AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರು ವಿಶ್ವನಾಥ್​ರಿಂದ ದೂರ ಸರಿಯುತ್ತಿದ್ದಾರೆ

ಟಿಪ್ಪು ಸುಲ್ತಾನ್ ಬಗ್ಗೆ ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಭಾರತೀಯ ಜನತಾ ಪಕ್ಷ ಘಟಕದ ವಕ್ತಾರ ಗಣೇಶ್ ಕಾರ್ಣಿಕ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರಕಟಣೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿಕೆ ವೈಯಕ್ತಿಕ, ಅದು ಬಿಜೆಪಿ ಅಭಿಪ್ರಾಯವಾಗಲು ಸಾಧ್ಯವಿಲ್ಲ ಎಂದಿದ್ದಾರೆ. ‘‘ಟಿಪ್ಪು ಸುಲ್ತಾನ್ ಮತಾಂಧ ಎಂಬುದಕ್ಕೆ ಬಿಜೆಪಿ ಬದ್ಧವಾಗಿದೆ, ಅವನು ಉತ್ತಮ ಆಡಳಿತಗಾರನಾಗಿದ್ದ ಎಂದು ಬಿಜೆಪಿ ಒಪ್ಪಿಕೊಳ್ಳುವುದು ಸಾಧ್ಯವಿಲ್ಲ. ವಿಶ್ವನಾಥ್ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಳ್ಳಲು ಬಯಸುತ್ತದೆ’ ಎಂದು ಕಾರ್ಣಿಕ್ ಹೇಳಿದ್ದಾರೆ. ವಿಶ್ವನಾಥ್ ಹೇಳಿಕೆ […]

ಬಿಜೆಪಿ ನಾಯಕರು ವಿಶ್ವನಾಥ್​ರಿಂದ ದೂರ ಸರಿಯುತ್ತಿದ್ದಾರೆ
ಕ್ಯಾಪ್ಟನ್ ಗಣೇಶ್ ಕಾರ್ಣಿಕ್
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 27, 2020 | 5:01 PM

Share

ಟಿಪ್ಪು ಸುಲ್ತಾನ್ ಬಗ್ಗೆ ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ಭಾರತೀಯ ಜನತಾ ಪಕ್ಷ ಘಟಕದ ವಕ್ತಾರ ಗಣೇಶ್ ಕಾರ್ಣಿಕ್ ಬೆಂಗಳೂರಿನಲ್ಲಿ ಮಾಧ್ಯಮ ಪ್ರಕಟಣೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿಕೆ ವೈಯಕ್ತಿಕ, ಅದು ಬಿಜೆಪಿ ಅಭಿಪ್ರಾಯವಾಗಲು ಸಾಧ್ಯವಿಲ್ಲ ಎಂದಿದ್ದಾರೆ.

‘‘ಟಿಪ್ಪು ಸುಲ್ತಾನ್ ಮತಾಂಧ ಎಂಬುದಕ್ಕೆ ಬಿಜೆಪಿ ಬದ್ಧವಾಗಿದೆ, ಅವನು ಉತ್ತಮ ಆಡಳಿತಗಾರನಾಗಿದ್ದ ಎಂದು ಬಿಜೆಪಿ ಒಪ್ಪಿಕೊಳ್ಳುವುದು ಸಾಧ್ಯವಿಲ್ಲ. ವಿಶ್ವನಾಥ್ ಅವರ ಹೇಳಿಕೆಯಿಂದ ಬಿಜೆಪಿ ಅಂತರ ಕಾಯ್ದುಕೊಳ್ಳಲು ಬಯಸುತ್ತದೆ’ ಎಂದು ಕಾರ್ಣಿಕ್ ಹೇಳಿದ್ದಾರೆ.

ವಿಶ್ವನಾಥ್ ಹೇಳಿಕೆ ನಿಸ್ಸಂದೇಹವಾಗಿ ಪಕ್ಷದ ನಾಯಕರಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ. ಆ ಹೇಳಿಕೆಯಿಂದ ಆಗಿರುವ ಹಾನಿಗೆ ತ್ಯಾಪೆ ಹಾಕುವ ಪ್ರಯತ್ನ ಹಿರಿಯ ನಾಯಕರು ಮಾಡುತ್ತಿರುವರಾದರೂ ಹೊಸಬಟ್ಟೆಗೆ ಹಳೆಬಟ್ಟೆಯ ತ್ಯಾಪೆ ಸರಿಹೋಗುತ್ತಿಲ್ಲ.