AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ‘Y’ ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಭೆ ಸಮಾರಂಭ, ಕಾರ್ಯಕ್ರಮ ಉದ್ಘಾಟನೆ, ಧನ ಸಂಗ್ರಹ ಕಚೇರಿ ತೆರೆಯುತ್ತಿದ್ದಾರೆ.

ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ 'Y' ಶ್ರೇಣಿಯ ಭದ್ರತೆ ನೀಡಿದ ರಾಜ್ಯ ಸರ್ಕಾರ
ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀ
ಪೃಥ್ವಿಶಂಕರ
|

Updated on:Jan 01, 2021 | 4:25 PM

Share

ಉಡುಪಿ: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ನ ವಿಶ್ವಸ್ಥ ಮಂಡಳಿಯಲ್ಲಿರುವ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ‘ವೈ’ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.

ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತಾಗಿರುವ ಶ್ರೀಗಳು ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಅಲ್ಲಲ್ಲಿ ಸಭೆ ಸಮಾರಂಭ, ಕಾರ್ಯಕ್ರಮ ಉದ್ಘಾಟನೆ, ಧನ ಸಂಗ್ರಹ ಕಚೇರಿ ತೆರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಸೂಕ್ತ ಭಧ್ರತೆ ಒದಗಿಸುವ ಹಿನ್ನೆಲೆಯಲ್ಲಿ ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಪೇಜಾವರಶ್ರೀ ಗಳಿಗೆ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಿದ್ದಾರೆ. ಸ್ವಾಮೀಜಿಯವರ ವಾಹನಕ್ಕೆ ಒಂದು ಪೊಲೀಸ್ ವಾಹನದ ಬೆಂಗಾವಲು ವ್ಯವಸ್ಥೆ ಇನ್ನು ಮುಂದೆ ಇರಲಿದೆ.

ಭದ್ರತೆ ಒದಗಿಸಿದ್ದಕ್ಕಾಗಿ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಡುಪಿ ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಉಡುಪಿ ಪೇಜಾವರ ಮಠ ಕೃತಜ್ಞತೆ ಸಲ್ಲಿಸಿದೆ.

Published On - 4:24 pm, Fri, 1 January 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!