AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ವರಿಷ್ಠರು ಸೌಜನ್ಯಕ್ಕಾದರೂ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತಾಡುತ್ತಿಲ್ಲ: ಎನ್ ಚಲುವರಾಯಸ್ವಾಮಿ, ಸಚಿವ

ಕೇಂದ್ರದ ವರಿಷ್ಠರು ಸೌಜನ್ಯಕ್ಕಾದರೂ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತಾಡುತ್ತಿಲ್ಲ: ಎನ್ ಚಲುವರಾಯಸ್ವಾಮಿ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 01, 2023 | 2:04 PM

Share

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರವೊಂದು ರಚನಾತ್ಮಕವಾಗಿ ಕೆಲಸ ಮಾಡಬೇಕಾದರೆ, ಸರ್ಕಾರದ ತಪ್ಪು ಒಪ್ಪುಗಳನ್ನು ಟೀಕಿಸಲು, ತಿದ್ದಲು ಒಬ್ಬ ಸಮರ್ಥ ವಿರೋಧ ಪಕ್ಷದ ನಾಯಕ ಇರಲೇಬೇಕು. ರಾಜ್ಯದ ಸ್ಥಿತಿ ಚೆನ್ನಾಗಿಲ್ಲ, ಭೀಕರ ಬರಗಾಲ ಎದುರಾಗಿದೆ, ಕಾವೇರಿಯಲ್ಲಿ ನೀರಿಲ್ಲ ಮತ್ತು ಇನ್ನೂ ಹಲವಾರು ಸಮಸ್ಯೆಗಳಿವೆ, ಹಾಗಾಗಿ ಸರ್ಕಾರದ ಜೊತೆ ಫೈಟ್ ಮಾಡಲು ಒಬ್ಬ ವಿರೋಧ ಪಕ್ಷದ ನಾಯಕ ಇಲ್ಲವೆಂದ್ರೆ ಹೇಗೆ ಅಂತ ಚಲುವರಾಯಸ್ವಾಮಿ ಪ್ರಶ್ನಿಸಿದರು.

ಮಂಡ್ಯ: ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Cheluvarayaswamy), ರಾಜ್ಯದಲ್ಲಿ ಬಿಜೆಪಿ ನಾಯಕರ (state BJP leaders) ಸ್ಥಿತಿ ಶೋಚನೀಯವಾಗಿದೆ ಅಂತ ಹೇಳಿದರು. ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ನಂತರ ಕೇಂದ್ರದ ಬಿಜೆಪಿ ವರಿಷ್ಠರು ಸೌಜನ್ಯಾಕ್ಕಾದರೂ ರಾಜ್ಯದ ನಾಯಕರೊಂದಿಗೆ ಮಾತಾಡುತ್ತಿಲ್ಲ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನಮಂಡಲ ಅಧಿವೇಶನದಲ್ಲಿ (Assembly session) ರಾಜ್ಯಪಾಲರು ವಿರೋಧ ಪಕ್ಷದ ನಾಯಕನಿಲ್ಲದೆ ಭಾಷಣ ಮಾಡಿದ ಪ್ರಸಂಗ ಮೊನ್ನೆ ನಡೆದಿದೆ ಎಂದು ಸಚಿವ ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರವೊಂದು ರಚನಾತ್ಮಕವಾಗಿ ಕೆಲಸ ಮಾಡಬೇಕಾದರೆ, ಸರ್ಕಾರದ ತಪ್ಪು ಒಪ್ಪುಗಳನ್ನು ಟೀಕಿಸಲು, ತಿದ್ದಲು ಒಬ್ಬ ಸಮರ್ಥ ವಿರೋಧ ಪಕ್ಷದ ನಾಯಕ ಇರಲೇಬೇಕು. ರಾಜ್ಯದ ಸ್ಥಿತಿ ಚೆನ್ನಾಗಿಲ್ಲ, ಭೀಕರ ಬರಗಾಲ ಎದುರಾಗಿದೆ, ಕಾವೇರಿಯಲ್ಲಿ ನೀರಿಲ್ಲ ಮತ್ತು ಇನ್ನೂ ಹಲವಾರು ಸಮಸ್ಯೆಗಳಿವೆ, ಹಾಗಾಗಿ ಸರ್ಕಾರದ ಜೊತೆ ಫೈಟ್ ಮಾಡಲು ಒಬ್ಬ ವಿರೋಧ ಪಕ್ಷದ ನಾಯಕ ಇಲ್ಲವೆಂದ್ರೆ ಹೇಗೆ ಅಂತ ಚಲುವರಾಯಸ್ವಾಮಿ ಪ್ರಶ್ನಿಸಿದರು. ತಮ್ಮ ಪಕ್ಷದ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದ ಚಲುವರಾಯಸ್ವಾಮಿ, ಶಾಸಕರು ಮಂತ್ರಿಗಿರಿ, ನಿಗಮ-ಮಂಡಳಿಗಳ ಅಧ್ಯಕ್ಷನಾಗುವ ಆಸೆ ಇಟ್ಟುಕೊಳ್ಳುವುದು ತಪ್ಪೇ ಅಂತ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.