AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ಸಮಯದಲ್ಲಿ ಆಸ್ಪತ್ರೆ ಬಾಗಿಲನ್ನು ತೆರೆಯದೆ ಸಿಬ್ಬಂದಿ ಅಸಡ್ಡೆ; ಕರ್ತವ್ಯ ಲೋಪಕ್ಕೆ ವೈದ್ಯ ಡಾ.ನಾಗರಾಜ ಪಾಟೀಲ್ ಅಮಾನತು

ಕೊಪ್ಪಳ: ಸಮುದಾಯ ಆರೋಗ್ಯ ಕೇಂದ್ರದ ಬಾಗಿಲಲ್ಲೇ ಮಹಿಳೆಗೆ ಹೆರಿಗೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ವೈದ್ಯ ಡಾ.ನಾಗರಾಜ ಪಾಟೀಲ್ ಹಾಗೂ ಶುಶ್ರೂಷಕ ಬಸವರಾಜ ಅವರನ್ನು ಅಮಾನತು ಮಾಡುವಂತೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕನಕಗಿರಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಬಾಗಿಲಲ್ಲಿ, ಗೌರಿಪುರ ಗ್ರಾಮದ ಬೃಂದಾ ಎಂಬ ಮಹಿಳೆಯ ಹೆರಿಗೆಯಾಗಿತ್ತು. ಹೆರಿಗೆ ಸಮಯದಲ್ಲಿ ಬಾಗಿಲು ಬಳಿ ಬಂದು ನಿಂತರೂ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಬಾಗಿಲು ತೆರೆಯದೇ ಹೊರಗೇ ನಿಲ್ಲಿಸಿದ್ದರು. ತೀವ್ರ ಹೆರಿಗೆ ನೋವು […]

ಹೆರಿಗೆ ಸಮಯದಲ್ಲಿ ಆಸ್ಪತ್ರೆ ಬಾಗಿಲನ್ನು ತೆರೆಯದೆ ಸಿಬ್ಬಂದಿ ಅಸಡ್ಡೆ; ಕರ್ತವ್ಯ ಲೋಪಕ್ಕೆ  ವೈದ್ಯ ಡಾ.ನಾಗರಾಜ ಪಾಟೀಲ್ ಅಮಾನತು
ವೈದ್ಯ ನಾಗರಾಜ್ ಪಾಟೀಲ್ ಹಾಗೂ ಶುಶ್ರೂಷಕ ಬಸವರಾಜ
Follow us
shruti hegde
| Updated By: ಸಾಧು ಶ್ರೀನಾಥ್​

Updated on: Mar 03, 2021 | 11:51 AM

ಕೊಪ್ಪಳ: ಸಮುದಾಯ ಆರೋಗ್ಯ ಕೇಂದ್ರದ ಬಾಗಿಲಲ್ಲೇ ಮಹಿಳೆಗೆ ಹೆರಿಗೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ವೈದ್ಯ ಡಾ.ನಾಗರಾಜ ಪಾಟೀಲ್ ಹಾಗೂ ಶುಶ್ರೂಷಕ ಬಸವರಾಜ ಅವರನ್ನು ಅಮಾನತು ಮಾಡುವಂತೆ ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಕನಕಗಿರಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಬಾಗಿಲಲ್ಲಿ, ಗೌರಿಪುರ ಗ್ರಾಮದ ಬೃಂದಾ ಎಂಬ ಮಹಿಳೆಯ ಹೆರಿಗೆಯಾಗಿತ್ತು. ಹೆರಿಗೆ ಸಮಯದಲ್ಲಿ ಬಾಗಿಲು ಬಳಿ ಬಂದು ನಿಂತರೂ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಬಾಗಿಲು ತೆರೆಯದೇ ಹೊರಗೇ ನಿಲ್ಲಿಸಿದ್ದರು. ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮುಖ್ಯ ದ್ವಾರದಲ್ಲೇ ಮಹಿಳೆ ಬೃಂದಾ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಗಿಲು ತೆರೆಯದೇ ಕರ್ತವ್ಯ ಲೋಪ ಮಾಡಿದ್ದರಿಂದ ಡಾ.ನಾಗರಾಜ ಪಾಟೀಲ್​ ಮತ್ತು ಶುಶ್ರೂಷಕ ಬಸವರಾಜರನ್ನು ಅಮಾನತುಗೊಳಿಸಲಾಗಿದೆ.

ಬೃಂದಾ, ಹೆರಿಗೆ ನೋವಿನಿಂದ ಬೆಳಗಿನ ಜಾವ 6 ಗಂಟೆಗೆ ಆಸ್ಪತ್ರೆಗೆ ಬಂದಿದ್ದಾರೆ. ಆದ್ರೆ ಸಿಬ್ಬಂದಿ ಆಸ್ಪತ್ರೆ ಬಾಗಿಲು ತೆರೆಯದೆ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ ಯಾವೊಬ್ಬ ವೈದ್ಯ ಸಹ ಮಹಿಳೆಗೆ ಚಿಕಿತ್ಸೆ ನೀಡಲು ಮುಂದಾಗಿಲ್ಲ.

ಅದಾದ ಬಳಿಕ ಆಸ್ಪತ್ರೆಯ ಮುಂಭಾಗದಲ್ಲೇ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಗರ್ಭಿಣಿ ಜೊತೆ ಬಂದಿದ್ದ ಹಿರಿಯ ಮಹಿಳೆಯರೇ ಹೆರಿಗೆ ಮಾಡಿಸಿದ್ದು ಸದ್ಯ ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆಯ ಬೇಜವಾಬ್ದಾರಿತನಕ್ಕೆ ಕುಟುಂಬಸ್ಥರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಇಷ್ಟೆಲ್ಲ ಆದ ಬಳಿಕ ಆಸ್ಪತ್ರೆ ಸಿಬ್ಬಂದಿ ತಾಯಿ-ಮಗುವನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದರು. ಆದರೆ, ನೈಟ್ ಶಿಫ್ಟ್​ನಲ್ಲಿರುವ ವೈದ್ಯರನ್ನು ಅಮಾನತು ಮಾಡಿ, ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದರು.

suspend letter koppala

ವೈದ್ಯರನ್ನು ಅಮಾನತು ಮಾಡುವಂತೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

suspend letter koppala

ಅಮಾನತು ಮಾಡುವಂತೆ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ

ಇದನ್ನೂ ಓದಿ: ಚಿಕಿತ್ಸೆ ಹಾಗಿರಲಿ, ಆಸ್ಪತ್ರೆ ಬಾಗಿಲನ್ನೂ ತೆರೆಯದೆ ಸಿಬ್ಬಂದಿ ಅಸಡ್ಡೆ: ಆಸ್ಪತ್ರೆ ಹೊರಗಡೆಯೇ ಮಗುವಿಗೆ ಜನ್ಮ ನೀಡಿದ ತಾಯಿ

ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಕೇವಲ 180 ಮೀಟರ್​​ ದೂರಕ್ಕೆ ಓಲಾ ಬೈಕ್ ಬುಕ್ ಮಾಡಿದ ಯುವತಿ
ಕೇವಲ 180 ಮೀಟರ್​​ ದೂರಕ್ಕೆ ಓಲಾ ಬೈಕ್ ಬುಕ್ ಮಾಡಿದ ಯುವತಿ