AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರುಪ್ಸಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ನಿರ್ಧಾರ, ಬೇಡಿಕೆಗಳು ಏನು?

ರುಪ್ಸಾ ಶಾಲೆಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಕ್ಕೂಟ ಮುಂದಿಟ್ಟ 13 ಬೇಡಿಕೆಗಳ ಪೈಕಿ 5 ಬೇಡಿಕೆ ಈಡೇರಿಕೆಗೆ ಸರ್ಕಾರ ನಿರ್ಧರಿಸಿದೆ.

ರುಪ್ಸಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ನಿರ್ಧಾರ, ಬೇಡಿಕೆಗಳು ಏನು?
ಶಿಕ್ಷಣ ಸಚಿವ ಸುರೇಶ್ ಕುಮಾರ್‌
KUSHAL V
|

Updated on: Jan 07, 2021 | 6:28 PM

Share

ಬೆಂಗಳೂರು: ರುಪ್ಸಾ ಶಾಲೆಗಳ ಒಕ್ಕೂಟದ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಒಕ್ಕೂಟ ಮುಂದಿಟ್ಟ 13 ಬೇಡಿಕೆಗಳ ಪೈಕಿ 5 ಬೇಡಿಕೆ ಈಡೇರಿಕೆಗೆ ಸರ್ಕಾರ ನಿರ್ಧರಿಸಿದೆ. 5 ಬೇಡಿಕೆಗಳ ಪ್ರಸ್ತಾವನೆ ಮಂಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್​ಗೆ ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ಸೂಚನೆ ನೀಡಿದ್ದಾರೆ.

ಮೊದಲ ಹಂತದಲ್ಲಿ ಈಡೇರಿಸಲಾಗುವ 5 ಬೇಡಿಕೆಗಳ ವಿವಿರ ಹೀಗಿದೆ. 1. ಖಾಸಗಿ ಶಾಲೆಗಳ ವಾರ್ಷಿಕ ನವೀಕರಣ ಪ್ರಕ್ರಿಯೆ ಆನ್‌ಲೈನ್‌ಗೊಳಿಸಲು ಸೂಚನೆ 2. ಶಾಲಾ ನವೀಕರಣ ಪ್ರಕ್ರಿಯೆಯಲ್ಲಿ ಸುರಕ್ಷತಾ ಕ್ರಮ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ 3. ಶಿಕ್ಷಕರ ಕಲ್ಯಾಣ ನಿಧಿ ಬಳಕೆಗೆ ಸೂಕ್ತ ಕ್ರಮ ವಹಿಸುವುದು 4. 1995ರಿಂದ 2000ವರೆಗಿನ ಶಾಲೆಗಳನ್ನ ಅನುದಾನಕ್ಕೊಳಪಡಿಸಲು ಸಿಎಂ ಜೊತೆ ಚರ್ಚಿಸಿ‌ ಮುಂದಿನ ಕ್ರಮ 5. ಮಾನ್ಯತೆ ತಿರಸ್ಕೃತವಾದ ಖಾಸಗಿ ಅನುದಾನ ರಹಿತ ಪ್ರೌಢಶಾಲೆಗಳ ಅರ್ಜಿಗಳ ಮರು ಪರಿಶೀಲನೆಗೆ ಅವಕಾಶ. ಜೊತೆಗೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸುವುದು.

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆ ಫ್ರೀಡಂಪಾರ್ಕ್‌ನಲ್ಲಿ ಖಾಸಗಿ ಶಾಲಾ ಒಕ್ಕೂಟ ಪ್ರತಿಭಟನೆ ನಡೆಸಿತ್ತು. ಒಕ್ಕೂಟ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ನೇತೃತ್ವದಲ್ಲಿ ಧರಣಿ ನಡೆದಿತ್ತು. ಇದೀಗ, ಶಿಕ್ಷಣ ಸಚಿವರ ನಿರ್ಧಾರವನ್ನು ಲೋಕೇಶ್ ತಾಳಿಕಟ್ಟೆ ಸ್ವಾಗತಿಸಿದ್ದಾರೆ.

ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ; ಪ್ರತಿಭಟನೆ ಕೈಬಿಡಲು ರುಪ್ಸಾ ನಿರ್ಧಾರ

‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್