AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರದ ಮಾಸ್ಟರ್ ​ಪ್ಲ್ಯಾನ್: ರೆಡಿಯಾಯ್ತು 2 ತಂತ್ರ

ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ಹೊಸ ಮಾಸ್ಟರ್ ​ಪ್ಲ್ಯಾನ್​ ರೂಪಿಸಲು ಮುಂದಾಗಿದೆ. ನೌಕರರು ನಾಳೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ರೆ ಸರ್ಕಾರ ಎರಡು ತಂತ್ರಗಳನ್ನು ಬಳಸಲು ಸಜ್ಜಾಗಿದೆ.

ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರದ ಮಾಸ್ಟರ್ ​ಪ್ಲ್ಯಾನ್: ರೆಡಿಯಾಯ್ತು 2 ತಂತ್ರ
ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರದ ಮಾಸ್ಟರ್ ​ಪ್ಲ್ಯಾನ್
Follow us
KUSHAL V
|

Updated on: Dec 12, 2020 | 9:05 AM

ಬೆಂಗಳೂರು: ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ಹೊಸ ಮಾಸ್ಟರ್ ​ಪ್ಲ್ಯಾನ್​ ರೂಪಿಸಲು ಮುಂದಾಗಿದೆ. ನೌಕರರು ನಾಳೆಯೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ರೆ ಸರ್ಕಾರ ಎರಡು ತಂತ್ರಗಳನ್ನು ಬಳಸಲು ಸಜ್ಜಾಗಿದೆ. ಅಂದ ಹಾಗೆ, ನೌಕರರ ಮೇಲೆ ಒತ್ತಡ ಹೇರಲು ಸರ್ಕಾರ ರೂಪಿಸಿರೋ 2 ತಂತ್ರಗಳೇನು?

ರಾಜ್ಯ ಸಾರಿಗೆ ನೌಕರರ ಮುಷ್ಕರ ಮುಂದುವರಿದ ಹಿನ್ನೆಲೆಯಲ್ಲಿ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ಖಾಸಗಿ ಚಾಲಕ ಹಾಗೂ ನಿರ್ವಾಹಕರನ್ನ ಬಳಸಿಕೊಳ್ಳಲು ಯೋಜನೆ ರೂಪಿಸಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಿನ್ನೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜೊತೆಗೆ, ನಾಳೆ ಒಳಗೆ ಕರ್ತವ್ಯಕ್ಕೆ ಹಾಜರಾಗಲು ನೌಕರರಿಗೆ ಡೆಡ್​ಲೈನ್​ ನೀಡಲಾಗಿದ್ದು ಒಂದು ವೇಳೆ ಅವರು ಮುಷ್ಕರ ಮುಂದುವರಿಸಿದರೆ ತನ್ನ ಎರಡನೇ ತಂತ್ರವಾಗಿ ಎಸ್ಮಾ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.

ತನ್ನ ಎರಡು ತಂತ್ರಗಳಿಂದ ಸಾರಿಗೆ ನೌಕರರ ಮೇಲೆ ಒತ್ತಡ ಹೇರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಇದಕ್ಕೆ ಮುಖ್ಯ ಕಾರಣ ಸರ್ಕಾರ ಇಂದು ಚರ್ಚೆ ನಡೆಸಬೇಕಾದ ಅನಿವಾರ್ಯತೆಯಲ್ಲಿದೆ. ಬೇರೆ ಪ್ರತಿಭಟನೆಗಳ ರೀತಿ ಸಾರಿಗೆ ಮುಷ್ಕರವನ್ನು ಕಡೆಗಣನೆ ಮಾಡುವುದು ಅಸಾಧ್ಯ. ಹೀಗಾಗಿ, ಸರ್ಕಾರ ಎಸ್ಮಾ ಜಾರಿಗೆ ತರುವ ಎಚ್ಚರಿಕೆ ನೀಡಿದೆ.

ಅಂದ ಹಾಗೆ, ಸಿದ್ದರಾಮಯ್ಯ ಸರ್ಕಾರದಲ್ಲೂ ಸಾರಿಗೆ ನೌಕರರ ಪ್ರತಿಭಟನೆ ವಿಕೋಪಕ್ಕೆ ತಿರುಗಿತ್ತು. ಆದರೆ, ನಾಲ್ಕೈದು ದಿನಗಳ ಬಳಿಕ ಮಾತುಕತೆ ಮೂಲಕ ಸಮಸ್ಯೆ ನಿವಾರಣೆಯಾಗಿತ್ತು.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು