AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭತ್ಯೆಗಳ ಪರಿಷ್ಕರಣೆ ಮಾಡಿ ವೈದ್ಯಾಧಿಕಾರಿಗಳಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ..

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆ ಪರಿಷ್ಕರಣೆಯಾಗಿದೆ.

ಭತ್ಯೆಗಳ ಪರಿಷ್ಕರಣೆ ಮಾಡಿ ವೈದ್ಯಾಧಿಕಾರಿಗಳಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ..
ಸಾಂದರ್ಭಿಕ ಚಿತ್ರ
sandhya thejappa
| Edited By: |

Updated on: Dec 22, 2020 | 4:09 PM

Share

ಬೆಂಗಳೂರು: ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆ ಪರಿಷ್ಕರಣೆಯಾಗಿದೆ.

ಭಾರಿ ಪ್ರಮಾಣದಲ್ಲಿ ಸಂಬಳ ಹೆಚ್ಚಳ: ಈ ಹಿಂದೆ 2015 ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿದ್ದ ರಾಜ್ಯ ಸರ್ಕಾರ ಇದೀಗ 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್ ಅಥವಾ ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21.000 ರೂ.ರಿಂದ 30.500 ರೂ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42.600 ರೂ.ನಿಂದ 55.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50.800 ರೂ.ನಿಂದ 64.500 ರೂ.ಗೆ ಹೆಚ್ಚಳ ಮಾಡಿದೆ.

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 22.000 ರೂ.ನಿಂದ 37.500 ರೂ. ಹಾಗೂ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 43.700 ರೂ.ನಿಂದ 64.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 52.100 ರೂ.ನಿಂದ 73.500 ರೂ.ಗೆ ಹೆಚ್ಚಳ ಮಾಡಿದೆ.

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 44.500 ರೂ. ಮತ್ತು ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 73.500 ರೂ. ಜೊತೆಗೆ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 83.500 ರೂ.ಗೆ ಹೆಚ್ಚಳ ಮಾಡಿದೆ.

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 52.500 ರೂ. ಅಲ್ಲದೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 83.500 ರೂ. ಮತ್ತು ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 93.500 ರೂ.ಗೆ ಹೆಚ್ಚಳ ಮಾಡಿದೆ.

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ ಅಥವಾ ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23.000 ರೂ.ನಿಂದ 60.500 ರೂ. ಜೊತೆಗೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44.800 ರೂ.ನಿಂದ 93.500 ರೂ. ಹಾಗೂ ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58.400 ರೂ.ನಿಂದ 1.03.500 ರೂ.ಗೆ ಹೆಚ್ಚಳ ಮಾಡಿದೆ.

ಕರ್ನಾಟಕ ಸರ್ಕಾರದ ನಡವಳಿಗಳು:

ಕಬ್ಬು ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ: ಕೇಂದ್ರ ಅನುಮೋದನೆ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?