AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆ ವೈದ್ಯರಿಗೆ ಸರ್ಕಾರದಿಂದ ಗುಡ್ ​ನ್ಯೂಸ್, ಏನದು?

ಬೆಂಗಳೂರು: ಇತ್ತೀಚೆಗಷ್ಟೇ ದೇಶದಾದ್ಯಂತ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಮಹಾಮಾರಿಯ ವಿರುದ್ಧ ಹಗಲಿರುಳು ಎನ್ನದೇ ಹೋರಾಡುತ್ತಿರುವ ವೈದ್ಯರ ಸೇವೆಯನ್ನ ಗೌರವಿಸಲಾಯಿತು. ಇದೀಗ ರಾಜ್ಯ ಸರ್ಕಾರ ತುಸು ತಡವಾಗಿ ರಾಜ್ಯದ ಗುತ್ತಿಗೆ ವೈದ್ಯರಿಗೆ ಭರ್ಜರಿ ಗಿಫ್ಟ್​ ಕೊಟ್ಟಿದೆ. ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ವೈದ್ಯರಿಗೆ ಸಂಬಳ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 504 ವೈದ್ಯರಿಗೆ ಅನುಕೂಲವಾಗಲಿದೆ.’ ಆದೇಶದಲ್ಲಿ ಸಂಬಳವನ್ನು 45 ಸಾವಿರದಿಂದ […]

ಗುತ್ತಿಗೆ ವೈದ್ಯರಿಗೆ ಸರ್ಕಾರದಿಂದ ಗುಡ್ ​ನ್ಯೂಸ್, ಏನದು?
KUSHAL V
| Edited By: |

Updated on:Jul 02, 2020 | 5:35 PM

Share

ಬೆಂಗಳೂರು: ಇತ್ತೀಚೆಗಷ್ಟೇ ದೇಶದಾದ್ಯಂತ ವೈದ್ಯರ ದಿನಾಚರಣೆಯನ್ನು ಆಚರಿಸಲಾಯಿತು. ಮಹಾಮಾರಿಯ ವಿರುದ್ಧ ಹಗಲಿರುಳು ಎನ್ನದೇ ಹೋರಾಡುತ್ತಿರುವ ವೈದ್ಯರ ಸೇವೆಯನ್ನ ಗೌರವಿಸಲಾಯಿತು. ಇದೀಗ ರಾಜ್ಯ ಸರ್ಕಾರ ತುಸು ತಡವಾಗಿ ರಾಜ್ಯದ ಗುತ್ತಿಗೆ ವೈದ್ಯರಿಗೆ ಭರ್ಜರಿ ಗಿಫ್ಟ್​ ಕೊಟ್ಟಿದೆ.

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ವೈದ್ಯರಿಗೆ ಸಂಬಳ ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ನೀಡಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 504 ವೈದ್ಯರಿಗೆ ಅನುಕೂಲವಾಗಲಿದೆ.’

ಆದೇಶದಲ್ಲಿ ಸಂಬಳವನ್ನು 45 ಸಾವಿರದಿಂದ 60 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ ಅವರ ಸೇವೆಯನ್ನ ಖಾಯಂಗೊಳಿಸುತ್ತಿಲ್ಲ ಕೇವಲ ಸಂಬಳವನ್ನ ಮಾತ್ರ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ. ಇತ್ತೀಚೆಗಷ್ಟೇ ಸಂಬಳ ಏರಿಕೆ ಹಾಗೂ ಖಾಯಂ ಕೆಲಸಕ್ಕಾಗಿ ಗ್ರಾಮೀಣ ಭಾಗದ ವೈದ್ಯರು ಪ್ರತಿಭಟನೆ ನೆಡೆಸಿದ್ದರು. ಇದೀಗ ಸರ್ಕಾರ ಅವರ ಮನವಿಗೆ ಸ್ಪಂದಿಸಿ ಆದೇಶ ಹೊರಡಿಸಿದೆ.

Published On - 4:33 pm, Thu, 2 July 20

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ