AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ

ಪಿಜಿಯಲ್ಲಿ ನೇಣು ಬಿಗಿದುಕೊಂಡು 10ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಬೀದಿಯ ಪಿಜಿಯಲ್ಲಿ ನಡೆದಿದೆ. ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚಿಕ್ಕಮಗಳೂರು: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ
ಚಿಕ್ಕಮಗಳೂರು: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 30, 2024 | 10:33 PM

Share

ಚಿಕ್ಕಮಗಳೂರು, ಸೆಪ್ಟೆಂಬರ್​ 30: ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು ಎಸ್​ಎಸ್​ಎಲ್​ಸಿ (SSLC) ವಿದ್ಯಾರ್ಥಿ ಆತ್ಮಹತ್ಯೆ ಮಾಡಿರುವಂತಹ ಘಟನೆ ಶೃಂಗೇರಿಯ ಹರಿಹರ ಬೀದಿಯ ಪಿಜಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಸ್.ಕೆ.ಧ್ರುವ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಸದ್ಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕೊಳಲು ನುಡಿಸುವ ಶಾಲೆಗೆ ಸೇರಿಸುವಂತೆ ಪೋಷಕರಿಗೆ ಧ್ರುವ ಒತ್ತಾಯ ಮಾಡಿದ್ದಾನೆ. ಆದರೆ ಎಸ್​ಎಸ್​ಎಲ್​ಸಿ ವ್ಯಾಸಂಗ ಮುಗಿದ ನಂತರ ಸೇರಿಸುವುದಾಗಿ ಪೋಷಕರು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಧ್ರುವ ಪರೀಕ್ಷೆಗೆ ಗೈರಾಗಿ ಪಿಜಿಯಲ್ಲಿದ್ದಾಗ ನೇಣಿಗೆ ಶರಣಾಗಿದ್ದಾನೆ.

ಸಾವಿನಲ್ಲೂ ಒಂದಾದ ದಂಪತಿ

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಕೆಳಗೋಟೆಯ ಸಂಗಮೇಶ್ವರ ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಎಸ್ ಜೆ ಎಂ ವಿದ್ಯಾಸಂಸ್ಥೆಯಲ್ಲಿ ಗ್ರಂಥ ಪಾಲಕರಾಗಿ ಸೇವೆ ಸಲ್ಲಿಸಿದ್ದ ಓಂಕಾರಮೂರ್ತಿ(66) ನಿನ್ನೆ ಮದ್ಯ ರಾತ್ರಿ ವೇಳೆ ಅಸ್ವಸ್ಥರಾಗಿದ್ದಾರೆ. ಗ್ಯಾಸ್ಟಿಕ್ ಮಾತ್ರೆ ತೆಗೆದುಕೊಂಡು ಮಲಗಿದ್ದಾರೆ.

ಇದನ್ನೂ ಓದಿ: ತಿರುಪತಿಗೆ ತೆರಳಿದ್ದ 3 ಸ್ನೇಹಿತರಲ್ಲಿ ಒಬ್ಬ ನಾಪತ್ತೆ, ಒಬ್ಬ ಆತ್ಮಹತ್ಯೆ, ಒಬ್ಬ ಜೀವಂತ: ಹುಬ್ಬಳ್ಳಿಯಲ್ಲೊಂದು ಮಿಸ್ಸಿಂಗ್ ಮಿಸ್ಟರಿ ಕಥೆ‌!

ಬೆಳಗ್ಗೆ 6ಗಂಟೆಗೆ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದಾರೆ. ಲೋಬಿಪಿಯಿಂದ ಹೃದಯಾಘಾತ ಆಗಿದೆ ಎಂದು ತಿಳಿದಾಗ ಪತ್ನಿ ದ್ರಾಕ್ಷಾಯಿಣಿ(61) ಆಸ್ಪತ್ರೆ ಬಳಿಯೇ ಕುಸಿದು ಬಿದ್ದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇತ್ತ ಕೆಲಹೊತ್ತಿನಲ್ಲೇ ಚಿಕಿತ್ಸೆ ಫಲಿಸದೆ ಓಂಕಾರಮೂರ್ತಿ ಅವರೂ ಸಹ ಸಾವಿಗೀಡಾಗಿದ್ದಾರೆ. ಆ ಮೂಲಕ ಸುಮಾರು ನಾಲ್ಕು ದಶಕಗಳ ಕಾಲ ಅನ್ಯೋನ್ಯವಾಗಿದ್ದ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಬೆಂಗಳೂರು: ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ ಮಾಡಿರುವಂತಹ ಘಟನೆ ಜ್ಞಾನಭಾರತಿಯ ಸಣ್ಣೇನಹಳ್ಳಿಯಲ್ಲಿ ನಡೆದಿದೆ. ಮೂರ್ತಿ‌(52) ಕೊಲೆ ಮಾಡಿ ಆರೋಪಿ ಕೀರ್ತಿ ಪರಾರಿ ಆಗಿದ್ದಾನೆ. ಒಂದೇ ಏರಿಯಾದಲ್ಲಿ ಮೂರ್ತಿ, ಆರೋಪಿ ಕೀರ್ತಿ ವಾಸವಿದ್ದರು.

ಇದನ್ನೂ ಓದಿ: ಕಬಾಬ್ ತರಲು ಹೋದ ಯುವಕ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ರಾತ್ರಿ ಮಹಾಲಯ ಅಮಾವಾಸ್ಯೆ ಪೂಜೆ ಮಾಡಿ ಮದ್ಯ ಸೇವಿಸಿದ್ದರು. ಈ ವೇಳೆ ಗಲಾಟೆಯಾಗಿ ಮೂರ್ತಿಗೆ ಕೀರ್ತಿ ಚಾಕು ಇರಿದಿದ್ದಾನೆ. ಆರೋಪಿ ಕೀರ್ತಿ ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆಸಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ