AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 8:54 PM

Share

ಬೆಂಗಳೂರು: ಯಾರದ್ದೇ ಮದುವೆ ಆಗಲಿ, ಅಲ್ಲಿ ಅರ್ಚಕರು ಇದ್ದೇ ಇರುತ್ತಾರೆ. ಅವರ ಮಂತ್ರಘೋಷ ಇಲ್ಲದೆಯೇ ಮದುವೆ ನಡೆಯುವುದೇ ಇಲ್ಲ. ಆದರೆ, ಈಗ ಮದುವೆ ಮಾಡಿಸುವ ಅರ್ಚಕರಿಗೆ ಹೆಣ್ಣು ಸಿಗುತ್ತಿಲ್ಲ. ಈ ಕಾರಣಕ್ಕೆ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ, ಅರ್ಚಕರನ್ನು ಮದುವೆ ಆಗುವ ಮಹಿಳೆಗೆ ಮೂರು ಲಕ್ಷ ನೀಡಲು ಮುಂದಾಗಿದೆ.

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ. ಈ ಯೋಜನೆಗೆ ಈಗ ಕಾಂಗ್ರೆಸ್​ ಅಪಸ್ವರ ಎತ್ತಿದೆ.

ಎಲ್ಲಾ ಸಮುದಾಯದಲ್ಲೂ ಅರ್ಚಕರು ಇರುತ್ತಾರೆ. ಹಾಗಾದರೆ, ನೀವು ಅವರಿಗೂ ಈ ಯೋಜನೆ ಅಡಿಯಲ್ಲಿ ಹಣ ನೀಡುತ್ತೀರಾ ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿ, ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಮೈತ್ರಿ ಯೋಜನೆ ಅಡಿ ಅರ್ಚಕರನ್ನ ಮದುವೆ ಆಗುವವರಿಗೆ ಬಾಂಡ್ ನೀಡುತ್ತಿದ್ದೇವೆ. ಅನೇಕ ಅರ್ಚಕರು ಅವರ ಸಮಸ್ಯೆ ತೋಡಿಕೊಂಡಿದ್ದಾರೆ. ಈ ಕಾರಣಕ್ಕೆ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ಪಕ್ಕದ ತೆಲಂಗಾಣದಲ್ಲಿ ಕೂಡ ಇದೇ ಮಾದರಿಯ ಯೋಜನೆ ಇದೆ. ವಿವಿಧ ಸಮುದಾಯಗಳಿಗೆ ಅವರದ್ದೇ ಆದ ಮಂಡಳಿಗಳಿವೆ. ಅವರು ಬೇಕಾದರೆ ಇದೇ ರೀತಿ ಮಾಡಲಿ. ಈ ಯೋಜನೆಯನ್ನ ಸಾರ್ವಜನಿಕರು ಬಳಸಿಕೊಳ್ಳಲಿ. ಕೆಲವರು ಅನಗತ್ಯವಾಗಿ ವಿವಾದ ಮಾಡುತ್ತಾ ಇದ್ದಾರೆ ಎಂದು ಸಚ್ಚಿದಾನಂದಮೂರ್ತಿ ಕಾಂಗ್ರೆಸ್​ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು

Published On - 7:45 pm, Sat, 9 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?