ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ […]

ಕೆಲಸದ ಅವಧಿ ಮೊದಲಿನಂತೆ 8 ಗಂಟೆ ಮಾತ್ರ, ರಾಜ್ಯದ ಮಹತ್ವದ ನಿರ್ಧಾರ
ಸಾಧು ಶ್ರೀನಾಥ್​

Updated on: Jun 12, 2020 | 3:17 PM

ಬೆಂಗಳೂರು: ಮಹತ್ವಪೂರ್ಣ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಕಾರ್ಮಿಕರ ಕೆಲಸದ ಸಮಯವನ್ನ ಮತ್ತೇ 8 ಗಂಟೆಗೆ ಇಳಿಸಿದೆ. ಈ ಸಂಬಂಧ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಕೋವಿಡ್‌-19 ನಿಮಿತ್ತ ವಿಧಿಸಿದ್ದ ಲಾಕ್‌ಡೌನ್‌ ಸಮಯದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನ 8 ಗಂಟೆಯಿಂದ 10 ಗಂಟೆಗೆ ಏರಿಸಿತ್ತು. ಇದು ಕಾರ್ಮಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹಲವಾರು ಕಾರ್ಮಿಕ ಸಂಘಟನೆಗಳು ಮತ್ತು ಕಾರ್ಮಿಕ ಮುಖಂಡರು ಸರಕಾರಕ್ಕೆ ಮನವಿ ಮಾಡಿ ಕೆಲಸದ ಅವಧಿ ವಿಸ್ತರಣೆಯನ್ನ ಹಿಂದಕ್ಕೆ ಪಡೆಯಲು ಆಗ್ರಹಿಸಿದ್ದರು. ಕೆಲವರು ಈ ಸಂಬಂಧ ಕೋರ್ಟ್‌ ಮೆಟ್ಟಿಲು ಕೂಡಾ ಏರಿದ್ದರು.

ಈ ಸಮಯದಲ್ಲಿ ಸುಮೋಟೋ ಬಳಸಿ ಸರಕಾರ ಪ್ರಕರಣವನ್ನ ಹಿಂಪಡೆದಿತ್ತು. ನಂತರ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಕಾರ್ಮಿಕ ಸಚಿವರು, ಕೆಲಸದ ಅವಧಿ ವಿಸ್ತರಣೆಯನ್ನ ಹಿಂಪಡೆದು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೊದಲಿನಂತೆ 8 ಗಂಟೆಗೆ ಇಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us