AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರ ಇಂದಿರಾ ಕ್ಯಾಂಟೀನ್​ ಯೋಜನೆಗೆ ಎಳ್ಳುನೀರು ಬಿಡಲು ಹೊರಟಿದ್ಯಾ ಸರ್ಕಾರ?

ಬೆಂಗಳೂರು: ಬಡವರ ಹಸಿವು ನೀಗಿಸೋ ಯೋಜನೆಗೆ ಎಳ್ಳುನೀರು ಬಿಡಲು ಆಡಳಿತ ಸರ್ಕಾರ ಹೊರಟಿದ್ಯಾ ಎಂಬ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಗೆ ಸ್ಥಗಿತಗೊಳ್ಳೋ ಭಯ ಶುರುವಾಗಿದೆ. ರಿವಾರ್ಡ್,ಶೆಫ್ ಟಾಕ್ ಕಂಪನಿಗೆ ಇಂದಿರಾ ಕ್ಯಾಂಟೀನ್ ‌ಗುತ್ತಿಗೆ ನೀಡಲಾಗಿತ್ತು. ಆದರೆ ಕಳೆದ ಎಳು ತಿಂಗಳಿನಿಂದ ಕ್ವಾಂಟ್ರ್ಯಾಕ್ಟರ್​ಗೆ ಸರ್ಕಾರ ಬಿಲ್‌ ಮೊತ್ತ ಪಾವತಿಸಿಲ್ಲ. ಹೀಗಾಗಿ ಕಳೆದ ಎರಡು‌ ತಿಂಗಳಿಂದ ಇಂದಿರಾ ಕ್ಯಾಂಟಿನ್ ಕೆಲಸಗಾರರಿಗೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರು ತಮ್ಮ ಅಳಲು ತೊಡಿಕೊಂಡಿದ್ದಾರೆ. BWSSB ಬಿಲ್ […]

ಸಿದ್ದರಾಮಯ್ಯರ ಇಂದಿರಾ ಕ್ಯಾಂಟೀನ್​ ಯೋಜನೆಗೆ ಎಳ್ಳುನೀರು ಬಿಡಲು ಹೊರಟಿದ್ಯಾ ಸರ್ಕಾರ?
ಪೃಥ್ವಿಶಂಕರ
|

Updated on: Nov 16, 2020 | 5:30 PM

Share

ಬೆಂಗಳೂರು: ಬಡವರ ಹಸಿವು ನೀಗಿಸೋ ಯೋಜನೆಗೆ ಎಳ್ಳುನೀರು ಬಿಡಲು ಆಡಳಿತ ಸರ್ಕಾರ ಹೊರಟಿದ್ಯಾ ಎಂಬ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಗೆ ಸ್ಥಗಿತಗೊಳ್ಳೋ ಭಯ ಶುರುವಾಗಿದೆ.

ರಿವಾರ್ಡ್,ಶೆಫ್ ಟಾಕ್ ಕಂಪನಿಗೆ ಇಂದಿರಾ ಕ್ಯಾಂಟೀನ್ ‌ಗುತ್ತಿಗೆ ನೀಡಲಾಗಿತ್ತು. ಆದರೆ ಕಳೆದ ಎಳು ತಿಂಗಳಿನಿಂದ ಕ್ವಾಂಟ್ರ್ಯಾಕ್ಟರ್​ಗೆ ಸರ್ಕಾರ ಬಿಲ್‌ ಮೊತ್ತ ಪಾವತಿಸಿಲ್ಲ. ಹೀಗಾಗಿ ಕಳೆದ ಎರಡು‌ ತಿಂಗಳಿಂದ ಇಂದಿರಾ ಕ್ಯಾಂಟಿನ್ ಕೆಲಸಗಾರರಿಗೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರು ತಮ್ಮ ಅಳಲು ತೊಡಿಕೊಂಡಿದ್ದಾರೆ.

BWSSB ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ ಮೊದಲು ಇಂದಿರಾ ಕ್ಯಾಂಟೀನ್​ಗೆ ಡೊಮೆಸ್ಟಿಕ್ ಬಿಲ್ ದರ ವಿಧಿಸೋದಾಗಿ‌ BWSSB ಹೇಳಿತ್ತು. ಆದ್ರೆ ಅದನ್ನು ಕಾರ್ಯರೂಪಕ್ಕೆ ತರದೇ ಕಮರ್ಶಿಯಲ್ ಬಿಲ್ ನೀಡಲಾಗುತ್ತಿದೆ. ಸರ್ಕಾರ 20 ಕೋಟಿ ಹಣ ಕೊಡದ ಹಿನ್ನೆಲೆಯಿಂದಾಗಿ BWSSB ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನೀರಿನ ಸಂಪರ್ಕ ಕಡಿತಗೊಳಿಸಿದ್ದು ವಾಟರ್ ಟ್ಯಾಂಕ್ ಮೂಲಕ‌ ಜನರ ಹಸಿವು ನೀಗಿಸಲಾಗುತ್ತಿದೆ.

ಅಲ್ಲದೇ ಹಣಕಾಸಿನ ಸಮಸ್ಯೆಯಿಂದ ಮೆನು ಕೂಡ ಕಡಿತ ಮಾಡಲಾಗಿದೆ. ಹಣ ಬಿಡುಗಡೆ ಮಾಡುವಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಪತ್ರ ಬರೆದಿದೆ. ಆದ್ರೂ ಕೂಡ ಸರ್ಕಾರ ಇ‌ನ್ನು ಬಿಲ್ ಕ್ಲಿಯರ್ ಮಾಡಿಲ್ಲ. ಸರ್ಕಾರ ಬಡವರ ಹಸಿವ ನೀಗಿಸೋ ಯೋಜನೆಯನ್ನ ನಿಲ್ಲಿಸಿದ್ರೆ ಅನ್ನೊ ಆತಂಕವನ್ನು ಬಡ ಕೂಲಿ ಕಾರ್ಮಿಕ ಜನರು ವ್ಯಕ್ತಪಡಿಸುತ್ತಿದ್ದಾರೆ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!