AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ

BS Yediyurappa in Belagavi: ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ, ಬೆಳಗಾವಿ ಬಿಮ್ಸ್​ಗೆ ಶೀಘ್ರವೇ IAS ಆಡಳಿತಾಧಿಕಾರಿ: ಸಿಎಂ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ
TV9 Web
| Edited By: ಸಾಧು ಶ್ರೀನಾಥ್​|

Updated on:Jun 04, 2021 | 11:30 AM

Share

ಬೆಳಗಾವಿ: ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ SSLC ಪರೀಕ್ಷೆ ಇಲ್ಲವಾದರೆ SSLC ಪರೀಕ್ಷೆ ಮಾಡಲ್ಲ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಬೆಳಗಾವಿಯಲ್ಲಿ ಹೇಳಿದ್ದಾರೆ. SSLC ವಿದ್ಯಾರ್ಥಿಗಳಿಗೆ ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ ಬೆನ್ನಿಗೇ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಈ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೂ ಮುನ್ನ, SSLC ಪರೀಕ್ಷೆ ನಡೆಸುವುದೇ ಅಂತಿಮ ತೀರ್ಮಾನವಲ್ಲ. ಪರೀಕ್ಷೆ ನಡೆಸುವ ಸಮಯದಲ್ಲಿ ಕೊರೊನಾ 3ನೇ ಅಲೆ ಬಂದರೆ ಆಗಲೂ ಆ ತಕ್ಷಣಕ್ಕೆ ನಿರ್ಧಾರ ಮರುಪರಿಶೀಲಿಸುತ್ತೇವೆ. ಪರೀಕ್ಷೆ ನಡೆಸಬೇಕಾ, ಬೇಡವಾ ಎಂದು ನಿರ್ಧರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯ ಬಿಮ್ಸ್​ಗೆ ಸಿಎಂ ಚುಚ್ಚುಮದ್ದು:

ಬೆಳಗಾವಿ ಬಿಮ್ಸ್ ಆಸ್ಪತ್ರೆ ಅವ್ಯವಸ್ಥೆಯ ಬಗ್ಗೆ ಗೊತ್ತಿದೆ. ಬಿಮ್ಸ್ ನಿರ್ದೇಶಕ ವಿನಯ್ ದಾಸ್ತಿಕೊಪ್ಪ ರಜೆಯಲ್ಲಿದ್ದಾರೆ. ಬೆಳಗಾವಿಯ ಬಿಮ್ಸ್​ಗೆ ಶೀಘ್ರವೇ ಆಡಳಿತಾಧಿಕಾರಿಯನ್ನಾಗಿ ಐಎಎಸ್ ಅಧಿಕಾರಿಯನ್ನ ನೇಮಕ ಮಾಡ್ತೇವಿ ಎಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

( SSLC Exam 2021 to be conducted only of coronavirus reduces clarifies cm bs yediyurappa)

Published On - 11:26 am, Fri, 4 June 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ