AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ: ಎಸ್ ಟಿ ಸೋಮಶೇಖರ್

ಕೊವಿಡ್‌ನಿಂದ 10,400 ಸಾಲಗಾರ ರೈತರು ಮೃತಪಟ್ಟಿದ್ದಾರೆ. ಇವರ ಸಾಲದ ಮೊತ್ತದಲ್ಲಿ ತಲಾ 1 ಲಕ್ಷ ರೂಪಾಯಿ ಮನ್ನಾ ಮಾಡಲಾಗುವುದು. ಇದರಿಂದಾಗಿ ಸರ್ಕಾರಕ್ಕೆ 81 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಸೋಮಶೇಖರ್ ಹೇಳಿದ್ದಾರೆ.

ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ: ಎಸ್ ಟಿ ಸೋಮಶೇಖರ್
ಸಚಿವ ಎಸ್​.ಟಿ ​ಸೋಮಶೇಖರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 14, 2021 | 8:20 PM

Share

ಮಂಗಳೂರು: ಕೊವಿಡ್‌ನಿಂದ ಮೃತಪಟ್ಟ ರೈತರ ಸಾಲಮನ್ನಾಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ. ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಈ ಬಗ್ಗೆ ಮಂಗಳೂರಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಕೊವಿಡ್‌ನಿಂದ 10,400 ಸಾಲಗಾರ ರೈತರು ಮೃತಪಟ್ಟಿದ್ದಾರೆ. ಇವರ ಸಾಲದ ಮೊತ್ತದಲ್ಲಿ ತಲಾ 1 ಲಕ್ಷ ರೂಪಾಯಿ ಮನ್ನಾ ಮಾಡಲಾಗುವುದು. ಇದರಿಂದಾಗಿ ಸರ್ಕಾರಕ್ಕೆ 81 ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಸೋಮಶೇಖರ್ ಹೇಳಿದ್ದಾರೆ.

ಕೊರೊನಾ ಸಂಕಷ್ಟ ಕಾಲದಲ್ಲಿ ಹಲವು ಪರಿಹಾರ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಚಾಲಕರಲ್ಲಿ ಚೈತನ್ಯ ತುಂಬಲು ಪ್ರತಿ ಚಾಲಕರಿಗೂ ರಾಜ್ಯ ಸರ್ಕಾರ ತಲಾ ₹ 5 ಸಾವಿರ ಪರಿಹಾರ ಘೋಷಿಸಿತ್ತು. ಬಳಿಕ, ಪರಿಹಾರ ಮಂಜೂರಾತಿಗೆ ಸರ್ಕಾರ ಆದೇಶ ಹೊರಡಿಸಿತ್ತು.

ಆಟೋ, ಟ್ಯಾಕ್ಸಿ, ಕಾರು ಚಾಲಕರಿಗೆ ಪರಿಹಾರ ವಿಚಾರವಾಗಿ ಸಾರಿಗೆ ಇಲಾಖೆ ಮಹತ್ವದ ಮಾಹಿತಿ ನೀಡಿತ್ತು. ಕೊರೊನಾ ಲಾಕ್​ಡೌನ್ ಸಂಕಷ್ಟ, ಆರ್ಥಿಕ ಹೊಡೆತ ಸುಧಾರಿಸಿಕೊಳ್ಳಲು ಕರ್ನಾಟಕ ಸರ್ಕಾರ ಘೋಷಿಸಿರುವ ಪರಿಹಾರ ಪ್ಯಾಕೇಜ್ ಬಳಕೆ ಮಾಡುವ ಬಗ್ಗೆ ಮಾಹಿತಿ ನೀಡಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿದ್ದ 3000 ರೂಪಾಯಿ ಪರಿಹಾರ ಪ್ಯಾಕೇಜ್​ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ತಿಳಿಸಿತ್ತು.

ಆಟೋ, ಟ್ಯಾಕ್ಸಿ, ಕಾರು ಚಾಲಕರು ಕೊರೊನಾ ಲಾಕ್​ಡೌನ್ ಪರಿಹಾರ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅರ್ಜಿ ಸಲ್ಲಿಸಲು ಜುಲೈ 15ರ ಸಂಜೆ 6 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿತ್ತು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ಪ್ರಕಟಿಸಿದೆ. ಅದರಂತೆ, ಜುಲೈ 15, ಗುರುವಾರ ಸಂಜೆ 6 ಗಂಟೆಯವರೆಗೆ ಸಮಯಾವಕಾಶ ಇರಲಿದೆ.

ಇದನ್ನೂ ಓದಿ: ಹೂವು ಬೆಳೆಗಾರರಿಗೆ ಆಷಾಢ ಸಂಕಷ್ಟ; ವ್ಯಾಪಾರವಿಲ್ಲದೆ ಚಿಕ್ಕಬಳ್ಳಾಪುರ ರೈತರು ಕಂಗಾಲು

ಮೆಕ್ಕೆಜೋಳ ಬೀಜ ಬಿತ್ತನೆ ಮಾಡಿ 15 ದಿನಗಳಾದರೂ ಇನ್ನೂ ಮೊಳಕೆ ಒಡೆದಿಲ್ಲ; ಧಾರವಾಡ ರೈತರಲ್ಲಿ ಹೆಚ್ಚಿದ ಆತಂಕ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್