ವಿದ್ಯಾರ್ಥಿಗಳು ಇಂದು ಕೊವಿಡ್​ ಕೇರ್​ ಸೆಂಟರ್​ನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಾರೆ: ಸಚಿವ ಸುರೇಶ್ ಕುಮಾರ್ ಮಾಹಿತಿ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
TV9 Web
| Edited By: |

Updated on:Jul 19, 2021 | 5:46 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು ಯಾವುದೇ ಗೊಂದಲಗಳು ಇಲ್ಲದೇ ಅತ್ಯಂತ ಸುಸೂತ್ರವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿದೆ. ಇಂದು ಕೊರೊನಾ ಸೋಂಕಿತ 58 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯದ ಕಾರಣ 111 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.

ಇಂದು ಒಟ್ಟು 3 ವಿಷಯಗಳಿಗೆ ಪರೀಕ್ಷೆ ನಡೆಸಲಾಗಿದೆ. ಗಣಿತ ವಿಷಯದಲ್ಲಿ 7,83,882 ವಿದ್ಯಾರ್ಥಿಗಳ ನೋಂದಣಿ ಮಾಡಿದ್ದರು. 7,81,530 ವಿದ್ಯಾರ್ಥಿಗಳು ಹಾಜರಾಗಿದ್ದರು. ಗಣಿತ ವಿಷಯದ ಪರೀಕ್ಷೆಗೆ ಒಟ್ಟು 2,352 ವಿದ್ಯಾರ್ಥಿಗಳು ಗೈರಾಗಿದ್ದರು. ವಿಜ್ಞಾನ ವಿಷಯದಲ್ಲಿ 8,43,976 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದು, 3127 ವಿದ್ಯಾರ್ಥಿಗಳು ಗೈರಾಗಿದ್ದರು. ಸಮಾಜ ವಿಜ್ಞಾನ ಪರೀಕ್ಷೆಗೆ 8,24,689 ಮಕ್ಕಳ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 2867 ವಿದ್ಯಾರ್ಥಿಗಳು ಗೈರಾಗಿದ್ದರು ಎಂದು ಅವರು ಇದೇ ವೇಳೆ ತಿಳಿಸಿದರು.

ಬೆಂಗಳೂರು ಉತ್ತರ 1, ಬೆಂಗಳೂರು ದಕ್ಷಿಣ 2, ಮೈಸೂರು 1, ಮಂಡ್ಯ 4, ಉಡುಪಿ 3, ಮಂಗಳೂರು 16, ಕೊಡಗು 5, ಚಿತ್ರದುರ್ಗ 7, ಚಿಕ್ಕಮಗಳೂರು 7, ಶಿವಮೊಗ್ಗ 1, ಹಾಸನ 1, ಗದಗ1, ಬೆಳಗಾವಿ 2, ಉತ್ತರ ಕನ್ನಡ1, ಕೊಪ್ಪಳದ 1 ವಿದ್ಯಾರ್ಥಿ ಕೊವಿಡ್​ ಇದ್ದರೂ 2870 ವಸತಿ ನಿಲಯದಿಂದ ಬಂದು ಎಕ್ಸಾಂ ಬರೆದ ಪರೀಕ್ಷೆ ಬರೆದಿದ್ದಾರೆ. 10,693 ವಲಸೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯದ 761 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 2870 ವಿದ್ಯಾರ್ಥಿಗಳು ಹಾಸ್ಟೆಲ್​ಗಳಲ್ಲಿದ್ದು ಪರೀಕ್ಷೆ ಬರೆದಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಇದನ್ನೂ ಓದಿ: 

ಸೆಮಿಸ್ಟರ್ ಪರೀಕ್ಷೆ ರದ್ದು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ, ನಿಮ್ಮ ಮೇಲೆ ಕೇಸ್ ಹಾಕಿದ್ರೆ ಏನ್ ಮಾಡ್ತೀರಾ? ಗರಂ ಆದ ಇನ್ಸ್​​ಪೆಕ್ಟರ್

CET 2021: ಈ ಬಾರಿ ವಿದ್ಯಾರ್ಥಿಗಳಿಗೆ ಸಿಇಟಿ ಮೇಲೆ ಹೆಚ್ಚು ಒಲವು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳಿಂದ ನೊಂದಣಿ

(SSLC Exam 2021 58 students who tested Covid Positive wrote SSLC exams today says Education Minister Suresh Kumar )

Published On - 5:35 pm, Mon, 19 July 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ