AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ.

ಅರ್ಚಕರನ್ನು ಮದುವೆ ಆದರೆ ಹೆಣ್ಣುಮಕ್ಕಳಿಗೆ ಸಿಗಲಿದೆ 3 ಲಕ್ಷ ರೂಪಾಯಿ ಬಾಂಡ್​ !
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Jan 09, 2021 | 8:54 PM

Share

ಬೆಂಗಳೂರು: ಯಾರದ್ದೇ ಮದುವೆ ಆಗಲಿ, ಅಲ್ಲಿ ಅರ್ಚಕರು ಇದ್ದೇ ಇರುತ್ತಾರೆ. ಅವರ ಮಂತ್ರಘೋಷ ಇಲ್ಲದೆಯೇ ಮದುವೆ ನಡೆಯುವುದೇ ಇಲ್ಲ. ಆದರೆ, ಈಗ ಮದುವೆ ಮಾಡಿಸುವ ಅರ್ಚಕರಿಗೆ ಹೆಣ್ಣು ಸಿಗುತ್ತಿಲ್ಲ. ಈ ಕಾರಣಕ್ಕೆ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ, ಅರ್ಚಕರನ್ನು ಮದುವೆ ಆಗುವ ಮಹಿಳೆಗೆ ಮೂರು ಲಕ್ಷ ನೀಡಲು ಮುಂದಾಗಿದೆ.

ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಮೈತ್ರಿ ಹೆಸರಿನ ಹೊಸ ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಬ್ರಾಹ್ಮಣ ಅರ್ಚಕರನ್ನು ಮದುವೆ ಆಗುವ ಹೆಣ್ಣುಮಕ್ಕಳಿಗೆ 3 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ ನೀಡಲಾಗುತ್ತಿದೆ. ಈ ಯೋಜನೆಗೆ ಈಗ ಕಾಂಗ್ರೆಸ್​ ಅಪಸ್ವರ ಎತ್ತಿದೆ.

ಎಲ್ಲಾ ಸಮುದಾಯದಲ್ಲೂ ಅರ್ಚಕರು ಇರುತ್ತಾರೆ. ಹಾಗಾದರೆ, ನೀವು ಅವರಿಗೂ ಈ ಯೋಜನೆ ಅಡಿಯಲ್ಲಿ ಹಣ ನೀಡುತ್ತೀರಾ ಎಂದು ಕಾಂಗ್ರೆಸ್​ ಪ್ರಶ್ನೆ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿ, ಬ್ರಾಹ್ಮಣ ಅಭಿವೃದ್ದಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಮೈತ್ರಿ ಯೋಜನೆ ಅಡಿ ಅರ್ಚಕರನ್ನ ಮದುವೆ ಆಗುವವರಿಗೆ ಬಾಂಡ್ ನೀಡುತ್ತಿದ್ದೇವೆ. ಅನೇಕ ಅರ್ಚಕರು ಅವರ ಸಮಸ್ಯೆ ತೋಡಿಕೊಂಡಿದ್ದಾರೆ. ಈ ಕಾರಣಕ್ಕೆ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದಿದ್ದಾರೆ.

ಪಕ್ಕದ ತೆಲಂಗಾಣದಲ್ಲಿ ಕೂಡ ಇದೇ ಮಾದರಿಯ ಯೋಜನೆ ಇದೆ. ವಿವಿಧ ಸಮುದಾಯಗಳಿಗೆ ಅವರದ್ದೇ ಆದ ಮಂಡಳಿಗಳಿವೆ. ಅವರು ಬೇಕಾದರೆ ಇದೇ ರೀತಿ ಮಾಡಲಿ. ಈ ಯೋಜನೆಯನ್ನ ಸಾರ್ವಜನಿಕರು ಬಳಸಿಕೊಳ್ಳಲಿ. ಕೆಲವರು ಅನಗತ್ಯವಾಗಿ ವಿವಾದ ಮಾಡುತ್ತಾ ಇದ್ದಾರೆ ಎಂದು ಸಚ್ಚಿದಾನಂದಮೂರ್ತಿ ಕಾಂಗ್ರೆಸ್​ ವಿರುದ್ಧ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು

Published On - 7:45 pm, Sat, 9 January 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್