AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್​ಗೆ ಆನ್‌ಲೈನ್‌ ಕ್ಲಾಸ್ ಆರಂಭಿಸಿ; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸೂಚನೆ

UG and PG Classes in Karnataka: ಕೆಲವು ಕೋರ್ಸ್​ಗಳ1, 3, 5 ಮತ್ತು 7 ಸೆಮಿಸ್ಟರ್ ಪರೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ. ಆದರೂ 2,4,6 ಮತ್ತು 8ನೇ ಸೆಮಿಸ್ಟರ್​ನ ತರಗತಿಗಳನ್ನು ಆನ್​ಲೈನ್ ಮೂಲಕ ಆರಂಭಿಸಲು ಸೂಚನೆ ನೀಡಲಾಗಿದೆ.

ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್​ಗೆ ಆನ್‌ಲೈನ್‌ ಕ್ಲಾಸ್ ಆರಂಭಿಸಿ; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸೂಚನೆ
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on: May 21, 2021 | 9:05 PM

ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಕೊವಿಡ್ ಮತ್ತು ಲಾಕ್​ಡೌನ್​ನಿಂದ ಪರೀಕ್ಷೆಗಳು ನಡೆಯುವುದು ತಡವಾದರೂ ಆನ್‌ಲೈನ್‌ ಕ್ಲಾಸ್ ಮುಂದುವರೆಸಬೇಕು, ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್‌ ಕ್ಲಾಸ್ ಶುರುಮಾಡಬೇಕು ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್ ನಾರಾಯಣ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ನೀಡಿದೆ. ಪ್ರಸಕ್ತ ಸಾಲಿನ ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್ ಪ್ರಾರಂಭಿಸುವಂತೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

ಕೆಲವು ಕೋರ್ಸ್​ಗಳ1, 3, 5 ಮತ್ತು 7 ಸೆಮಿಸ್ಟರ್ ಪರೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ. ಆದರೂ 2,4,6 ಮತ್ತು 8ನೇ ಸೆಮಿಸ್ಟರ್​ನ ತರಗತಿಗಳನ್ನು ಆನ್​ಲೈನ್ ಮೂಲಕ ಆರಂಭಿಸಬೇಕು. ಇಂಜಿನಿಯರಿಂಗ್ ಹಾಗೂ ಕೆಲವು ವೃತ್ತಿಪರ ಕೋರ್ಸ್‌ಗಳಲ್ಲಿ ಮುಂದಿನ ಸೆಮಿಸ್ಟರ್‌ಗೆ ಹೋಗಲು ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದಿಲ್ಲ. ಇವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರು ಉನ್ನತ ಶಿಕ್ಷಣ ಪರಿಷತ್ತಿನ ಜತೆ ಚರ್ಚಿಸಿ ನಿರ್ಧಾರಕ್ಕೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

ಈಗಾಗಲೇ ಮುಂದೂಡಲ್ಪಟ್ಟಿದೆ ಎಸ್​ಎಸ್​ಎಲ್​ಸಿ ಪರೀಕ್ಷೆ ಜೂನ್​ 21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮೇ 13ರಂದು ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಅವರು ಹೇಳಿದ್ದಾರೆ.  ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಎಲ್ಲ ರೀತಿಯ ಆಫ್​ಲೈನ್ ಪರೀಕ್ಷೆಗಳನ್ನೂ ಮುಂದೂಡಲಾಗುತ್ತಿದೆ.

ಇದನ್ನೂ ಓದಿ: ಕೊವಿಡ್ ಔಷಧಿಗಳಿಗೆ ಉಚ್ಚರಿಸಲು ಅಸಾಧ್ಯವಾದ ಹೆಸರು ಇಟ್ಟದ್ದು ಶಶಿ ತರೂರ್ ಆಗಿರಬಹುದೇ; ತೆಲಂಗಾಣ ಸಚಿವ ಕೆಟಿಆರ್ ಪ್ರಶ್ನೆ

Karnataka Lockdown: ಕರ್ನಾಟಕದಲ್ಲಿ ಜೂನ್​ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್​ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ (Start online class for the next semester for UG and PG even if the exam is not done direct Higher Education Minister Dr Ashwath Narayan)

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ