AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್​ಗೆ ಆನ್‌ಲೈನ್‌ ಕ್ಲಾಸ್ ಆರಂಭಿಸಿ; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸೂಚನೆ

UG and PG Classes in Karnataka: ಕೆಲವು ಕೋರ್ಸ್​ಗಳ1, 3, 5 ಮತ್ತು 7 ಸೆಮಿಸ್ಟರ್ ಪರೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ. ಆದರೂ 2,4,6 ಮತ್ತು 8ನೇ ಸೆಮಿಸ್ಟರ್​ನ ತರಗತಿಗಳನ್ನು ಆನ್​ಲೈನ್ ಮೂಲಕ ಆರಂಭಿಸಲು ಸೂಚನೆ ನೀಡಲಾಗಿದೆ.

ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್​ಗೆ ಆನ್‌ಲೈನ್‌ ಕ್ಲಾಸ್ ಆರಂಭಿಸಿ; ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸೂಚನೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 21, 2021 | 9:05 PM

Share

ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಕೊವಿಡ್ ಮತ್ತು ಲಾಕ್​ಡೌನ್​ನಿಂದ ಪರೀಕ್ಷೆಗಳು ನಡೆಯುವುದು ತಡವಾದರೂ ಆನ್‌ಲೈನ್‌ ಕ್ಲಾಸ್ ಮುಂದುವರೆಸಬೇಕು, ಮುಂದಿನ ಸೆಮಿಸ್ಟರ್‌ಗೆ ಆನ್‌ಲೈನ್‌ ಕ್ಲಾಸ್ ಶುರುಮಾಡಬೇಕು ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್ ನಾರಾಯಣ ಸೂಚಿಸಿದ್ದಾರೆ. ಈ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ನೀಡಿದೆ. ಪ್ರಸಕ್ತ ಸಾಲಿನ ಪರೀಕ್ಷೆ ನಡೆಯದಿದ್ದರೂ ಮುಂದಿನ ಸೆಮಿಸ್ಟರ್ ಪ್ರಾರಂಭಿಸುವಂತೆ ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.

ಕೆಲವು ಕೋರ್ಸ್​ಗಳ1, 3, 5 ಮತ್ತು 7 ಸೆಮಿಸ್ಟರ್ ಪರೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ. ಆದರೂ 2,4,6 ಮತ್ತು 8ನೇ ಸೆಮಿಸ್ಟರ್​ನ ತರಗತಿಗಳನ್ನು ಆನ್​ಲೈನ್ ಮೂಲಕ ಆರಂಭಿಸಬೇಕು. ಇಂಜಿನಿಯರಿಂಗ್ ಹಾಗೂ ಕೆಲವು ವೃತ್ತಿಪರ ಕೋರ್ಸ್‌ಗಳಲ್ಲಿ ಮುಂದಿನ ಸೆಮಿಸ್ಟರ್‌ಗೆ ಹೋಗಲು ಕ್ಯಾರಿ ಓವರ್ ಪದ್ಧತಿ ಅನ್ವಯವಾಗುವುದಿಲ್ಲ. ಇವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರು ಉನ್ನತ ಶಿಕ್ಷಣ ಪರಿಷತ್ತಿನ ಜತೆ ಚರ್ಚಿಸಿ ನಿರ್ಧಾರಕ್ಕೆ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

ಈಗಾಗಲೇ ಮುಂದೂಡಲ್ಪಟ್ಟಿದೆ ಎಸ್​ಎಸ್​ಎಲ್​ಸಿ ಪರೀಕ್ಷೆ ಜೂನ್​ 21ರಿಂದ ಪ್ರಾರಂಭವಾಗಬೇಕಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಮುಂದೂಡಿದ್ದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮೇ 13ರಂದು ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಅವರು ಹೇಳಿದ್ದಾರೆ.  ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾಗಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಬಹುತೇಕ ಎಲ್ಲ ರೀತಿಯ ಆಫ್​ಲೈನ್ ಪರೀಕ್ಷೆಗಳನ್ನೂ ಮುಂದೂಡಲಾಗುತ್ತಿದೆ.

ಇದನ್ನೂ ಓದಿ: ಕೊವಿಡ್ ಔಷಧಿಗಳಿಗೆ ಉಚ್ಚರಿಸಲು ಅಸಾಧ್ಯವಾದ ಹೆಸರು ಇಟ್ಟದ್ದು ಶಶಿ ತರೂರ್ ಆಗಿರಬಹುದೇ; ತೆಲಂಗಾಣ ಸಚಿವ ಕೆಟಿಆರ್ ಪ್ರಶ್ನೆ

Karnataka Lockdown: ಕರ್ನಾಟಕದಲ್ಲಿ ಜೂನ್​ 7ರ ಬೆಳಗ್ಗೆ 6ಗಂಟೆಯವರೆಗೂ ಲಾಕ್​ಡೌನ್ ವಿಸ್ತರಣೆ; ಸಿಎಂ ಯಡಿಯೂರಪ್ಪ ಘೋಷಣೆ (Start online class for the next semester for UG and PG even if the exam is not done direct Higher Education Minister Dr Ashwath Narayan)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!