AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 8:54 PM

Share

ಬೆಂಗಳೂರು: ಯಾರದ್ದೇ ಮದುವೆ ಆಗಲಿ, ಅಲ್ಲಿ ಅರ್ಚಕರು ಇದ್ದೇ ಇರುತ್ತಾರೆ. ಅವರ ಮಂತ್ರಘೋಷ ಇಲ್ಲದೆಯೇ ಮದುವೆ ನಡೆಯುವುದೇ ಇಲ್ಲ. ಆದರೆ, ಈಗ ಮದುವೆ ಮಾಡಿಸುವ ಅರ್ಚಕರಿಗೆ ಹೆಣ್ಣು ಸಿಗುತ್ತಿಲ್ಲ. ಈ ಕಾರಣಕ್ಕೆ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ, ಅರ್ಚಕರನ್ನು ಮದುವೆ ಆಗುವ ಮಹಿಳೆಗೆ ಮೂರು ಲಕ್ಷ ನೀಡಲು ಮುಂದಾಗಿದೆ.

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ. ಈ ಯೋಜನೆಗೆ ಈಗ ಕಾಂಗ್ರೆಸ್​ ಅಪಸ್ವರ ಎತ್ತಿದೆ.

ಎಲ್ಲಾ ಸಮುದಾಯದಲ್ಲೂ ಅರ್ಚಕರು ಇರುತ್ತಾರೆ. ಹಾಗಾದರೆ, ನೀವು ಅವರಿಗೂ ಈ ಯೋಜನೆ ಅಡಿಯಲ್ಲಿ ಹಣ ನೀಡುತ್ತೀರಾ ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿ, ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಮೈತ್ರಿ ಯೋಜನೆ ಅಡಿ ಅರ್ಚಕರನ್ನ ಮದುವೆ ಆಗುವವರಿಗೆ ಬಾಂಡ್ ನೀಡುತ್ತಿದ್ದೇವೆ. ಅನೇಕ ಅರ್ಚಕರು ಅವರ ಸಮಸ್ಯೆ ತೋಡಿಕೊಂಡಿದ್ದಾರೆ. ಈ ಕಾರಣಕ್ಕೆ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ಪಕ್ಕದ ತೆಲಂಗಾಣದಲ್ಲಿ ಕೂಡ ಇದೇ ಮಾದರಿಯ ಯೋಜನೆ ಇದೆ. ವಿವಿಧ ಸಮುದಾಯಗಳಿಗೆ ಅವರದ್ದೇ ಆದ ಮಂಡಳಿಗಳಿವೆ. ಅವರು ಬೇಕಾದರೆ ಇದೇ ರೀತಿ ಮಾಡಲಿ. ಈ ಯೋಜನೆಯನ್ನ ಸಾರ್ವಜನಿಕರು ಬಳಸಿಕೊಳ್ಳಲಿ. ಕೆಲವರು ಅನಗತ್ಯವಾಗಿ ವಿವಾದ ಮಾಡುತ್ತಾ ಇದ್ದಾರೆ ಎಂದು ಸಚ್ಚಿದಾನಂದಮೂರ್ತಿ ಕಾಂಗ್ರೆಸ್​ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು

Published On - 7:45 pm, Sat, 9 January 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?