AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

43 ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಮುಂಗಾರು ಮುನಿಸಿಕೊಂಡ ಕಾರಣ ಭೀಕರ ಬರದ ಛಾಯೆ ಆವರಿಸಿದೆ. ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಸೋಮವಾರ ಆದೇಶ ಹೊರಡಿಸಿದ್ದಾರೆ. 

43 ಹೆಚ್ಚುವರಿ ಬರಪೀಡಿತ ತಾಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: |

Updated on:Oct 09, 2023 | 6:56 PM

Share

ಬೆಂಗಳೂರು, ಅಕ್ಟೋಬರ್​​ 09: ರಾಜ್ಯದಲ್ಲಿ ಮುಂಗಾರು ಮುನಿಸಿಕೊಂಡ ಕಾರಣ ಭೀಕರ ಬರದ ಛಾಯೆ ಆವರಿಸಿದೆ. ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ಇತ್ತೇಚೆಗೆ ರಾಜ್ಯದ 195 ತಾಲೂಕುಗಳು ಬರ (drought) ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಸೋಮವಾರ ಆದೇಶ ಹೊರಡಿಸಿದ್ದಾರೆ.

ಬರಪೀಡಿತ ತಾಲ್ಲೂಕುಗಳ ಪಟ್ಟಿ ಹೀಗಿದೆ

ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ.

ಸಾಧಾರಣ ಬರಪೀಡಿತ ತಾಲ್ಲೂಕುಗಳ ಪಟ್ಟಿ ಹೀಗಿದೆ

ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು,‌ ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ,ಮಂಗಳೂರು,‌ ಮೂಡಬಿದಿರೆ, ಬ್ರಹ್ಮಾವರ, ಕಾರವಾರ.

ಇದನ್ನೂ ಓದಿ: ಕರ್ನಾಟಕದ 195 ಬರ ಪೀಡಿತ ತಾಲೂಕುಗಳು: ಸರ್ಕಾರದಿಂದ ಅಧಿಕೃತ ಘೋಷಣೆ

ಪರಿಷ್ಕೃತ ಬರ ಕೈಪಿಡಿ -2020ರಲ್ಲಿ ಹಂತ-1 ಮತ್ತು ಹಂತ-2ರಲ್ಲಿ ಸೂಚಿಸಿರುವ ಮಾನದಂಡಗಳನ್ವಯ ಪ್ರಸಕ್ತ ಮುಂಗಾರು ಅವಧಿಯಲ್ಲಿ ರಾಜ್ಯದ 236 ತಾಲೂಕಗಳ ಪೈಕಿ ಈಗಾಗಲೇ 195 ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದಿರುವ 41 ತಾಲೂಕುಗಳ ಪೈಕಿ ಹೆಚ್ಚುವರಿಯಾಗಿ 21 ತಾಲ್ಲೂಕುಗಳಲ್ಲಿ ತೀವ್ರತೆಯನ್ನು ಆಧರಿಸಿ 21 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯನ್ನು ನಿರ್ಧರಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ: 475 ಕೋಟಿ ರೂ. ನರೇಗಾ ಹಣವನ್ನ ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿ: ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಇಂದು ಸಚಿವ ಸಂಪುಟದ ಉಪ ಸಮಿತಿಯ ಶಿಫಾರಸ್ಸಿನಂತೆ ಅನುಬಂಧ-1ರಲ್ಲಿ ಹೊಸದಾಗಿ ಪ್ರಸ್ತಾಪಿಸಿರುವ 21 ತಾಲೂಕುಗಳಲ್ಲಿ ಶೇಕಡ 10 ರಷ್ಟು ಗ್ರಾಮಗಳನ್ನು ಯಾದೃಚ್ಛಿಕ ಆಗಿ ಆಯ್ಕೆ ಮಾಡಿ, ಪ್ರಮುಖ ಬೆಳೆಗಳನ್ನು ಗುರುತಿಸಿ ಪ್ರತಿ ಬೆಳೆಗಳ ಸುಮಾರು 5 sites ಇ-ಆಡಳಿತ ಅಭಿವೃದ್ಧಿ ಪಡಿಸಿರುವ ಆ್ಯಪ್​ ಮೂಲಕ ಪರೀಕ್ಷೆ ಮಾಡಿ, ಬರ ಪಿಡಿಯಲ್ಲಿ ನಮೂದಿಸಿರುವ Form No.11 ರಲ್ಲಿ ದೃಢೀಕೃತ ವರದಿಯನ್ನು ಸಂಬಂಧ ಪಟ್ಟ ಜಿಲ್ಲಾಧಿಕಾರಿಗಳು ಸಲ್ಲಿಸಿದ್ದರು. ಅದರಂತೆಯೇ ಇದೀಗ 21 ಬರಪೀಡಿತ, 22 ಸಾಧಾರಣ ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಪ್ರಕಟಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:39 pm, Mon, 9 October 23

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ