ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ

ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆ ಮೂಲಕ  ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿದೆ.

ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ
ವಿಧಾನಸೌಧ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Feb 28, 2024 | 5:06 PM

ಬೆಂಗಳೂರು, ಫೆಬ್ರವರಿ 28: ಹೊಸ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ  ರಾಜ್ಯದ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್​ ನೀಡಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ಗ್ರಾಹಕರಿಗೆ ಬಂಪರ್​ ಕೊಡುಗೆ ನೀಡಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ. ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್​ಗೆ 40 ಪೈಸೆ ಕಡಿತ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್​ 1ರಿಂದಲೇ ಅನ್ವಯವಾಗಲಿದೆ.

ವಿದ್ಯುತ್ ದರ ಇಳಿಕೆಯ ಮಾಹಿತಿ ಹೀಗಿದೆ

  1. ಎಲ್‌ಟಿ ಡೊಮೆಸ್ಟಿಕ್ ಲೈಟಿಂಗ್: 100 ಯೂನಿಟ್‌ಗಿಂತ ಹೆಚ್ಚಿನ ಬಳಕೆಗಾಗಿ ಪ್ರತಿ ಯೂನಿಟ್‌ಗೆ 110 ಪೈಸೆ ಕಡಿಮೆ ಮಾಡಲಾಗಿದೆ.
  2. ಹೆಚ್​ಟಿ ಕಮರ್ಷಿಯಲ್: ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 1 ರೂ. 25 ಪೈಸೆ ಕಡಿಮೆ ಮಾಡಲಾಗಿದೆ. ಅಂದರೆ ಬೇಡಿಕೆಯ ಶುಲ್ಕಗಳ ಪ್ರತಿ ಕೆವಿಎಗೆ (ಕಿಲೋವೋಲ್ಟ್‌ ಆಂಪಿಯರ್‌) ರೂ.10 ರಷ್ಟು ಕಡಿಮೆ ಮಾಡಲಾಗಿದೆ. ಹೆಚ್​ಟಿ ಇಂಡಸ್ಟ್ರಿಯಲ್: ಪ್ರತಿ ಯೂನಿಟ್‌ಗೆ 50 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳ ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಿದೆ.
  3. ಹೆಚ್​ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳು ಪ್ರತಿ ರೂ.10 ರಷ್ಟು ಕಡಿಮೆಯಾಗಿದೆ.
  4. ಹೆಚ್​ಟಿ ಖಾಸಗಿ ಏತ ನೀರಾವರಿ: ಪ್ರತಿ ಯೂನಿಟ್‌ಗೆ 200 ಪೈಸೆ ಕಡಿಮೆಯಾಗಿದೆ.
  5. ಹೆಚ್​ಟಿ ವಸತಿ ಅಪಾರ್ಟ್‌ಮೆಂಟ್‌ಗಳು: ಪ್ರತಿ ಪ್ರತಿ ಕೆವಿಎಗೆ ರೂ.10 ಕಡಿಮೆಯಾಗಿದೆ.
  6. ಎಲ್​​ಟಿ ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳು: ಪ್ರತಿ ಯೂನಿಟ್‌ಗೆ 50 ಪೈಸೆ ಇಳಿಕೆ ಮಾಡಲಾಗಿದೆ.
  7. ಎಲ್​ಟಿ ಕೈಗಾರಿಕಾ ಸ್ಥಾಪನೆಗಳು: ಪ್ರತಿ ಘಟಕಕ್ಕೆ 100 ಪೈಸೆ ಕಡಿಮೆ ಮಾಡಲಾಗಿದೆ.
  8. ಎಲ್​ಟಿ ವಾಣಿಜ್ಯ ಸ್ಥಾಪನೆಗಳು: ಪ್ರತಿ ಯೂನಿಟ್‌ಗೆ 50 ರಷ್ಟು ಕಡಿಮೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:39 pm, Wed, 28 February 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ