AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ

BS Yediyurappa in Belagavi: ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ
TV9 Web
| Edited By: ಸಾಧು ಶ್ರೀನಾಥ್​|

Updated on:Jun 04, 2021 | 11:30 AM

Share

ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ ಇಲ್ಲವಾದರೆ SSLC ಪರೀಕ್ಷೆ ಮಾಡಲ್ಲ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. SSLC ವಿದ್ಯಾರ್ಥಿಗಳಿಗೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ ಬೆನ್ನಿಗೇ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೂ ಮುನ್ನ, SSLC ಪರೀಕ್ಷೆ ನಡೆಸುವುದೇ ಅಂತಿಮ ತೀರ್ಮಾನವಲ್ಲ. ಪರೀಕ್ಷೆ ನಡೆಸುವ ಸಮಯದಲ್ಲಿ ಕೊರೊನಾ 3ನೇ ಅಲೆ ಬಂದರೆ ಆಗಲೂ ಆ ತಕ್ಷಣಕ್ಕೆ ನಿರ್ಧಾರ ಮರುಪರಿಶೀಲಿಸುತ್ತೇವೆ. ಪರೀಕ್ಷೆ ನಡೆಸಬೇಕಾ, ಬೇಡವಾ ಎಂದು ನಿರ್ಧರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಬಿಮ್ಸ್​ಗೆ ಸಿಎಂ ಚುಚ್ಚುಮದ್ದು:

ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

( SSLC Exam 2021 to be conducted only of coronavirus reduces clarifies cm bs yediyurappa)

Published On - 11:26 am, Fri, 4 June 21

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ