AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್, ಅತೃಪ್ತಿ ಮಧ್ಯೆ ಯಾಱರಿಗೆ ಸಿಗುತ್ತೆ ಮಂತ್ರಿ ಸ್ಥಾನ?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಂದೇ ದಿನ ಬಾಕಿ ಇದೆ. ತಲೆನೋವಾಗುವ ಮಟ್ಟಕ್ಕೆ ಇದ್ದ ಬಿಜೆಪಿಯೊಳಗಿನ ಅಸಮಾಧಾನ ಒಂದಷ್ಟು ಮಟ್ಟಿಗೆ ತಣಿದಂತಾಗಿದೆ. ಮತ್ತೊಂದೆಡೆ, ತಿರುಪತಿಗೆ ತೆರಳಿದ್ದ ಶಾಸಕರು ರಾತ್ರಿ ಬೆಂಗಳೂರಿಗೆ ವಾಪಾಸಾಗಿದ್ದಾರೆ. ನಿತ್ಯ ಸರ್ಕಸ್. ದಿನಕ್ಕೊಂದು ಹೈಡ್ರಾಮಾ. ನಿರಂತರ ಹಗ್ಗಜಗ್ಗಾಟ. ಕಗ್ಗಂಟಾಗಿ ಕಾಡುತ್ತಿದ್ದ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್ ಶುರುವಾಗಿದೆ. ಸಚಿವ ಸ್ಥಾನ ಅಲಂಕರಿಸೋಕೆ ಹಾತೊರೆಯುತ್ತಿದ್ದ ಆಕಾಂಕ್ಷಿಗಳಲ್ಲಿ ಕಾತರ ಕುತೂಹಲ ಮನೆ ಮಾಡಿದೆ. ಎಲ್ಲರೂ ಸಿಎಂ ಕರೆಯತ್ತ ಚಿತ್ತ ನೆಟ್ಟು ಕೂರುವಂತಾಗಿದೆ. ಯಾಕಂದ್ರೆ, ಸಚಿವ ಸಂಪುಟ ಸೇರೋದ್ಯಾರು ಅನ್ನೋ […]

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್, ಅತೃಪ್ತಿ ಮಧ್ಯೆ ಯಾಱರಿಗೆ ಸಿಗುತ್ತೆ ಮಂತ್ರಿ ಸ್ಥಾನ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 05, 2020 | 7:10 AM

Share

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಂದೇ ದಿನ ಬಾಕಿ ಇದೆ. ತಲೆನೋವಾಗುವ ಮಟ್ಟಕ್ಕೆ ಇದ್ದ ಬಿಜೆಪಿಯೊಳಗಿನ ಅಸಮಾಧಾನ ಒಂದಷ್ಟು ಮಟ್ಟಿಗೆ ತಣಿದಂತಾಗಿದೆ. ಮತ್ತೊಂದೆಡೆ, ತಿರುಪತಿಗೆ ತೆರಳಿದ್ದ ಶಾಸಕರು ರಾತ್ರಿ ಬೆಂಗಳೂರಿಗೆ ವಾಪಾಸಾಗಿದ್ದಾರೆ.

ನಿತ್ಯ ಸರ್ಕಸ್. ದಿನಕ್ಕೊಂದು ಹೈಡ್ರಾಮಾ. ನಿರಂತರ ಹಗ್ಗಜಗ್ಗಾಟ. ಕಗ್ಗಂಟಾಗಿ ಕಾಡುತ್ತಿದ್ದ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್ ಶುರುವಾಗಿದೆ. ಸಚಿವ ಸ್ಥಾನ ಅಲಂಕರಿಸೋಕೆ ಹಾತೊರೆಯುತ್ತಿದ್ದ ಆಕಾಂಕ್ಷಿಗಳಲ್ಲಿ ಕಾತರ ಕುತೂಹಲ ಮನೆ ಮಾಡಿದೆ. ಎಲ್ಲರೂ ಸಿಎಂ ಕರೆಯತ್ತ ಚಿತ್ತ ನೆಟ್ಟು ಕೂರುವಂತಾಗಿದೆ. ಯಾಕಂದ್ರೆ, ಸಚಿವ ಸಂಪುಟ ಸೇರೋದ್ಯಾರು ಅನ್ನೋ ಗುಟ್ಟು ರಟ್ಟಾಗಿಲ್ಲ.

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್..! ಯೆಸ್. ರಾಜ್ಯ ಸಂಪುಟ ವಿಸ್ತರಣೆಗೆ ಇನ್ನೊಂದೇ ದಿನ ಬಾಕಿ ಇದೆ. ಜೆಷ್ಟ್ ಶಾಸಕರಾಗಿದ್ದ ಕೆಲವರು ನಾಳೆ ಮಂತ್ರಿ ಆಗ್ತಾರೆ. ಆದ್ರೆ, ಶಾಸಕರಲ್ಲದವರಿಗೆ ಸಚಿವ ಸ್ಥಾನ ನೀಡ್ತಿರೋದು ಕೇಸರಿ ಪಡೆಯಲ್ಲಿ ಕೋಲಾಹಲ ಎಬ್ಬಿಸಿದೆ. ಅದ್ರಲ್ಲೂ ಸಿ.ಪಿ. ಯೋಗೇಶ್ವರ್ ಸಚಿವರಾಗುತ್ತಾರೆ ಅನ್ನೋ ವಿಚಾರವಾಗಿ ಕಿತ್ತಾಟ ತಾರಕಕ್ಕೇರಿದೆ.

ಆದ್ರೆ, ಮೊನ್ನೆ ಯೋಗೇಶ್ವರ್​ಗೆ ಸಚಿವ ಸ್ಥಾನ ಬೇಡ ಅಂತಾ ಬಹಿರಂಗ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕರು, ನಿನ್ನೆ ಸಭೆ ನಡೆಸಿದ್ದು‌ ಹೊರತುಪಡಿಸಿದರೆ ಬಹಿರಂಗ ಪ್ರತಿಕ್ರಿಯೆಯಿಂದ ದೂರ ಉಳಿದಿದ್ದಾರೆ. ಹೀಗಾಗಿ, ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಇಂದು ಸಭೆ ನಡೆಸುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಮತ್ತೊಂದೆಡೆ ಕರಾವಳಿ ಕರ್ನಾಟಕ ಭಾಗದ ಶಾಸಕರ ಬೇಸರವನ್ನು‌ ಬೆಳೆಯುವ ಮುನ್ನವೇ ಶಮನಗೊಳಿಸುವ ಕೆಲಸವೂ ನಡೆದುಹೋಗಿದೆ.

ತಿರುಪತಿಯಿಂದ ವಾಪಸ್ ಬಂದ ಮಿತ್ರಮಂಡಳಿ: ಇಲ್ಲಿ ಸಂಪುಟ ವಿಸ್ತರಣೆಯ ಕದನ ಜೋರಾಗಿದ್ರೆ, ಈ ಮಧ್ಯೆ ರಮೇಶ್ ಜಾರಕಿಹೊಳಿ ಮಿತ್ರಮಂಡಳಿ ದೇಗುಲ ಯಾತ್ರೆಗೆ ತೆರಳಿತ್ತು. ಮೊನ್ನೆ ತಿರುಪತಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು‌ ಸಿ.ಪಿ. ಯೋಗೇಶ್ವರ್ ರಾತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ. ಮಹೇಶ್ ಕುಮಟಳ್ಳಿಗೆ ಜೂನ್​ನಲ್ಲಿ‌ ಮಂತ್ರಿ ಸ್ಥಾನದ ಭರವಸೆ ನೀಡಲಾಗಿದ್ರಿಂದ ಇಂದು ರಮೇಶ್ ಜಾರಕಿಹೊಳಿ ಕ್ಯಾಂಪ್​ನಲ್ಲಿ ಸಭೆ ನಡೆಸೋ ಸಾಧ್ಯತೆ ಇದೆ.

ಒಟ್ನಲ್ಲಿ, ಸದ್ಯ ಸಿಎಂ ಯಡಿಯೂರಪ್ಪ ಅವರಿಗೆ 2 ದಿನಗಳ ಹಿಂದೆ ಇದ್ದಷ್ಟು ಒತ್ತಡದ ಪ್ರಮಾಣ ಕಡಿಮೆ ಆಗಿದೆ. ಅದ್ರೆ, ಸಚಿವ ಸ್ಥಾನಾಕಾಂಕ್ಷಿ ಶಾಸಕರಲ್ಲಿ‌ ಬೇಸರ ಮಾತ್ರ ಯಾವ ಪರಿಹಾರವೂ ಸಿಗದೆ ಹಾಗೆಯೇ ಉಳಿದಿದೆ. ಸರ್ಕಾರ ರಚನೆಗೆ ಸಹಾಯ ಮಾಡಿದವರನ್ನು ಸಮಾಧಾನಿಸುವ ಭರದಲ್ಲಿ ತಮ್ಮ ಬೇಡಿಕೆಗಳು ಹಾಗೆಯೇ ಉಳಿದುಹೋಗುತ್ತಿವೆ. ತಮ್ಮ ಮಾತಿಗೆ ಬೆಲೆಯೇ ಇಲ್ಲದಂತಾಗುತ್ತಿದೆ ಎಂಬ ಬೇಸರ ಬಿಜೆಪಿ ಶಾಸಕರಲ್ಲಿ ಉಳಿದಿದ್ದಂತೂ ಸುಳ್ಳಲ್ಲ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!