AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ಯೆಗಳ ಪರಿಷ್ಕರಣೆ ಮಾಡಿ ವೈದ್ಯಾಧಿಕಾರಿಗಳಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ..

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆ ಪರಿಷ್ಕರಣೆಯಾಗಿದೆ.

ಭತ್ಯೆಗಳ ಪರಿಷ್ಕರಣೆ ಮಾಡಿ ವೈದ್ಯಾಧಿಕಾರಿಗಳಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ..
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Dec 22, 2020 | 4:09 PM

Share

ಬೆಂಗಳೂರು: ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆ ಪರಿಷ್ಕರಣೆಯಾಗಿದೆ.

ಭಾರಿ ಪ್ರಮಾಣದಲ್ಲಿ ಸಂಬಳ ಹೆಚ್ಚಳ: ಈ ಹಿಂದೆ 2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿದ್ದ ರಾಜ್ಯ ಸರ್ಕಾರ ಇದೀಗ 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್ ಅಥವಾ ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21.000 ರೂ.ರಿಂದ 30.500 ರೂ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42.600 ರೂ.ನಿಂದ 55.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50.800 ರೂ.ನಿಂದ 64.500 ರೂ.ಗೆ ಹೆಚ್ಚಳ ಮಾಡಿದೆ.

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 22.000 ರೂ.ನಿಂದ 37.500 ರೂ. ಹಾಗೂ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 43.700 ರೂ.ನಿಂದ 64.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 52.100 ರೂ.ನಿಂದ 73.500 ರೂ.ಗೆ ಹೆಚ್ಚಳ ಮಾಡಿದೆ.

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 44.500 ರೂ. ಮತ್ತು ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 73.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 83.500 ರೂ.ಗೆ ಹೆಚ್ಚಳ ಮಾಡಿದೆ.

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 52.500 ರೂ. ಅಲ್ಲದೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 83.500 ರೂ. ಮತ್ತು ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 93.500 ರೂ.ಗೆ ಹೆಚ್ಚಳ ಮಾಡಿದೆ.

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 60.500 ರೂ. ಜೊತೆಗೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 93.500 ರೂ. ಹಾಗೂ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 1.03.500 ರೂ.ಗೆ ಹೆಚ್ಚಳ ಮಾಡಿದೆ.

ಕರ್ನಾಟಕ ಸರ್ಕಾರದ ನಡವಳಿಗಳು:

ಕಬ್ಬು ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ: ಕೇಂದ್ರ ಅನುಮೋದನೆ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ