AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಂದ ಗೋಳು, ಹಬ್ಬಗಳ ಆಚರಣೆಗೆ ಬ್ರೇಕ್ ಹಾಕುತ್ತಾ ರಾಜ್ಯ ಸರ್ಕಾರ?

[lazy-load-videos-and-sticky-control id=”xPnpkXzB5wM”] ಬೆಂಗಳೂರು: ಕೊರೊನಾ ಮಾಹಾಮಾರಿಯಿಂದಾಗಿ ಈಗ ಹಬ್ಬ ಹರಿದಿನಗಳಿಗೆ ಬೀಳುತ್ತಿದೆ ಬ್ರೇಕ್‌. ಯಾಕಂದ್ರೆ ರಾಜ್ಯ ಸರ್ಕಾರ ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಹಬ್ಬಗಳ ಆಚರಣೆಯಲ್ಲಿ ಕೆಲವೊಂದಿಷ್ಟು ಮಾರ್ಪಾಡುಗಳನ್ನು ಮಾಡಲು ಮಂದಾಗಿದೆ. ಹೌದು ಕೊರೊನಾದಿಂದಾಗಿ ರಾಜ್ಯ ಸರ್ಕಾರ ಹಬ್ಬಗಳ ದುಂದು ಆಚರಣೆಗೆ ಕಡಿವಾಣ ಹಾಕಲು ಚಿಂತನೆ ನಡೆಸಿದೆ. ಈ ಸಂಬಂಧ ಮನೆಯಲ್ಲೇ ಹಬ್ಬಗಳನ್ನು ಆಚರಿಸುವಂತೆ ಮಾರ್ಗಸೂಚಿ ತರುವ ಸಾಧ್ಯತೆ ಇದೆ. ಗಣೇಶೋತ್ಸವ, ಶಾರದೋತ್ಸವ, ದೀಪಾವಳಿ ಸೇರಿ ಇತರ ಹಬ್ಬಗಳ ಅದ್ದೂರಿ ಆಚರಣೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. […]

ಕೊರೊನಾ ತಂದ ಗೋಳು, ಹಬ್ಬಗಳ ಆಚರಣೆಗೆ ಬ್ರೇಕ್ ಹಾಕುತ್ತಾ ರಾಜ್ಯ ಸರ್ಕಾರ?
Guru
| Edited By: |

Updated on:Jul 18, 2020 | 7:03 PM

Share

[lazy-load-videos-and-sticky-control id=”xPnpkXzB5wM”]

ಬೆಂಗಳೂರು: ಕೊರೊನಾ ಮಾಹಾಮಾರಿಯಿಂದಾಗಿ ಈಗ ಹಬ್ಬ ಹರಿದಿನಗಳಿಗೆ ಬೀಳುತ್ತಿದೆ ಬ್ರೇಕ್‌. ಯಾಕಂದ್ರೆ ರಾಜ್ಯ ಸರ್ಕಾರ ಕೊರೊನಾ ಹಿನ್ನೆಲೆಯಲ್ಲಿ ಈ ವರ್ಷ ಹಬ್ಬಗಳ ಆಚರಣೆಯಲ್ಲಿ ಕೆಲವೊಂದಿಷ್ಟು ಮಾರ್ಪಾಡುಗಳನ್ನು ಮಾಡಲು ಮಂದಾಗಿದೆ.

ಹೌದು ಕೊರೊನಾದಿಂದಾಗಿ ರಾಜ್ಯ ಸರ್ಕಾರ ಹಬ್ಬಗಳ ದುಂದು ಆಚರಣೆಗೆ ಕಡಿವಾಣ ಹಾಕಲು ಚಿಂತನೆ ನಡೆಸಿದೆ. ಈ ಸಂಬಂಧ ಮನೆಯಲ್ಲೇ ಹಬ್ಬಗಳನ್ನು ಆಚರಿಸುವಂತೆ ಮಾರ್ಗಸೂಚಿ ತರುವ ಸಾಧ್ಯತೆ ಇದೆ. ಗಣೇಶೋತ್ಸವ, ಶಾರದೋತ್ಸವ, ದೀಪಾವಳಿ ಸೇರಿ ಇತರ ಹಬ್ಬಗಳ ಅದ್ದೂರಿ ಆಚರಣೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಹೀಗಾಗಿ ಈ ವರ್ಷ ಸಾರ್ವಜನಿಕ ಹಬ್ಬಗಳನ್ನು ಸರಳವಾಗಿ ಆಚರಿಸುವಂತೆ ಮಾರ್ಗಸೂಚಿಯನ್ನು ಹೊರಡಿಸುವ ಸಾಧ್ಯತೆ ಇದೆ.

ಈ ಮಾರ್ಗಸೂಚಿ ಕೇಂದ್ರ ಸರ್ಕಾರದ ಸಲಹೆಯಂತೆ ಇನ್ನೆರಡು ದಿನಗಳಲ್ಲಿ ಪ್ರಕಟ‌ವಾಗುವ ನಿರೀಕ್ಷೆ ಇದೆ. ಈ ಸಂಬಂಧ ಆರೋಗ್ಯ ಇಲಾಖೆಯ ನಿರ್ದೇಶನದಂತೆ ಮುಜರಾಯಿ ಇಲಾಖೆಯಿಂದ ಶೀಘ್ರದಲ್ಲೇ ಮಾರ್ಗಸೂಚಿ ರೆಡಿಯಾಗಲಿದೆ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಬರುವ ಸಲಹೆಗಾಗಿ ಕಾಯುತ್ತಿದೆ. ಜೊತೆಗೆ ಮಾರ್ಗಸೂಚಿ ಪ್ರಕಟಿಸುವ ಮುನ್ನ ಧಾರ್ಮಿಕ ಮುಖಂಡರೊಂದಿಗೂ ಸಹ ಚರ್ಚೆ‌ ನಡೆಸಿ ಬಳಿಕವಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಶ್ರಾವಣ ಮಾಸದಲ್ಲಿ ನಾಗರಪಂಚಮಿ, ವರಲಕ್ಷ್ಮೀ ವ್ರತ, ಕೃಷ್ಣಾಷ್ಟಮಿ ಸೇರಿದಂತೆ ಅತಿ ಹೆಚ್ಚು ಹಬ್ಬಗಳು ಬರುತ್ತವೆ ಹೀಗಾಗಿ ಈ ಮಾರ್ಗಸೂಚಿ ಬೇಗ ಬರುವ ಸಾಧ್ಯತೆ ಇದೆ. ಇದರನ್ವಯ ಮಠ, ದೇವಾಲಯಗಳಲ್ಲಿ ಆಚರಿಸಲ್ಪಡುವ ಹಬ್ಬಗಳ ಆಚರಣೆಯಲ್ಲಿ ಕೆಲ ಮಟ್ಟಿನ ವ್ಯತ್ಯಯವಾಗುವ ಸಾಧ್ಯತೆ ಇದೆ. ಆದ್ರೆ ಜನರ ಗುಂಪು ಸೇರುವಿಕೆಗೆ ಕಡಿವಾಣ ಹಾಕಲು ಇಂಥ ಕ್ರಮ ಅನಿವಾರ್ಯ ಅಂತಿದೆ ರಾಜ್ಯ ಸರ್ಕಾರ.

Published On - 5:54 pm, Sat, 18 July 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​