AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸಾಗುವಾಗ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಸಾವು

SSLC 2021: ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ ಪುಟಪಾಕ ಗ್ರಾಮದ ನಿಶಿತಾ ಫಾತಿಮಾ(16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.

ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸಾಗುವಾಗ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಸಾವು
ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸಾಗುವಾಗ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಬಲಿ
TV9 Web
| Edited By: |

Updated on: Jul 15, 2021 | 9:50 AM

Share

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮತ್ತೊಂದು ಆಕಸ್ಮಿಕ ಘಟನೆ ನಡೆದಿದೆ. ಹಾಲ್ ಟಿಕೆಟ್ ತರಲು ಶಾಲೆಗೆ ಹೋದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಮಂಜುನಾಥ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದ. ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ಈ ದುರ್ಘಟನೆ ನಡೆದಿತ್ತು. ಇದೀಗ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ.

ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ (SSLC 2021) ಪುಟಪಾಕ ಗ್ರಾಮದ ನಿಶಿತಾ ಫಾತಿಮಾ (16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.

ಅಂದು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿತ್ತು:

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಮಂಜುನಾಥ್ ಎಂಬ ವಿದ್ಯಾರ್ಥಿ ಅಸುನೀಗಿದ್ದ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ದುರ್ಘಟನೆ ನಡೆದಿತ್ತು. ಹಾಲ್ ಟಿಕೆಟ್ ತರಲು ಮನೆಯಿಂದ‌ ಶಾಲೆಗೆ ಹೋದಾಗ ಈ ‌ದುರ್ಘಟನೆ ನಡೆದಿತ್ತು. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.

ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ. ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಈ ಆಕಸ್ಮಿಕ ನಡೆದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

(sslc girl student died due to heart attack in gurmitkal in yadgir)

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ