AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು; ​ಪ್ರಯಾಣಿಕರ ಆಕ್ರೋಶ

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯ ಹಿನ್ನೆಲೆ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಅದರಂತೆ, ಹೈದರಾಬಾದ್​ಗೆ ತೆರಳಲು ಆಗದೆ 70 ಪ್ರಯಾಣಿಕರು ಪರದಾಟ ನಡೆಸಿದರು. ಪ್ರಯಾಣಿಕರಿಗೆ ಯಾವುದೇ ವ್ಯವಸ್ಥೆ ಮಾಡದಿರುವ ಕಾರಣಕ್ಕೆ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು; ​ಪ್ರಯಾಣಿಕರ ಆಕ್ರೋಶ
ಶಿವಮೊಗ್ಗದಿಂದ ಹೈದರಾಬಾದ್​ಗೆ ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್ ವಿಮಾನ ಹಾರಾಟ ರದ್ದು (ಸಾಂದರ್ಭಿಕ ಚಿತ್ರ)
Basavaraj Yaraganavi
| Edited By: |

Updated on:Dec 09, 2023 | 8:28 PM

Share

ಶಿವಮೊಗ್ಗ, ಡಿ.9: ಹವಾಮಾನ ವೈಪರೀತ್ಯ ಹಿನ್ನೆಲೆ ಜಿಲ್ಲೆಯಿಂದ ಹೈದರಾಬಾದ್​ಗೆ (Shivamogga To Hyderabad) ತೆರಳಬೇಕಿದ್ದ ಸ್ಟಾರ್ ಏರ್​ಲೈನ್ಸ್​ (Star Airlines) ವಿಮಾನ ಹಾರಾಟ ರದ್ದುಗೊಳಿಸಲಾಗಿದೆ. ಸಂಜೆ 4.30ಕ್ಕೆ ಶಿವಮೊಗ್ಗದಿಂದ ಹೈದರಾಬಾದ್​ಗೆ ಈ ವಿಮಾನ ತೆರಳಬೇಕಿತ್ತು.

ಶಿವಮೊಗ್ಗದಿಂದ ಹೈದರಾಬಾದ್​ಗೆ ಸ್ಟಾರ್ ಏರ್​ಲೈನ್ಸ್ ವಿಮಾನದಲ್ಲಿ ಸುಮಾರು 70 ಪ್ರಯಾಣಿಕರು ಪ್ರಯಾಣ ಕೈಗೊಳ್ಳಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ಹಾರಾಟ ರದ್ದುಗೊಂಡ ಹಿನ್ನೆಲೆ ಕಳೆದ 3 ಗಂಟೆಯಿಂದ ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರು ಪರದಾಟ ನಡೆಸಿದರು. ವಿಮಾನ ಹಾರಾಟಕ್ಕಾಗಿ ಕಾದು ಸುಸ್ತಾದರು.

ಇದನ್ನೂ ಓದಿ: IND vs SA: ಹರಿಣಗಳ ಬೇಟೆಯಾಡಲು ಬೆಂಗಳೂರಿನಿಂದ ವಿಮಾನ ಹತ್ತಿದ ಟೀಂ ಇಂಡಿಯಾ

ಸ್ಟಾರ್ ಏರ್ ಲೈನ್ಸ್​​ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ವಿಮಾನದಲ್ಲಿ ಕುಳಿತಿದ್ದ ಪ್ರಯಾಣಿಕರು ವಾಪಸ್ ಆದರು. ಅಲ್ಲದೆ, ಯಾವುದೇ ವ್ಯವಸ್ಥೆ ಮಾಡದ ವಿಮಾನ ಸಂಸ್ಥೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Sat, 9 December 23

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ