AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್, ಅತೃಪ್ತಿ ಮಧ್ಯೆ ಯಾಱರಿಗೆ ಸಿಗುತ್ತೆ ಮಂತ್ರಿ ಸ್ಥಾನ?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಂದೇ ದಿನ ಬಾಕಿ ಇದೆ. ತಲೆನೋವಾಗುವ ಮಟ್ಟಕ್ಕೆ ಇದ್ದ ಬಿಜೆಪಿಯೊಳಗಿನ ಅಸಮಾಧಾನ ಒಂದಷ್ಟು ಮಟ್ಟಿಗೆ ತಣಿದಂತಾಗಿದೆ. ಮತ್ತೊಂದೆಡೆ, ತಿರುಪತಿಗೆ ತೆರಳಿದ್ದ ಶಾಸಕರು ರಾತ್ರಿ ಬೆಂಗಳೂರಿಗೆ ವಾಪಾಸಾಗಿದ್ದಾರೆ. ನಿತ್ಯ ಸರ್ಕಸ್. ದಿನಕ್ಕೊಂದು ಹೈಡ್ರಾಮಾ. ನಿರಂತರ ಹಗ್ಗಜಗ್ಗಾಟ. ಕಗ್ಗಂಟಾಗಿ ಕಾಡುತ್ತಿದ್ದ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್ ಶುರುವಾಗಿದೆ. ಸಚಿವ ಸ್ಥಾನ ಅಲಂಕರಿಸೋಕೆ ಹಾತೊರೆಯುತ್ತಿದ್ದ ಆಕಾಂಕ್ಷಿಗಳಲ್ಲಿ ಕಾತರ ಕುತೂಹಲ ಮನೆ ಮಾಡಿದೆ. ಎಲ್ಲರೂ ಸಿಎಂ ಕರೆಯತ್ತ ಚಿತ್ತ ನೆಟ್ಟು ಕೂರುವಂತಾಗಿದೆ. ಯಾಕಂದ್ರೆ, ಸಚಿವ ಸಂಪುಟ ಸೇರೋದ್ಯಾರು ಅನ್ನೋ […]

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್, ಅತೃಪ್ತಿ ಮಧ್ಯೆ ಯಾಱರಿಗೆ ಸಿಗುತ್ತೆ ಮಂತ್ರಿ ಸ್ಥಾನ?
ಸಾಧು ಶ್ರೀನಾಥ್​
|

Updated on: Feb 05, 2020 | 7:10 AM

Share

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಒಂದೇ ದಿನ ಬಾಕಿ ಇದೆ. ತಲೆನೋವಾಗುವ ಮಟ್ಟಕ್ಕೆ ಇದ್ದ ಬಿಜೆಪಿಯೊಳಗಿನ ಅಸಮಾಧಾನ ಒಂದಷ್ಟು ಮಟ್ಟಿಗೆ ತಣಿದಂತಾಗಿದೆ. ಮತ್ತೊಂದೆಡೆ, ತಿರುಪತಿಗೆ ತೆರಳಿದ್ದ ಶಾಸಕರು ರಾತ್ರಿ ಬೆಂಗಳೂರಿಗೆ ವಾಪಾಸಾಗಿದ್ದಾರೆ.

ನಿತ್ಯ ಸರ್ಕಸ್. ದಿನಕ್ಕೊಂದು ಹೈಡ್ರಾಮಾ. ನಿರಂತರ ಹಗ್ಗಜಗ್ಗಾಟ. ಕಗ್ಗಂಟಾಗಿ ಕಾಡುತ್ತಿದ್ದ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್ ಶುರುವಾಗಿದೆ. ಸಚಿವ ಸ್ಥಾನ ಅಲಂಕರಿಸೋಕೆ ಹಾತೊರೆಯುತ್ತಿದ್ದ ಆಕಾಂಕ್ಷಿಗಳಲ್ಲಿ ಕಾತರ ಕುತೂಹಲ ಮನೆ ಮಾಡಿದೆ. ಎಲ್ಲರೂ ಸಿಎಂ ಕರೆಯತ್ತ ಚಿತ್ತ ನೆಟ್ಟು ಕೂರುವಂತಾಗಿದೆ. ಯಾಕಂದ್ರೆ, ಸಚಿವ ಸಂಪುಟ ಸೇರೋದ್ಯಾರು ಅನ್ನೋ ಗುಟ್ಟು ರಟ್ಟಾಗಿಲ್ಲ.

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೌಂಟ್​ಡೌನ್..! ಯೆಸ್. ರಾಜ್ಯ ಸಂಪುಟ ವಿಸ್ತರಣೆಗೆ ಇನ್ನೊಂದೇ ದಿನ ಬಾಕಿ ಇದೆ. ಜೆಷ್ಟ್ ಶಾಸಕರಾಗಿದ್ದ ಕೆಲವರು ನಾಳೆ ಮಂತ್ರಿ ಆಗ್ತಾರೆ. ಆದ್ರೆ, ಶಾಸಕರಲ್ಲದವರಿಗೆ ಸಚಿವ ಸ್ಥಾನ ನೀಡ್ತಿರೋದು ಕೇಸರಿ ಪಡೆಯಲ್ಲಿ ಕೋಲಾಹಲ ಎಬ್ಬಿಸಿದೆ. ಅದ್ರಲ್ಲೂ ಸಿ.ಪಿ. ಯೋಗೇಶ್ವರ್ ಸಚಿವರಾಗುತ್ತಾರೆ ಅನ್ನೋ ವಿಚಾರವಾಗಿ ಕಿತ್ತಾಟ ತಾರಕಕ್ಕೇರಿದೆ.

ಆದ್ರೆ, ಮೊನ್ನೆ ಯೋಗೇಶ್ವರ್​ಗೆ ಸಚಿವ ಸ್ಥಾನ ಬೇಡ ಅಂತಾ ಬಹಿರಂಗ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕರು, ನಿನ್ನೆ ಸಭೆ ನಡೆಸಿದ್ದು‌ ಹೊರತುಪಡಿಸಿದರೆ ಬಹಿರಂಗ ಪ್ರತಿಕ್ರಿಯೆಯಿಂದ ದೂರ ಉಳಿದಿದ್ದಾರೆ. ಹೀಗಾಗಿ, ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಇಂದು ಸಭೆ ನಡೆಸುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಮತ್ತೊಂದೆಡೆ ಕರಾವಳಿ ಕರ್ನಾಟಕ ಭಾಗದ ಶಾಸಕರ ಬೇಸರವನ್ನು‌ ಬೆಳೆಯುವ ಮುನ್ನವೇ ಶಮನಗೊಳಿಸುವ ಕೆಲಸವೂ ನಡೆದುಹೋಗಿದೆ.

ತಿರುಪತಿಯಿಂದ ವಾಪಸ್ ಬಂದ ಮಿತ್ರಮಂಡಳಿ: ಇಲ್ಲಿ ಸಂಪುಟ ವಿಸ್ತರಣೆಯ ಕದನ ಜೋರಾಗಿದ್ರೆ, ಈ ಮಧ್ಯೆ ರಮೇಶ್ ಜಾರಕಿಹೊಳಿ ಮಿತ್ರಮಂಡಳಿ ದೇಗುಲ ಯಾತ್ರೆಗೆ ತೆರಳಿತ್ತು. ಮೊನ್ನೆ ತಿರುಪತಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು‌ ಸಿ.ಪಿ. ಯೋಗೇಶ್ವರ್ ರಾತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ. ಮಹೇಶ್ ಕುಮಟಳ್ಳಿಗೆ ಜೂನ್​ನಲ್ಲಿ‌ ಮಂತ್ರಿ ಸ್ಥಾನದ ಭರವಸೆ ನೀಡಲಾಗಿದ್ರಿಂದ ಇಂದು ರಮೇಶ್ ಜಾರಕಿಹೊಳಿ ಕ್ಯಾಂಪ್​ನಲ್ಲಿ ಸಭೆ ನಡೆಸೋ ಸಾಧ್ಯತೆ ಇದೆ.

ಒಟ್ನಲ್ಲಿ, ಸದ್ಯ ಸಿಎಂ ಯಡಿಯೂರಪ್ಪ ಅವರಿಗೆ 2 ದಿನಗಳ ಹಿಂದೆ ಇದ್ದಷ್ಟು ಒತ್ತಡದ ಪ್ರಮಾಣ ಕಡಿಮೆ ಆಗಿದೆ. ಅದ್ರೆ, ಸಚಿವ ಸ್ಥಾನಾಕಾಂಕ್ಷಿ ಶಾಸಕರಲ್ಲಿ‌ ಬೇಸರ ಮಾತ್ರ ಯಾವ ಪರಿಹಾರವೂ ಸಿಗದೆ ಹಾಗೆಯೇ ಉಳಿದಿದೆ. ಸರ್ಕಾರ ರಚನೆಗೆ ಸಹಾಯ ಮಾಡಿದವರನ್ನು ಸಮಾಧಾನಿಸುವ ಭರದಲ್ಲಿ ತಮ್ಮ ಬೇಡಿಕೆಗಳು ಹಾಗೆಯೇ ಉಳಿದುಹೋಗುತ್ತಿವೆ. ತಮ್ಮ ಮಾತಿಗೆ ಬೆಲೆಯೇ ಇಲ್ಲದಂತಾಗುತ್ತಿದೆ ಎಂಬ ಬೇಸರ ಬಿಜೆಪಿ ಶಾಸಕರಲ್ಲಿ ಉಳಿದಿದ್ದಂತೂ ಸುಳ್ಳಲ್ಲ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್