AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 8:54 PM

Share

ಬೆಂಗಳೂರು: ಯಾರದ್ದೇ ಮದುವೆ ಆಗಲಿ, ಅಲ್ಲಿ ಅರ್ಚಕರು ಇದ್ದೇ ಇರುತ್ತಾರೆ. ಅವರ ಮಂತ್ರಘೋಷ ಇಲ್ಲದೆಯೇ ಮದುವೆ ನಡೆಯುವುದೇ ಇಲ್ಲ. ಆದರೆ, ಈಗ ಮದುವೆ ಮಾಡಿಸುವ ಅರ್ಚಕರಿಗೆ ಹೆಣ್ಣು ಸಿಗುತ್ತಿಲ್ಲ. ಈ ಕಾರಣಕ್ಕೆ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ, ಅರ್ಚಕರನ್ನು ಮದುವೆ ಆಗುವ ಮಹಿಳೆಗೆ ಮೂರು ಲಕ್ಷ ನೀಡಲು ಮುಂದಾಗಿದೆ.

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ. ಈ ಯೋಜನೆಗೆ ಈಗ ಕಾಂಗ್ರೆಸ್​ ಅಪಸ್ವರ ಎತ್ತಿದೆ.

ಎಲ್ಲಾ ಸಮುದಾಯದಲ್ಲೂ ಅರ್ಚಕರು ಇರುತ್ತಾರೆ. ಹಾಗಾದರೆ, ನೀವು ಅವರಿಗೂ ಈ ಯೋಜನೆ ಅಡಿಯಲ್ಲಿ ಹಣ ನೀಡುತ್ತೀರಾ ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿ, ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಮೈತ್ರಿ ಯೋಜನೆ ಅಡಿ ಅರ್ಚಕರನ್ನ ಮದುವೆ ಆಗುವವರಿಗೆ ಬಾಂಡ್ ನೀಡುತ್ತಿದ್ದೇವೆ. ಅನೇಕ ಅರ್ಚಕರು ಅವರ ಸಮಸ್ಯೆ ತೋಡಿಕೊಂಡಿದ್ದಾರೆ. ಈ ಕಾರಣಕ್ಕೆ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ಪಕ್ಕದ ತೆಲಂಗಾಣದಲ್ಲಿ ಕೂಡ ಇದೇ ಮಾದರಿಯ ಯೋಜನೆ ಇದೆ. ವಿವಿಧ ಸಮುದಾಯಗಳಿಗೆ ಅವರದ್ದೇ ಆದ ಮಂಡಳಿಗಳಿವೆ. ಅವರು ಬೇಕಾದರೆ ಇದೇ ರೀತಿ ಮಾಡಲಿ. ಈ ಯೋಜನೆಯನ್ನ ಸಾರ್ವಜನಿಕರು ಬಳಸಿಕೊಳ್ಳಲಿ. ಕೆಲವರು ಅನಗತ್ಯವಾಗಿ ವಿವಾದ ಮಾಡುತ್ತಾ ಇದ್ದಾರೆ ಎಂದು ಸಚ್ಚಿದಾನಂದಮೂರ್ತಿ ಕಾಂಗ್ರೆಸ್​ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು

Published On - 7:45 pm, Sat, 9 January 21

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ