Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exam 2021: ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಕೆಲ ಮಾಹಿತಿಗಳು ಇಲ್ಲಿದೆ

22 ರಂದು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ನಂತರ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ. ಕೊರೊನಾ ಕಾರಣ ಒಂದು ಕೊಠಡಿಯಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

SSLC Exam 2021: ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ; ಕೆಲ ಮಾಹಿತಿಗಳು ಇಲ್ಲಿದೆ
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on:Jul 18, 2021 | 8:38 AM

ಬೆಂಗಳೂರು: ನಾಳೆಯಿಂದ (ಜುಲೈ 19) ರಾಜ್ಯಾದ್ಯಂತ ಎಸ್ಎಸ್ಎಲ್​ಸಿ (SSLC) ಪರೀಕ್ಷೆ ಆರಂಭವಾಗುತ್ತಿದೆ. ನಾಳೆ ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಸಮಯವಿರುತ್ತದೆ. ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೊಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರು ಮತ್ತು 40,39,38 ಬಾಲಕಿಯರು ಪರೀಕ್ಷೆ ಬರೆಯುತ್ತಾರೆ. 22 ರಂದು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ನಂತರ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುತ್ತದೆ.

ಕೊರೊನಾ ಕಾರಣ ಒಂದು ಕೊಠಡಿಯಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಕೆಮ್ಮು, ನೆಗಡಿ, ಜ್ವರ ಇರುವ ಮಕ್ಕಳನ್ನು ವಿಶೇಷ ಕೊಠಡಿಯಲ್ಲಿ ಕೂರಿಸಲಾಗುವುದು.

ಪರೀಕ್ಷೆಗೆ 14,927 ಶಾಲೆಗಳನ್ನು ನೋಂದಾಯಿಸಲಾಗಿದೆ. 4,884 ರಷ್ಟು ಪರೀಕ್ಷಾ ಕೇಂದ್ರಗಳಿವೆ. ರಾಜ್ಯಾದ್ಯಂತ 73,066 ಪರೀಕ್ಷಾ ಕೊಠಡಿಗಳು ಇವೆ. 4,884 ಮುಖ್ಯ ಅಧೀಕ್ಷಕರು, 4,884 ಪ್ರಶ್ನೆಪತ್ರಿಕೆ ಅಭಿರಕ್ಷಕರು, 80,389 ಕೊಠಡಿ ಮೇಲ್ವಿಚಾರಕರು, 4,884 ಸ್ಥಾನಿಕ ಜಾಗೃತ ದಳದವರನ್ನು ನೇಮಕ ಮಾಡಲಾಗಿದೆ.

7,83,955 ಹೊಸ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಾರೆ. 977 ಪುನರಾವರ್ತಿತ ವಿದ್ಯಾರ್ಥಿಗಳು, 21,817 ಖಾಸಗಿ ವಿದ್ಯಾರ್ಥಿಗಳು, 9,419 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು, 392 ಹೊಸ ಸ್ಕೀಂ ವಿದ್ಯಾರ್ಥಿಗಳು ಮತ್ತು 21 ಹೊಸ ಸ್ಕೀಂ ಪುನರಾವರ್ತಿತ ವಿದ್ಯಾರ್ಥಿಗಳು ನಾಳೆ ಪರೀಕ್ಷೆ ಬರೆಯಲಿದ್ದಾರೆ.

ಇದನ್ನೂ ಓದಿ

SSLC Exam 2021: ಜುಲೈ 19 ಹಾಗೂ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

SSLC exam 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಕಡ್ಡಾಯ – ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಸ್ಪಷ್ಟನೆ

(SSLC exams will begin tomorrow and Here is some information)

Published On - 8:35 am, Sun, 18 July 21

ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
ಉಪ ಚುನಾವಣೆಯಲ್ಲಿ ಎಲ್ಲ ಸಮುದಾಯ ಕಾಂಗ್ರೆಸ್​ಗೆ ಮತ ನೀಡಿದೆ: ಸಿದ್ದರಾಮಯ್ಯ
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಬಿಜೆಪಿ ನಾಯಕರು ಹೇಳುವ ಸುಳ್ಳುಗಳನ್ನು ನಂಬಲು ಜನ ತಯಾರಿಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ತಂದೆ ನಿಧನ, ಪ್ರಧಾನಿ ಮೋದಿ ಅಂತಿಮ ನಮನ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿದ್ದರಾಮಯ್ಯ
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಕಾರಿಂದ ಇಳಿಯುವ ಮೊದಲು ಸುಮಾರು ಹೊತ್ತು ಫೋನಲ್ಲಿ ಸಿಎಂ ಮಾತು!
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ಪುನೀತ್ ತರಹೇವಾರಿ ಅಭಿಮಾನಿಗಳು, ಆದರೆ ಇಂಥ ಅಭಿಮಾನಿ ಪ್ರಾಯಶಃ ಕಾಣಸಿಗರು!
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು
ನಟನ ಹೆಸರಲ್ಲಿ ಅನ್ನದಾನ ಕಾರ್ಯಕ್ರಮ ಏರ್ಪಡಿಸಿರುವ ಬೀದಿಬದಿ ವ್ಯಾಪಾರಿಗಳು