AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ

ನಿನ್ನೆ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿದ್ದ ಹಿನ್ನಲೆಯಲ್ಲಿ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಸಂತೋಷ ಮುಗಿಲುಮುಟ್ಟಿತ್ತು. ಆದರೆ ಈ ವೇಳೆ ಮಂಗಳೂರಿನಲ್ಲಿ ಇಬ್ಬರಿಗೆ ಚೂರಿಯಾಗಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ‌ ಠಾಣೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಭಾರತ್ ಮಾತಕೀ ಜೈ ಘೋಷಣೆ ಕೂಗಿದ ವಿಚಾರಕ್ಕೆ ಚೂರಿ ಇರಿಯಲಾಗಿತ್ತು.

ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ
ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಚೂರಿ ಇರಿತ ಕೇಸ್​: ಐವರ ಬಂಧನ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Jun 10, 2024 | 8:54 PM

Share

ಮಂಗಳೂರು, ಜೂನ್​​ 10: ಬಿಜೆಪಿ (BJP) ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ (Stabbing) ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಣಾಜೆ‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18), ಹಫೀಝ್(24) ಬಂಧಿತರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಎಂಬಲ್ಲಿ ನಿನ್ನೆ ರಾತ್ರಿ ಭಾರತ್ ಮಾತಕೀ ಜೈ ಘೋಷಣೆ ಕೂಗಿದ ವಿಚಾರಕ್ಕೆ ಚೂರಿ ಇರಿಯಲಾಗಿತ್ತು. ಹರೀಶ್ ಮತ್ತು ನಂದ ಕುಮಾರ್ ಚೂರಿ ಇರಿತಕ್ಕೆ ಒಳಗಾದವರು.

ಮಸೀದಿ ಮುಂದೆ ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪ: ದೂರು

ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಮಸೀದಿ ಮುಂದೆ ಪ್ರಚೋದನಕಾರಿ ಘೋಷಣೆ ಕೂಗಿದಾರೆಂದು‌ ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲಾ ರಿಂದ ಪೊಲೀಸ್ ದೂರು ನೀಡಲಾಗಿದೆ. ಮಸೀದಿಯ ಹೊರಗೆ ನಿಂತಿದ್ದ ಜನರನ್ನು ನಿಂದಿಸಿದ ಆರೋಪ ಕೂಡ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಎಂಬಲ್ಲಿ ನಿನ್ನೆ ನಡೆದಿದ್ದ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿಜಯೋತ್ಸವ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರಿಗೆ ಚಾಕು ಇರಿತ, ಮೂವರು ವಶಕ್ಕೆ

ದೂರಿನ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಕೊಣಾಜೆ ಠಾಣೆ ಪೊಲೀಸರು, ಆರೋಪಿಗಳಾದ ಸುರೇಶ್, ವಿನಯ್, ಸುಭಾಷ್, ರಂಜಿತ್, ಧನಂಜಯ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾನೂನು ಕೈಗೆ ತೆಗೆದುಕೊಂಡಾಗ ಕ್ಷಮೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಕಾನೂನು ಪ್ರಕಾರ ಕ್ರಮವಾಗುತ್ತಿರುವಾಗ ನಮ್ಮ ಹಸ್ತಕ್ಷೇಪವಿಲ್ಲ. ಈಗಾಗಲೇ ಮೂರ್ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ. ನಿಷ್ಪಕ್ಷಪಾತವಾಗಿ ಕ್ರಮವಾಗುತ್ತೆ, ಇದರಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಭಾರತ್ ಮಾತಾ ಕೀ ಜೈ ಎಂದವರ ಮೇಲೆ ದಾಳಿ, ಚೂರಿ ಇರಿತ; ಸಿಸಿಟಿವಿ ದೃಶ್ಯ ಇಲ್ಲಿದೆ

ಕಾನೂನು ಕೈಗೆ ತೆಗೆದುಕೊಂಡಾಗ ಕ್ಷಮಿಸುವುದಕ್ಕೆ ಆಗುವುದಿಲ್ಲ. ಕಾನೂನು ಕೈಗೆ ತೆಗೆದುಕೊಂಡವರ ಮೇಲೆ ಕಾನೂನು ಕ್ರಮ ಆಗಬೇಕು. ಇಂತಹ ಘಟನೆ ಆದಾಗ ಸರ್ಕಾರ ರಾಜಕಾರಣಿಗಳು ತಟಸ್ಥವಾಗಿರಬೇಕು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:40 pm, Mon, 10 June 24

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ