
ಕೋಲಾರ, ಏಪ್ರಿಲ್ 23: ಈಜಲು ಹೋಗಿ ನೀರುಪಾಲಾಗುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ತಲಕಾಡು ಬಳಿ ಮೊನ್ನೆ ಮೊನ್ನೆಯಷ್ಟೇ ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ಮಾಸುವ ಮುನ್ನವೇ ಇತ್ತ ಕೋಲಾರದಲ್ಲಿಯೂ SSLC ಪರೀಕ್ಷೆ ಪಾಸ್ ಆದ ಖುಷಿಯಲ್ಲಿದ್ದ ಬಾಲಕನೋರ್ವ ಈಜಲು ಹೋಗಿ ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಕಿರಣ್(15) ಮೃತ ಬಾಲಕನಾಗಿದ್ದು, ಎಸ್ಎಸ್ಎಲ್ಸಿ ಫಲಿತಾಂಶ ಬಂದ ಬಳಿಕ ಸ್ನೇಹಿತರ ಜೊತೆ ಈತ ಈಜಲು ತೆರಳಿದ್ದ ವೇಳೆ ಬಾವಿಯ ನೀರಲ್ಲಿ ಮುಳುಗಿ ಅವಘಡ ನಡೆದಿದೆ ಎನ್ನಲಾಗಿದೆ.
ರಘುಪತಿ ಎಂಬವರ ಪುತ್ರನಾದ ಕಿರಣ್, ಇಂದು ಎಸ್ಎಸ್ಎಲ್ಸಿ ಫಲಿತಾಂಶ ಬಂದ ಖುಷಿಯಲ್ಲಿದ್ದ. 625ಕ್ಕೆ 239 ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದ ಈತ ಪರೀಕ್ಷೆ ಪಾಸಾದೆ ಎಂದು ಸಂತಸಪಟ್ಟಿದ್ದ. ಆದರೆ ಈಜಲು ತೆರಳಿದ್ದ ಕಿರಣ್ ಸ್ಮಿಮ್ಮಿಂಗ್ ಬಾರದ ಕಾರಣ ಬಾವಿಯ ನೀರಲ್ಲಿ ಮುಳುಗಿದ್ದಾನೆ. ಘಟನೆ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕಿರಣ್ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕಾಲು ಜಾರಿ ಕೆರೆಗೆ ಬಿದ್ದ ಅಳಿಯನ ರಕ್ಷಣೆಗೆ ಹೋದ ಮಾವನೂ ಸಾವು; ಅತ್ತ ಪಿರಿಯಾಪಟ್ಟಣದಲ್ಲಿ ಇಬ್ಬರು ಯುವಕರು ನೀರು ಪಾಲು
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:58 pm, Thu, 23 April 26