AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2021: ಈಗಲೂ ಹಾಲ್​ ಟಿಕೆಟ್ ಸಿಗದ ವಿದ್ಯಾರ್ಥಿಗಳಿದ್ದರೆ ಬಿಇಒಗಳನ್ನು ಸಂಪರ್ಕಿಸಿ: ಸಚಿವ ಸುರೇಶ್ ಕುಮಾರ್

ಈ ತಿಂಗಳ ಕೊನೆಯಲ್ಲಿ ಹೇಗೆ ಶಾಲೆಗಳನ್ನು ಪ್ರಾರಂಭ ಮಾಡಬಹುದು, ಯಾವ ತರಗತಿಗಳನ್ನು ಪ್ರಾರಂಭ ಮಾಡಬಹುದು, ವಾರದಲ್ಲಿ‌ ಎಷ್ಟು ದಿನ ತರಗತಿಗಳನ್ನು ಮಾಡಬೇಕು ಎಂಬ ವರದಿಯನ್ನು ಈ ಕಾರ್ಯಪಡೆ ನೀಡಲಿದೆ. ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

SSLC Exam 2021: ಈಗಲೂ ಹಾಲ್​ ಟಿಕೆಟ್ ಸಿಗದ ವಿದ್ಯಾರ್ಥಿಗಳಿದ್ದರೆ ಬಿಇಒಗಳನ್ನು ಸಂಪರ್ಕಿಸಿ: ಸಚಿವ ಸುರೇಶ್ ಕುಮಾರ್
ಶಿಕ್ಷಣ ಸಚಿವ ಸುರೇಶ್ ಕುಮಾರ್
TV9 Web
| Edited By: |

Updated on: Jul 18, 2021 | 5:47 PM

Share

ರಾಮನಗರ: ನಾಳೆ(ಜುಲೈ 19) ಮತ್ತು ಜುಲೈ 22ರಂದು ನಡೆಯಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಕೊನೆ ಘಳಿಗೆಯಲ್ಲೂ ಯಾವುದೇ ವಿದ್ಯಾರ್ಥಿಗೆ ಹಾಲ್ ಟಿಕೆಟ್ ಸಿಗದಿದ್ದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ರಾಮನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಳ ಮಾಡಿದ್ದೇವೆ . ಪರೀಕ್ಷಾ ಕೊಠಡಿಗಳ ಸಂಖ್ಯೆ ಹಾಗೂ ಪರೀಕ್ಷಾ ಸಿಬ್ಬಂದಿಗಳ ಸಂಖ್ಯೆ ಹೆಚ್ಚಳವಾಗಿದೆ. ನಮ್ಮ ಪರೀಕ್ಷಾ ಕೇಂದ್ರಗಳು ಕೇವಲ‌ ಪರೀಕ್ಷಾ ಕೇಂದ್ರಗಳಲ್ಲ ಸುರಕ್ಷಾ ಕೇಂದ್ರಗಳು. ಮಕ್ಕಳು ಯಾವುದೇ ಆತಂಕವಿಲ್ಲದೇ ಬಂದು ಪರೀಕ್ಷೆ ಬರೆಯುತ್ತಾರೆ ವಿಶ್ವಾಸ ವ್ಯಕ್ತಪಡಿಸಿದರು.

ಗ್ರೀಷ್ಮಾ ಎಂಬ ವಿದ್ಯಾರ್ಥಿನಿಯದ್ದು ತಾಂತ್ರಿಕ ಸಮಸ್ಯೆ ಇತ್ತು. ಆಕೆ ಹತ್ತನೇ ತರಗತಿಗೆ ದಾಖಲಾಗಿರಲಿಲ್ಲ, ಪರೀಕ್ಷೆಗೆ ಅರ್ಜಿ‌ ಹಾಕಿರಲಿಲ್ಲ. ಇಂತಹ ದೂರುಗಳು ಬಂದಲ್ಲಿ ಸಮಸ್ಯೆ ಬಗೆಹರಿಸಿದ್ದೇವೆ. ಶಾಲಾ ಹಾಗೂ ಕಾಲೇಜು ಆರಂಭದ ಬಗ್ಗೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈ ತಿಂಗಳ ಕೊನೆಯಲ್ಲಿ ಹೇಗೆ ಶಾಲೆಗಳನ್ನು ಪ್ರಾರಂಭ ಮಾಡಬಹುದು, ಯಾವ ತರಗತಿಗಳನ್ನು ಪ್ರಾರಂಭ ಮಾಡಬಹುದು, ವಾರದಲ್ಲಿ‌ ಎಷ್ಟು ದಿನ ತರಗತಿಗಳನ್ನು ಮಾಡಬೇಕು ಎಂಬ ವರದಿಯನ್ನು ಈ ಕಾರ್ಯಪಡೆ ನೀಡಲಿದೆ. ಅದರ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಪರೀಕ್ಷೆ ನಡೆಸಲು ಸರ್ಕಾರ ಮತ್ತು ಶಿಕ್ಷಣ ಇಲಾಖೆ ಸರ್ವ ಸನ್ನದ್ಧವಾಗಿದೆ. ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಯನ್ನು ಚಾಚೂತಪ್ಪದೇ ಪಾಲಿಸಲು ಕ್ರಮವಹಿಸಿದ್ದೇವೆ. ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬಾರಿ 4,885 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 73,066 ಕೊಠಡಿಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: 

CET 2021: ಈ ಬಾರಿ ವಿದ್ಯಾರ್ಥಿಗಳಿಗೆ ಸಿಇಟಿ ಮೇಲೆ ಹೆಚ್ಚು ಒಲವು, ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳಿಂದ ನೊಂದಣಿ

Karnataka Weather: ಕರ್ನಾಟಕದಲ್ಲಿ ಜುಲೈ 21 ರ ತನಕ ಭಾರೀ ಮಳೆ ಸಾಧ್ಯತೆ; SSLC ಪರೀಕ್ಷೆಗೆ ತೆರಳುವಾಗ ಎಚ್ಚರದಿಂದಿರಿ ಮಕ್ಕಳೇ

(SSLC Exams 2021 Education Minister Suresh Kumar says please contact BEO if any students did not have hall Ticket)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?