AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸಾಗುವಾಗ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಸಾವು

SSLC 2021: ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ ಪುಟಪಾಕ ಗ್ರಾಮದ ನಿಶಿತಾ ಫಾತಿಮಾ(16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.

ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸಾಗುವಾಗ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಸಾವು
ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸಾಗುವಾಗ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಬಲಿ
TV9 Web
| Edited By: ಸಾಧು ಶ್ರೀನಾಥ್​|

Updated on: Jul 15, 2021 | 9:50 AM

Share

ಯಾದಗಿರಿ: ಜಿಲ್ಲೆಯಲ್ಲಿ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮತ್ತೊಂದು ಆಕಸ್ಮಿಕ ಘಟನೆ ನಡೆದಿದೆ. ಹಾಲ್ ಟಿಕೆಟ್ ತರಲು ಶಾಲೆಗೆ ಹೋದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಮಂಜುನಾಥ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದ. ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ಈ ದುರ್ಘಟನೆ ನಡೆದಿತ್ತು. ಇದೀಗ ಎಸ್‌ಎಸ್ಎಲ್‌ಸಿ‌ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಯಾದಗಿರಿ ಜಿಲ್ಲೆ ಗುರುಮಠಕಲ್‌ ಬಸ್​ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಎಸ್‌ಎಸ್ಎಲ್‌ಸಿ‌ ಪರೀಕ್ಷೆಗೆಂದು ಹಾಲ್ ​ಟಿಕೆಟ್ ಪಡೆದು ಮನೆಗೆ ವಾಪಸ್​ ಬರುವಾಗ ಸಾವು ಸಂಭವಿಸಿದೆ.

ಜುಲೈ 19 ರಂದು ಪರೀಕ್ಷೆ ಬರೆಯಬೇಕಿದ್ದ (SSLC 2021) ಪುಟಪಾಕ ಗ್ರಾಮದ ನಿಶಿತಾ ಫಾತಿಮಾ (16) ಸಾವಿಗೀಡಾದ ದುರ್ದೈವಿ. ನಿಶಿತಾ ಫಾತಿಮಾ ಸರ್ಕಾರಿ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿನಿ. ಗ್ರಾಮಕ್ಕೆ ವಾಪಸ್​ ಹೋಗಲು ಬಸ್ ನಿಲ್ದಾಣದಲ್ಲಿ ಕುಳಿತಿದ್ದಾಗ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಳೆ.

ಅಂದು ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದಿತ್ತು:

ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಮಂಜುನಾಥ್ ಎಂಬ ವಿದ್ಯಾರ್ಥಿ ಅಸುನೀಗಿದ್ದ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಬಳಿ ದುರ್ಘಟನೆ ನಡೆದಿತ್ತು. ಹಾಲ್ ಟಿಕೆಟ್ ತರಲು ಮನೆಯಿಂದ‌ ಶಾಲೆಗೆ ಹೋದಾಗ ಈ ‌ದುರ್ಘಟನೆ ನಡೆದಿತ್ತು. ಮಂಜುನಾಥ್ (16), ಹಾಲ್‌ ಟಿಕೆಟ್‌ ತರಲು ಹೋಗಿ ಮೃತಪಟ್ಟ ವಿದ್ಯಾರ್ಥಿ.

ದಾರಿಯಲ್ಲಿ ಹೋಗುವಾಗ ಟ್ರ್ಯಾಕ್ಟರ್ ಚಾಲಕ ಶಾಲೆ‌ವರೆಗೆ ಬಿಡೋದಾಗಿ ಮಂಜುನಾಥನನ್ನು ತನ್ನ ಟ್ರ್ಯಾಕ್ಟರ್​ನಲ್ಲಿ ಕೂರಿಸಿಕೊಂಡು ಹೋಗಿದ್ದ. ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಈ ಆಕಸ್ಮಿಕ ನಡೆದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರ್ಯಾಕ್ಟರ್ ಪಲ್ಟಿ: ಹಾಲ್‌ ಟಿಕೆಟ್‌ ತರಲು ಹೋಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು‌

(sslc girl student died due to heart attack in gurmitkal in yadgir)

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ