AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Result: 50ರ ಗಡಿಯಲ್ಲಿದ್ದ ಫಲಿತಾಂಶ ಹೆಚ್ಚಿಸಲು ಕೃಪಾಂಕ ಹಾದಿ, ಆದರೂ 10% ರಿಸಲ್ಟ್ ಡೌನ್

ಪರೀಕ್ಷೆ ಬರೆದು ಮೂರು ತಿಂಗಳ ಬಳಿಕ ಮೊನ್ನೆ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪಾಸ್ ಆದ ವಿದ್ಯಾರ್ಥಿಗಳು ಸಂಭ್ರಮದಲ್ಲಿ ತೇಲಾಡಿದರು. ಇತ್ತ ಫೇಲ್ ಆದವರು ಟ್ರೈ ಅಗೇನ್ ಅಂತ ಮರು ಪರೀಕ್ಷೆಗೆ ತಯಾರಾಗುತ್ತಿದ್ದಾರೆ. ಶಿಕ್ಷಣ ಇಲಾಖೆ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಪಾಸಾಗಲು ತೆಗೆದುಕೊಳ್ಳಬೇಕಿದ್ದ ಅರ್ಹ ಅಂಕವನ್ನು ಕಡಿಮೆ ಮಾಡಿ, ಕೃಪಾಂಕ ಹೆಚ್ಚಿಸಿದರೂ ಕಳೆದ ಬಾರಿಗಿಂತ ಈ ಸಲ ಶೇ 10 ರಷ್ಟು ಫಲಿತಾಂಶ ಡೌನ್​ ಆಗಿದೆ..!

SSLC Result: 50ರ ಗಡಿಯಲ್ಲಿದ್ದ ಫಲಿತಾಂಶ ಹೆಚ್ಚಿಸಲು ಕೃಪಾಂಕ ಹಾದಿ, ಆದರೂ 10% ರಿಸಲ್ಟ್ ಡೌನ್
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ
ವಿನಯ್​ ಕಾಶಪ್ಪನವರ್​
| Edited By: ವಿವೇಕ ಬಿರಾದಾರ|

Updated on: May 12, 2024 | 8:34 AM

Share

ಬೆಂಗಳೂರು, ಮೇ 12: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಅಧ್ಯಕ್ಷೆ ಮಂಜುಶ್ರೀ ಅವರು ಗುರುವಾರ (ಮೇ 09) 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ (SSLC Result) ಪ್ರಕಟಿಸಿದ್ದಾರೆ. ಈ ಬಾರಿ ಪರೀಕ್ಷೆ ಬರೆದಿದ್ದ 8.59 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ.73.40ರಷ್ಟು ಫಲಿತಾಂಶ ದಾಖಲಾಗಿದೆ. ಕಳೆದ ವರ್ಷ ಶೇ.83.89ರಷ್ಟು ಫಲಿತಾಂಶಕ್ಕೆ ಹೋಲಿಸಿದರೆ ಶೇ.10.49ರಷ್ಟು ಕುಸಿತ ಕಂಡಿದೆ.

ವಿದ್ಯಾರ್ಥಿಗಳು ಉತ್ತೀರ್ಣರಾಗುವ ಇದ್ದ ಶೇ 35 ಅರ್ಹ ಅಂಕಗಳನ್ನು ಇಲಾಖೆ ಶೇ 25ಕ್ಕೆ ಇಳಿಸಿದೆ. ಅಲ್ಲದೆ ಈ ಬಾರಿ ಕೃಪಾಂಕವನ್ನೂ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಮೂರು ವಿಷಯಗಳಲ್ಲಿ 35 ಅಂಕ ಪಡೆದು ಇನ್ನುಳಿದ ಮೂರು ವಿಷಯಗಳಲ್ಲಿ ಫೇಲ್​ ಆಗಿದ್ದರೆ, ಆ ವಿದ್ಯಾರ್ಥಿಗೆ ಇಲಾಖೆ 10 ಕೃಪಾಂಕ ನೀಡಿ ಪಾಸ್​ ಮಾಡುತ್ತಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೃಪಾಂಕ ಪಡೆಯಲು ಇದ್ದ ಶೇ 35 ಅರ್ಹ ಅಂಕಗಳನ್ನು ಶೇ 25ಕ್ಕೆ ಇಳಿಸಿ 20 ಕೃಪಾಂಕ ನೀಡಲಾಗಿದೆ. ಈ ಕೃಪಾಂಕವನ್ನು ದುಪ್ಪಟ್ಟುಗೊಳಿಸದೆ ಹೋಗಿದ್ದರೆ ಫಲಿತಾಂಶ ಶೇ.53ಕ್ಕೆ ಕುಸಿಯುತ್ತಿತ್ತು. ಅಂದರೆ ಕಳೆದ ವರ್ಷಕ್ಕಿಂತ ಶೇ.30ರಷ್ಟು ಫಲಿತಾಂಶ ಇಳಿಕೆಯಾಗುತ್ತಿತ್ತು ಅಂತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಹೇಳಿದ್ದಾರೆ.

ಶೇ 75 ಪರ್ಸೆಂಟ್ ರಿಸಲ್ಟ್ ಬರಬೇಕು ಅನ್ನೋ ಉದ್ದೇಶದಿಂದ ಈ ಬಾರಿ ಏಕಾಏಕಿ 20 ಕೃಪಾಂಕ ಕೊಡಲಾಗಿದೆ. ಈ ಕೃಪಾಂಕ ನೀಡದಿದ್ದರೆ ಈ ಬಾರಿ ಶೇ50 ರಷ್ಟು ಫಲಿತಾಂಶ ಹೊರ ಬರುತ್ತಿತ್ತು. 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿದ್ದರೂ, ಕಳೆದ ಬಾರಿಗಿಂತ ಈ ಸಲ ಶೇ 10 ರಷ್ಟು ಫಲಿತಾಂಶ ಕುಸಿದಿದೆ. ಕಳಪೆ ಗುಣಮಟ್ಟ ಶಿಕ್ಷಣದ ಕೈಗನ್ನಡಿ. ತೇಪೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಅಂತ ಪೋಷಕರು ಕಿಡಿಕಾರಿದ್ದಾರೆ.

ಇದನ್ನೂ ಓದಿ: SSLC Exam 2 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಶಿಕ್ಷಣ ಇಲಾಖೆಯ ನಡೆಗೆ ಪೋಷಕ ಸಂಘಟನೆಗಳ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಾರಿಯ ಫಲಿತಾಂಶದ ಕುಸಿತಕ್ಕೆ ವೆಬ್ ಕಾಸ್ಟಿಂಗ್ ಕಾರಣ. ಪರೀಕ್ಷೆಗೂ ಮೊದಲೆ ವೆಬ್ ಕಾಸ್ಟಿಂಗ್​ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹೀಗಿದ್ದರೂ ಶಿಕ್ಷಣ ಇಲಾಖೆ ವೆಬ್ ಕಾಸ್ಟಿಂಗ್ ಮಾಡಿದೆ. ಈ ಬಾರಿ ನಡೆದ ಪರೀಕ್ಷೆಯಲ್ಲಿ ಮಕ್ಕಳು ನಕಲು ಮಾಡದೆ ಇದ್ದರೂ ಹೆದರಿ ಮಾನಸಿಕ ಸ್ಥೈರ್ಯ ಕಡಿಮೆ ಆಗಿ ಅನುತ್ತೀರ್ಣರಾಗಿದ್ದಾ ಎಂದು ಪೋಷಕ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಯೋಗಾನಂದ ಆರೋಪಿಸಿದ್ದಾರೆ.

ಒಟ್ಟಿನಲ್ಲಿ ಶಿಕ್ಷಣ ನೀತಿಯಲ್ಲಿನ ಗೊಂದಲವೊ, ಶೈಕ್ಷಣಿಕ ವ್ಯವಸ್ಥೆಯ ಕಾರಣವೊ, ವಿದ್ಯಾರ್ಥಿಗಳ ಆಸಕ್ತಿಯ ಕೊರತೆಯ ಕಾರಣವೊ, ಗೊತ್ತಿಲ್ಲ. ಈ ಬಾರಿಯ ಫಲಿತಾಂಶ ಕುಸಿತಿದೆ. ಇನ್ನು ಎರಡು ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುವ ಅವಕಾಶವಿದ್ದರೂ ಕೃಪಾಂಕ ನೀಡಿದ್ದು ಯಾಕೆ ಅನ್ನೋದೆ ಸದ್ಯದ ಪ್ರಶ್ನೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ